ಬ್ರೇಕಿಂಗ್ ನ್ಯೂಸ್
05-06-22 08:00 pm Mangalore Correspondent ಕರಾವಳಿ
ಮಂಗಳೂರು, ಜೂನ್ 5: ಪನಾಮಾ ದೇಶಕ್ಕೆ ಸೇರಿದ ಹಡಗಿನಲ್ಲಿ ಕ್ಯಾಪ್ಟನ್ ಆಗಿದ್ದ ಚೀನಾ ಮೂಲದ ಅಧಿಕಾರಿ ಅರಬ್ಬೀ ಸಮುದ್ರದಲ್ಲಿ ನಾಪತ್ತೆಯಾಗಿರುವ ಘಟನೆ ನಡೆದಿದ್ದು ಈ ಬಗ್ಗೆ ಮಂಗಳೂರಿನ ಕರಾವಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 10 ರಂದು ಸುರತ್ಕಲ್ ಕಡಲ ತೀರದಿಂದ 70 ನಾಟಿಕಲ್ ಮೈಲು ದೂರದ ಸಮುದ್ರ ಮಧ್ಯೆ ಹಡಗು ಸಾಗುತ್ತಿದ್ದಾಗ ಚೀನಾ ಮೂಲದ ಅಧಿಕಾರಿ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ನಾಪತ್ತೆಯಾದ ಅಧಿಕಾರಿಯನ್ನು ಕ್ಷು ಜುನ್ ಫೇಂಗ್ (52) ಎಂದು ಗುರುತಿಸಲಾಗಿದೆ.
ಚೀನಾದ ಝುನ್ ಪೇ ಬಂದರಿನಿಂದ ಸಿಂಗಾಪುರ ಮಾರ್ಗವಾಗಿ ಶ್ರೀಲಂಕಾಕ್ಕೆ ಬಂದಿದ್ದ ಹಡಗು ಅಲ್ಲಿಂದ ಗುಜರಾತಿನ ಮುಂಡ್ರಾ ಬಂದರಿನತ್ತ ತೆರಳುತ್ತಿತ್ತು. ಮೇ 10ರಂದು ರಾತ್ರಿ 1.10ರ ಸುಮಾರಿಗೆ ಅರಬ್ಬೀ ಸಮುದ್ರದಲ್ಲಿ ಹಡಗು ತೆರಳುತ್ತಿದ್ದ ಅಧಿಕಾರಿ ಕಾಣೆಯಾಗಿರುವ ಬಗ್ಗೆ ಮೇ 28ರಂದು ಗುಜರಾತ್ ಪೊಲೀಸರಿಗೆ ದೂರು ನೀಡಲಾಗಿದೆ. ಹಡಗು ಗುಜರಾತ್ ತಲುಪಿದ 15 ದಿನದ ಬಳಿಕ ಇತರೇ ಸಿಬಂದಿ ಅಲ್ಲಿ ನಾಪತ್ತೆ ದೂರು ನೀಡಿದ್ದರು.
ಗುಜರಾತ್ ಪೊಲೀಸರು ಮಂಗಳೂರು ಕೋಸ್ಟ್ ಗಾರ್ಡ್ಗೆ ಮಾಹಿತಿ ನೀಡಿದ್ದು ಜೂ.1ರಂದು ಮಂಗಳೂರಿನ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರುವ ಚೀನೀ ಪ್ರಜೆಯ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ಮಂಗಳೂರು ಕರಾವಳಿ ಪೊಲೀಸ್ ಠಾಣೆ 9480800574 ಅಥವಾ ಕರಾವಳಿ ಕಾವಲು ಪೊಲೀಸ್ ಕಂಟ್ರೋಲ್ ರೂಂ 0820-2538100 ಸಂಪರ್ಕಿಸಬಹುದು ಎಂದು ಕರಾವಳಿ ಕಾವಲು ಪೊಲೀಸರು ತಿಳಿಸಿದ್ದಾರೆ.
China based ship captain goes missing in Mangalore, missing case filed at Coastal Police station. The missing person has been identified as Shu Ju Ping (52).
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm