ಬ್ರೇಕಿಂಗ್ ನ್ಯೂಸ್
03-06-22 11:42 am Mangalore Correspondent ಕರಾವಳಿ
ಮಂಗಳೂರು, ಜೂನ್ 3 : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ದೇಶದ ಅಭಿವೃದ್ಧಿಯನ್ನು ಸಹಿಸದ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ನಡೆಸುತ್ತಿರುವ ಕಾಶ್ಮೀರ ಪಂಡಿತರ ಹತ್ಯೆ ಖಂಡನೀಯ. ಜಮ್ಮು ಕಾಶ್ಮೀರದಲ್ಲಿ ಶಾಂತಿಯಿಂದ ಬದುಕು ಕಟ್ಟಿಕೊಳ್ಳಲು ಬಯಸುವ ಅಲ್ಲಿಯ ನಾಗರಿಕರಿಗೂ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳಿಂದ ನೆಮ್ಮದಿಯ ಜೀವನ ಸಾಗಿಸಲು ಕಷ್ಟವಾಗಲಿದ್ದು ಇಸ್ಲಾಮ್ ಧರ್ಮಕ್ಕೆ ಕಳಂಕ ತರುವ ಪಾಕಿಸ್ತಾನ್ ಬೆಂಬಲಿತ ಭಯೋತ್ಪಾದಕರ ವಿರುದ್ಧ ರಾಷ್ಟ್ರ ಮಟ್ಟದಲ್ಲಿ ಮುಸ್ಲಿಂ ಧರ್ಮಗಳ ನಾಯಕತ್ವದಲ್ಲಿ ಉಗ್ರ ಪ್ರತಿಭಟನೆ ನಡೆಯುವಂತಾಗಬೇಕು. ರಾಷ್ಟ್ರಭಕ್ತ ಎಲ್ಲಾ ಮುಸ್ಲಿಂ ಸಂಘಟನೆಗಳು ದೇಶದ ಏಕತೆಗಾಗಿ ಹಾಗೂ ಪಾಕಿಸ್ತಾನಕ್ಕೆ ನೇರ ಸಂದೇಶ ನೀಡಲು ಒಗ್ಗಟ್ಟಾಗಬೇಕೆಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರು, ಬಿಜೆಪಿ ಮುಖಂಡರೂ ಆದ ರಹೀಮ್ ಉಚ್ಚಿಲ್ ಮುಸ್ಲಿಂ ಧರ್ಮಗುರುಗಳು ಹಾಗೂ ಮುಸ್ಲಿಂ ಸಂಘಟನೆಗಳಿಗೆ ಆಗ್ರಹಿಸಿದ್ದಾರೆ.
ಭಾರತದ ಆಂತರಿಕ ಸಮಸ್ಯೆ ಏನೇ ಇದ್ದರೂ ಪರಸ್ಪರ ಬಗೆಹರಿಸಲು ನಾವು ಶಕ್ತರಿದ್ದೇವೆ. ಆದರೆ ಶತ್ರು ದೇಶದಂತೆ ವ್ಯವಹರಿಸುತ್ತಿರುವ ಪಾಕಿಸ್ತಾನ ನಮ್ಮ ಸಹನೆಯನ್ನು ಪರೀಕ್ಷಿಸುತ್ತಿದ್ದು ಭಾರತದ ಮುಸಲ್ಮಾನರು ಒಗ್ಗೂಡಿ ಇಂತಹ ಕೃತ್ಯವನ್ನು ಗಟ್ಟಿ ದನಿಯಲ್ಲಿ ವಿರೋಧಿಸಬೇಕಾಗಿದೆ. ಇದಕ್ಕೆ ಪಂಥ ಪಂಗಡ ಹಾಗೂ ರಾಜಕೀಯ ಬದಿಗಿಟ್ಟು ಧಾರ್ಮಿಕ ನಾಯಕರ ಮುಖಂಡತ್ವದಲ್ಲಿ ಒಂದಾಗಬೇಕು ಎಂದು ಸಮಾಜ ಬಾಂಧವರಲ್ಲಿ ಮನವಿ ಮಾಡಿದ್ದಾರೆ.
ಈ ಹಿಂದೆ ಕಾರ್ಗಿಲ್ ಯುದ್ಧ ಸಂದರ್ಭದಲ್ಲಿ ಪಾಕಿಸ್ತಾನದ ಜೊತೆ ಯುದ್ಧ ಘೋಷಣೆಯಾದರೆ ಭಾರತದ ಮುಸಲ್ಮಾನರು ದೇಶಕ್ಕಾಗಿ ಪ್ರಾಣ ಅರ್ಪಿಸಲು ಸಿದ್ದರಾಗಿ ಎಂದು ಕರೆ ನೀಡಿದ ಅಂದಿನ ಮೌಲಾನಗಳು ಅದೇ ಮಾತನ್ನು ಮತ್ತೊಮ್ಮೆ ತಮ್ಮ ಸಮಾಜ ಬಾಂಧವರಿಗೆ ಕರೆ ನೀಡುವ ಕಾಲ ಸನ್ನಿಹಿತವಾಗಿದೆ. ಪಾಕಿಸ್ತಾನ ಹಾಗೂ ಅದರ ಬೆಂಬಲಿತರ ಉಪಟಳ ಹೆಚ್ಚಾಗುವಾಗ ಇಂತಹ ಕರೆ ದೇಶದ ಹಿತದೃಷ್ಟಿಯಿಂದ ಅಗತ್ಯವಾಗಿ ಬೇಕಾಗಿದೆ ಎಂದು ರಹೀಮ್ ಉಚ್ಚಿಲ್ ಹೇಳಿದ್ದಾರೆ.
ಭಯೋತ್ಪಾದಕರ ಈ ಹೀನ ಕೃತ್ಯಕ್ಕೂ ಇಸ್ಲಾಮ್ ಧರ್ಮಕ್ಕೂ ಯಾವ ಸಂಬಂಧವೂ ಇಲ್ಲ. ಬಿನ್ ಲ್ಯಾಡನ್, ಮುಲ್ಲಾ ಉಮರ್ ರಂತವರ ಅನುಯಾಯಿಗಳಿಂದ ಮಾತ್ರ ಇಂತಹ ಕೃತ್ಯ ಸಾಧ್ಯವೇ ಹೊರತು ಪ್ರವಾದಿ ಮುಹಮ್ಮದರ ಅನುಯಾಯಿಗಳಿಂದ ಇದು ಸಾಧ್ಯವಿಲ್ಲ. ಮುಸ್ಲಿಂ ಸಮಾಜ ಒಂದಾಗಿ ನಮ್ಮವರೇ ಆದ ಕಾಶ್ಮೀರ ಪಂಡಿತರ ನೈತಿಕ ಬೆಂಬಲಕ್ಕೆ ನಿಲ್ಲಬೇಕು ಎಂದು ಮಾಧ್ಯಮ ಪ್ರಕಟಣೆಯಲ್ಲಿ ರಹೀಂ ಉಚ್ಚಿಲ್ ತಿಳಿಸಿದ್ದಾರೆ.
Mangalore Rahim Uchil slams Kashmir targeted killing, says Pak behind it. A Hindu teacher from Jammu’s Samba district, posted in Kashmir Valley’s Kulgam, was shot dead just outside the school by militants on Tuesday morning. Target killings have left seven civilians dead this month in the Valley.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm