ಬ್ರೇಕಿಂಗ್ ನ್ಯೂಸ್
03-06-22 08:17 pm Mangalore Correspondent ಕರಾವಳಿ
ಬೆಳ್ತಂಗಡಿ, ಜೂನ್ 3: ದೇವಸ್ಥಾನದ ಜಾತ್ರೆ, ಉತ್ಸವಗಳಲ್ಲಿ ಇತ್ತೀಚೆಗೆ ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧಿಸಿ ಅಭಿಯಾನ ನಡೆಸಿದ್ದು ಜಾತ್ರೆಗಳ ಸೀಸನ್ ಮುಗಿಯುತ್ತಿದ್ದಂತೆ ತಣ್ಣಗಾಗಿತ್ತು. ಇದೀಗ ಪ್ರಸಿದ್ಧ ಕಾರಣಿಕ ಕ್ಷೇತ್ರ ಎಂದೇ ಖ್ಯಾತಿ ಗಳಿಸಿರುವ ಧರ್ಮಸ್ಥಳ ಬಳಿಯ ಸೌತಡ್ಕ ಮಹಾಗಣಪತಿ ಕ್ಷೇತ್ರದ ಆವರಣದಲ್ಲಿ ಹೊಸತೊಂದು ಅಭಿಯಾನ ಶುರುವಾಗಿದೆ. ಅನ್ಯಮತೀಯರು ಆಟೋ, ಟ್ಯಾಕ್ಸಿಗಳಲ್ಲಿ ಭಕ್ತರನ್ನು ಕರೆದುಕೊಂಡು ಬರಬಾರದು ಅನ್ನುವ ರೀತಿಯ ಫಲಕಗಳನ್ನು ಸೌತಡ್ಕ ಬಳಿಯ ರಸ್ತೆ ಬದಿಗಳಲ್ಲಿ ಹಾಕಲಾಗಿದೆ.
ವಿಶ್ವ ಹಿಂದು ಪರಿಷತ್, ಬಜರಂಗದಳ, ಹಿಂದು ಜಾಗರಣ ವೇದಿಕೆ ಎಂಬ ಹೆಸರಲ್ಲಿ ಫಲಕ ಹಾಕಲಾಗಿದ್ದು, ಹಿಂದುಯೇತರರಿಗೆ ಸೌತಡ್ಕ ದೇವಸ್ಥಾನಕ್ಕೆ ಆಟೋ, ಟ್ಯಾಕ್ಸಿ ಮಾಡಬಾರದು ಎಂದು ಫರ್ಮಾನು ವಿಧಿಸಲಾಗಿದೆ. ಸೌತಡ್ಕದಲ್ಲಿ ಅನ್ಯಕೋಮಿನವರು ದೇವಸ್ಥಾನಕ್ಕೆ ಪ್ರವೇಶಿಸಿ ಹಿಂದು ಯುವತಿಯರನ್ನು ಲವ್ ಜಿಹಾದ್ ನಡೆಸಿದ್ದು ಕಂಡುಬಂದಿದೆ. ಹೀಗಾಗಿ ಹಿಂದುಯೇತನ ಜನರ ಆಟೋ, ಟ್ಯಾಕ್ಸಿ ಇನ್ನಿತರ ಯಾವುದೇ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಬರೆಯಲಾಗಿದೆ.

ಸೌತಡ್ಕ ದೇವಸ್ಥಾನವು ಮುಜರಾಯಿ ಇಲಾಖೆಗೆ ಸೇರಿದ ಕ್ಷೇತ್ರವಾಗಿದ್ದು ಈ ಫಲಕ ಹಾಕಿದ್ದಕ್ಕೂ ದೇವಸ್ಥಾನಕ್ಕೂ ಸಂಬಂಧ ಇರುವುದಿಲ್ಲ. ದೇವಸ್ಥಾನಕ್ಕೆ ಬರುವ ಆಸುಪಾಸಿನ ರಸ್ತೆಗಳ ಬದಿ ಫಲಕ ಹಾಕಿರುವುದು ಕಂಡುಬಂದಿದೆ. ಇತ್ತೀಚೆಗೆ ದೇವಸ್ಥಾನಗಳ ಜಾತ್ರೆ ಸಂದರ್ಭದಲ್ಲಿ ಹಿಂದುಯೇತರ ವ್ಯಕ್ತಿಗಳು ವ್ಯಾಪಾರ ಮಾಡಬಾರದು ಎಂದು ಪುತ್ತೂರು ಸೇರಿದಂತೆ ಕೆಲವು ಮುಜರಾಯಿ ದೇವಸ್ಥಾನಗಳ ಹೊರಭಾಗದಲ್ಲಿ ಇದೇ ರೀತಿ ಬ್ಯಾನರ್ ಹಾಕಲಾಗಿತ್ತು. ಈ ವಿಚಾರದಲ್ಲಿ ಭಾರೀ ಟೀಕೆಯೂ ಕೇಳಿಬಂದಿತ್ತು. ಬಡ ವ್ಯಾಪಾರಿಗಳ ಹೊಟ್ಟೆಗೆ ಹೊಡೆಯುವ ಕೆಲಸ ಎಂದು ಟೀಕಿಸಲಾಗಿತ್ತು. ಆನಂತರ ಜಾತ್ರೆ ಸೀಸನ್ ಕಡಿಮೆಯಾಗುತ್ತಿದ್ದಂತೆ ಅದರ ಕಾವು ಕಡಿಮೆಯಾಗಿತ್ತು.
ಇತ್ತೀಚೆಗೆ ಸೌತಡ್ಕಕ್ಕೆ ಬಂದಿದ್ದ ಯುವತಿಯೊಬ್ಬಳನ್ನು ಸ್ಥಳೀಯ ಆಟೋ ಚಾಲಕನೊಬ್ಬ ಪ್ರೀತಿಯ ಬಲೆಗೆ ಬೀಳಿಸಿ ಮದುವೆಯಾಗಿದ್ದಾನೆ ಎನ್ನುವ ಸುದ್ದಿ ಹರಡಿತ್ತು. ಇದೇ ವಿಚಾರವನ್ನು ಮುಂದಿಟ್ಟು ಹಿಂದು ಸಂಘಟನೆಗಳು ಹಿಂದುಯೇತರ ವ್ಯಕ್ತಿಗಳು ಆಟೋ, ಟ್ಯಾಕ್ಸಿ ಮಾಡಬಾರದು ಎಂದು ಹೊಸ ಅಭಿಯಾನ ಶುರು ಮಾಡಿದ್ದಾರೆ. ಲವ್ ಜಿಹಾದ್ ಕೃತ್ಯದ ನೆಪದಲ್ಲಿ ಈ ರೂಪದಲ್ಲಿ ಪ್ರತೀಕಾರ ತೀರಿಸಲು ಹಿಂದು ಸಂಘಟನೆ ಕಾರ್ಯಕರ್ತರು ಹೊರಟಿದ್ದಾರೆ.
Mangalore No entry for Muslim taxi and auto at Sowthadka temple at Dharmasthala in Dakshina Kannada, VHP installs notice board after Muslim auto driver tried to trap a Bangalore Hindu girl by love jihad says VHP.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm