ಬ್ರೇಕಿಂಗ್ ನ್ಯೂಸ್
02-06-22 04:20 pm Mangalore Correspondent ಕರಾವಳಿ
ಪುತ್ತೂರು, ಜೂನ್ 2: ಉಪ್ಪಿನಂಗಡಿ ಸರಕಾರಿ ಕಾಲೇಜಿನಲ್ಲಿ ಆರು ವಿದ್ಯಾರ್ಥಿನಿಯರನ್ನು ಅಮಾನತು ಮಾಡಿರುವ ಬಗ್ಗೆ ವರದಿ ಮಾಡಲು ತೆರಳಿದ್ದ ಇಬ್ಬರು ಪತ್ರಕರ್ತರಿಗೆ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆಗೈದು ಗೂಂಡಾಗಿರಿ ತೋರಿದ ಘಟನೆ ನಡೆದಿದೆ.
ನ್ಯೂಸ್ 18 ಕನ್ನಡದ ಪುತ್ತೂರು ವರದಿಗಾರ ಅಜಿತ್ ಪುತ್ತೂರು ಮತ್ತು ಸ್ಥಳೀಯ ವಾಹಿನಿ ವರದಿಗಾರ ಪ್ರವೀಣ್ ಬೊಳುವಾರು ಜೊತೆಯಾಗಿ ಉಪ್ಪಿನಂಗಡಿ ಸರಕಾರಿ ಕಾಲೇಜಿಗೆ ತೆರಳಿದ್ದರು. ವಿದ್ಯಾರ್ಥಿನಿಯರನ್ನು ಡಿಬಾರ್ ಮಾಡಿದ ಬಗ್ಗೆ ಕಾಲೇಜಿನ ಪ್ರಾಂಶುಪಾಲರ ಹೇಳಿಕೆ ಪಡೆದು ಹಿಂತಿರುಗುತ್ತಿದ್ದಾಗ, ಎರಡು ಗುಂಪುಗಳು ಎದುರಾಗಿದ್ದವು. ಒಂದು ಕಡೆಯಿಂದ ಕೇಸರಿ ಶಾಲು ಹಾಕಿದ್ದ ಗುಂಪು ಮತ್ತು ಇನ್ನೊಂದು ಕಡೆ ಹಿಜಾಬ್ ಪರವಾಗಿದ್ದ ಗುಂಪು ಇತ್ತು.

ಕಾಲೇಜಿನ ಆವರಣದಲ್ಲಿ ಗುಂಪು ಸೇರಿದ್ದನ್ನು ವಿಡಿಯೋ ರೆಕಾರ್ಡ್ ಮಾಡಲು ಮುಂದಾಗಿದ್ದ ಅಜಿತ್ ಮೇಲೆ ವಿದ್ಯಾರ್ಥಿಗಳ ಒಂದು ಗುಂಪು ದೂಡಿಕೊಂಡು ಬಂದಿದ್ದು, ಬಳಿಕ ಕೋಣೆಯೊಂದಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ಕಾಲೇಜಿನಿಂದ ಹೊರಗೆ ಹೋಗಲು ಬಿಡದೆ ದಿಗ್ಬಂಧನ ಹಾಕಿದ್ದಾರೆ. ಬಳಿಕ ಕ್ಯಾಮರಾದಲ್ಲಿ ರೆಕಾರ್ಡ್ ಮಾಡಿದ್ದ ವಿಡಿಯೋವನ್ನು ಬಲವಂತದಿಂದ ಡಿಲೀಟ್ ಮಾಡಿಸಿದ್ದಾರೆ. ಈ ಬಗ್ಗೆ ಹೊರಗೆ ಎಲ್ಲಿಯಾದರೂ ಹೇಳಿದಲ್ಲಿ ಕೊಲ್ಲುವ ಬೆದರಿಕೆಯನ್ನೂ ಒಡ್ಡಿದ್ದಾರೆ.

ಈ ಬಗ್ಗೆ ವರದಿಗಾರ ಅಜಿತ್, ಉಪ್ಪಿನಂಗಡಿ ಠಾಣೆಯಲ್ಲಿ ಪೊಲೀಸ್ ದೂರು ನೀಡಿದ್ದಾರೆ. ಕಾಲೇಜಿನ ಸಿಸಿಟಿವಿಯಲ್ಲಿ ವಿದ್ಯಾರ್ಥಿಗಳ ಗುಂಪಿನ ಗೂಂಡಾಗಿರಿ ದಾಖಲಾಗಿದ್ದು, ಅದನ್ನು ಆಧರಿಸಿ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳೊಂದಿಗೆ ಮಧ್ಯವಯಸ್ಕ ವ್ಯಕ್ತಿಯೊಬ್ಬ ಇದ್ದು, ಕಾಲೇಜಿನ ಹೊರಗಿನ ವ್ಯಕ್ತಿಯಾಗಿದ್ದು ಆತನೇ ಗೂಂಡಾಗಿರಿಗೆ ಕುಮ್ಮಕ್ಕು ನೀಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಉಪ್ಪಿನಂಗಡಿ ; ಹಿಜಾಬ್ ತೆಗೆಯಲ್ಲ ಎಂದು ಪಟ್ಟು ಹಿಡಿದ ಆರು ವಿದ್ಯಾರ್ಥಿನಿಯರು ಅಮಾನತು
Uppinangady six Muslim students suspended over Hijab, News 18 Puttur Stringer Ajith journalist assaulted by PFI youths for recording visuals. He was locked inside a classroom and made him delete the video footage. The students also issued life threat. A case has been registered at Uppinangdy Police Station.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm