ಬ್ರೇಕಿಂಗ್ ನ್ಯೂಸ್
05-06-22 08:00 pm Mangalore Correspondent ಕರಾವಳಿ
ಮಂಗಳೂರು, ಜೂನ್ 5: ಪನಾಮಾ ದೇಶಕ್ಕೆ ಸೇರಿದ ಹಡಗಿನಲ್ಲಿ ಕ್ಯಾಪ್ಟನ್ ಆಗಿದ್ದ ಚೀನಾ ಮೂಲದ ಅಧಿಕಾರಿ ಅರಬ್ಬೀ ಸಮುದ್ರದಲ್ಲಿ ನಾಪತ್ತೆಯಾಗಿರುವ ಘಟನೆ ನಡೆದಿದ್ದು ಈ ಬಗ್ಗೆ ಮಂಗಳೂರಿನ ಕರಾವಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 10 ರಂದು ಸುರತ್ಕಲ್ ಕಡಲ ತೀರದಿಂದ 70 ನಾಟಿಕಲ್ ಮೈಲು ದೂರದ ಸಮುದ್ರ ಮಧ್ಯೆ ಹಡಗು ಸಾಗುತ್ತಿದ್ದಾಗ ಚೀನಾ ಮೂಲದ ಅಧಿಕಾರಿ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ನಾಪತ್ತೆಯಾದ ಅಧಿಕಾರಿಯನ್ನು ಕ್ಷು ಜುನ್ ಫೇಂಗ್ (52) ಎಂದು ಗುರುತಿಸಲಾಗಿದೆ.
ಚೀನಾದ ಝುನ್ ಪೇ ಬಂದರಿನಿಂದ ಸಿಂಗಾಪುರ ಮಾರ್ಗವಾಗಿ ಶ್ರೀಲಂಕಾಕ್ಕೆ ಬಂದಿದ್ದ ಹಡಗು ಅಲ್ಲಿಂದ ಗುಜರಾತಿನ ಮುಂಡ್ರಾ ಬಂದರಿನತ್ತ ತೆರಳುತ್ತಿತ್ತು. ಮೇ 10ರಂದು ರಾತ್ರಿ 1.10ರ ಸುಮಾರಿಗೆ ಅರಬ್ಬೀ ಸಮುದ್ರದಲ್ಲಿ ಹಡಗು ತೆರಳುತ್ತಿದ್ದ ಅಧಿಕಾರಿ ಕಾಣೆಯಾಗಿರುವ ಬಗ್ಗೆ ಮೇ 28ರಂದು ಗುಜರಾತ್ ಪೊಲೀಸರಿಗೆ ದೂರು ನೀಡಲಾಗಿದೆ. ಹಡಗು ಗುಜರಾತ್ ತಲುಪಿದ 15 ದಿನದ ಬಳಿಕ ಇತರೇ ಸಿಬಂದಿ ಅಲ್ಲಿ ನಾಪತ್ತೆ ದೂರು ನೀಡಿದ್ದರು.
ಗುಜರಾತ್ ಪೊಲೀಸರು ಮಂಗಳೂರು ಕೋಸ್ಟ್ ಗಾರ್ಡ್ಗೆ ಮಾಹಿತಿ ನೀಡಿದ್ದು ಜೂ.1ರಂದು ಮಂಗಳೂರಿನ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರುವ ಚೀನೀ ಪ್ರಜೆಯ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ಮಂಗಳೂರು ಕರಾವಳಿ ಪೊಲೀಸ್ ಠಾಣೆ 9480800574 ಅಥವಾ ಕರಾವಳಿ ಕಾವಲು ಪೊಲೀಸ್ ಕಂಟ್ರೋಲ್ ರೂಂ 0820-2538100 ಸಂಪರ್ಕಿಸಬಹುದು ಎಂದು ಕರಾವಳಿ ಕಾವಲು ಪೊಲೀಸರು ತಿಳಿಸಿದ್ದಾರೆ.
China based ship captain goes missing in Mangalore, missing case filed at Coastal Police station. The missing person has been identified as Shu Ju Ping (52).
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
17-11-25 10:58 pm
HK News Desk
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
18-11-25 10:18 pm
Mangaluru Staff
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am