ಬ್ರೇಕಿಂಗ್ ನ್ಯೂಸ್
05-06-22 08:00 pm Mangalore Correspondent ಕರಾವಳಿ
ಮಂಗಳೂರು, ಜೂನ್ 5: ಪನಾಮಾ ದೇಶಕ್ಕೆ ಸೇರಿದ ಹಡಗಿನಲ್ಲಿ ಕ್ಯಾಪ್ಟನ್ ಆಗಿದ್ದ ಚೀನಾ ಮೂಲದ ಅಧಿಕಾರಿ ಅರಬ್ಬೀ ಸಮುದ್ರದಲ್ಲಿ ನಾಪತ್ತೆಯಾಗಿರುವ ಘಟನೆ ನಡೆದಿದ್ದು ಈ ಬಗ್ಗೆ ಮಂಗಳೂರಿನ ಕರಾವಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 10 ರಂದು ಸುರತ್ಕಲ್ ಕಡಲ ತೀರದಿಂದ 70 ನಾಟಿಕಲ್ ಮೈಲು ದೂರದ ಸಮುದ್ರ ಮಧ್ಯೆ ಹಡಗು ಸಾಗುತ್ತಿದ್ದಾಗ ಚೀನಾ ಮೂಲದ ಅಧಿಕಾರಿ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ನಾಪತ್ತೆಯಾದ ಅಧಿಕಾರಿಯನ್ನು ಕ್ಷು ಜುನ್ ಫೇಂಗ್ (52) ಎಂದು ಗುರುತಿಸಲಾಗಿದೆ.
ಚೀನಾದ ಝುನ್ ಪೇ ಬಂದರಿನಿಂದ ಸಿಂಗಾಪುರ ಮಾರ್ಗವಾಗಿ ಶ್ರೀಲಂಕಾಕ್ಕೆ ಬಂದಿದ್ದ ಹಡಗು ಅಲ್ಲಿಂದ ಗುಜರಾತಿನ ಮುಂಡ್ರಾ ಬಂದರಿನತ್ತ ತೆರಳುತ್ತಿತ್ತು. ಮೇ 10ರಂದು ರಾತ್ರಿ 1.10ರ ಸುಮಾರಿಗೆ ಅರಬ್ಬೀ ಸಮುದ್ರದಲ್ಲಿ ಹಡಗು ತೆರಳುತ್ತಿದ್ದ ಅಧಿಕಾರಿ ಕಾಣೆಯಾಗಿರುವ ಬಗ್ಗೆ ಮೇ 28ರಂದು ಗುಜರಾತ್ ಪೊಲೀಸರಿಗೆ ದೂರು ನೀಡಲಾಗಿದೆ. ಹಡಗು ಗುಜರಾತ್ ತಲುಪಿದ 15 ದಿನದ ಬಳಿಕ ಇತರೇ ಸಿಬಂದಿ ಅಲ್ಲಿ ನಾಪತ್ತೆ ದೂರು ನೀಡಿದ್ದರು.
ಗುಜರಾತ್ ಪೊಲೀಸರು ಮಂಗಳೂರು ಕೋಸ್ಟ್ ಗಾರ್ಡ್ಗೆ ಮಾಹಿತಿ ನೀಡಿದ್ದು ಜೂ.1ರಂದು ಮಂಗಳೂರಿನ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರುವ ಚೀನೀ ಪ್ರಜೆಯ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ಮಂಗಳೂರು ಕರಾವಳಿ ಪೊಲೀಸ್ ಠಾಣೆ 9480800574 ಅಥವಾ ಕರಾವಳಿ ಕಾವಲು ಪೊಲೀಸ್ ಕಂಟ್ರೋಲ್ ರೂಂ 0820-2538100 ಸಂಪರ್ಕಿಸಬಹುದು ಎಂದು ಕರಾವಳಿ ಕಾವಲು ಪೊಲೀಸರು ತಿಳಿಸಿದ್ದಾರೆ.
China based ship captain goes missing in Mangalore, missing case filed at Coastal Police station. The missing person has been identified as Shu Ju Ping (52).
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm