ಬ್ರೇಕಿಂಗ್ ನ್ಯೂಸ್
07-06-22 12:03 pm Mangalore Correspondent ಕರಾವಳಿ
ಮಂಗಳೂರು, ಜೂನ್ 7: ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಹಿಜಾಬ್ ನಿಷೇಧಿಸಿರುವುದನ್ನು ವಿರೋಧಿಸಿ ಕಾಲೇಜು ಆಡಳಿತದ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಪ್ರಶ್ನೆ ಮಾಡಿದ ಆರು ಮಂದಿ ವಿದ್ಯಾರ್ಥಿನಿಯರಿಗೆ ಕಾಲೇಜಿನ ಪ್ರಾಂಶುಪಾಲೆ ಅನಸೂಯ ರೈ ಶೋಕಾಸ್ ನೋಟೀಸ್ ನೀಡಿದ್ದಾರೆ.
ಜೂನ್ 4ರಂದು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ್ದ ವಿದ್ಯಾರ್ಥಿನಿಯರು ಕಾಲೇಜಿನ ಆಡಳಿತ ಎಬಿವಿಪಿ ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿದು ಹಿಜಾಬ್ ನಿಷೇಧ ನಿರ್ಣಯ ತೆಗೆದುಕೊಂಡಿದೆ ಎಂದು ಆರೋಪಿಸಿದ್ದರು. ಇದೇ ವಿಚಾರದಲ್ಲಿ ನೋಟೀಸ್ ನೀಡಲಾಗಿದ್ದು, ನೀವು ಹೊರಗಿನ ಶಕ್ತಿಗಳ ಬೆಂಬಲದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಿರಿ. ಕಾಲೇಜಿನ ಆಡಳಿತ ಮತ್ತು ಪ್ರಾಂಶುಪಾಲರ ಬಗ್ಗೆ ಪ್ರಶ್ನೆ ಮಾಡಿದ್ದರಿಂದ ಕಾಲೇಜಿನ ಪ್ರತಿಷ್ಠೆಗೆ ಧಕ್ಕೆಯಾಗಿದೆ. ಈ ಬಗ್ಗೆ ನಿಮ್ಮ ವಿರುದ್ಧ ಶಿಸ್ತು ಕ್ರಮ ಯಾಗೆ ತಗೊಳ್ಳಬಾರದು ಎಂದು ಪ್ರಶ್ನೆ ಮಾಡಿದ್ದು, ಈ ಬಗ್ಗೆ ಮೂರು ದಿನದೊಳಗೆ ಉತ್ತರಿಸುವಂತೆ ಶೋಕಾಸ್ ನೋಟೀಸ್ ನಲ್ಲಿ ತಿಳಿಸಲಾಗಿದೆ.
ಸುದ್ದಿಗೋಷ್ಟಿಯಲ್ಲಿ ಕಾಲೇಜು ವಿರುದ್ಧ ಮಾತನಾಡಿದ್ದ ಗೌಸಿಯಾ ಸೇರಿದಂತೆ ಆರು ಮಂದಿ ವಿದ್ಯಾರ್ಥಿನಿಯರಿಗೆ ನೋಟೀಸ್ ನೀಡಲಾಗಿದೆ. ಮುಂದೆಯೂ ಇದೇ ರೀತಿ ವರ್ತಿಸಿದರೆ ಕಾಲೇಜಿನಿಂದ ಅಮಾನತು ಮಾಡುವ ಬಗ್ಗೆ ನೋಟೀಸ್ ನಲ್ಲಿ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಈಗಾಗಲೇ ಉಪ್ಪಿನಂಗಡಿ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ಹಾಕಲು ಪಟ್ಟು ಹಿಡಿದು ರಂಪಾಟ ನಡೆಸಿದ್ದ ಆರು ಮಂದಿ ವಿದ್ಯಾರ್ಥಿನಿಯರನ್ನು ಕಾಲೇಜಿನ ಆಡಳಿತ ಅಮಾನತು ಮಾಡಿತ್ತು. ಮಂಗಳೂರಿನಲ್ಲಿಯೂ ಅದೇ ರೀತಿಯ ಬೆಳವಣಿಗೆ ಆಗಿದ್ದರೂ, ಹಿಜಾಬ್ ನಿಷೇಧದ ಬಳಿಕ ವಿದ್ಯಾರ್ಥಿನಿಯರು ಕಾಲೇಜಿನಿಂದ ದೂರ ಉಳಿದಿದ್ದರು. ಇದರ ನಡುವೆ, ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿನಿಯರು ಮತ್ತು ಅವರ ಹೆತ್ತವರ ಜೊತೆಗೆ ಸಭೆಯನ್ನು ನಡೆಸಿದ್ದರು. ತರಗತಿ ಒಳಗೆ ಹಿಜಾಬ್ ನಿಷೇಧ ಮಾಡಿರುವ ಸಿಂಡಿಕೇಟ್ ನಿರ್ಣಯದ ಬಗ್ಗೆ ಮನವರಿಕೆ ಮಾಡಿದ್ದರು.
ಹಾಗಿದ್ದರೂ, ವಿದ್ಯಾರ್ಥಿನಿಯರು ಸುದ್ದಿಗೋಷ್ಟಿ ನಡೆಸಿ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷ ಮುಗಿಯಲು ಎರಡು ತಿಂಗಳು ಇರುವಾಗ ಹಿಜಾಬ್ ನಿರ್ಣಯ ತೆಗೆದುಕೊಂಡಿರುವುದಕ್ಕೆ ಟೀಕಿಸಿದ್ದರು. ಇದೀಗ ಕಾಲೇಜಿನಿಂದ ನೋಟೀಸ್ ನೀಡಿರುವುದರಿಂದ ವಿದ್ಯಾರ್ಥಿನಿಯರು ಸೂಕ್ತ ಉತ್ತರ ನೀಡದೇ ಇದ್ದರೆ ಅಮಾನತು ಆಗುವ ಸಾಧ್ಯತೆ ಇದೆ.
Mangalore university Hijab row, show cause notice issued to 6 girl students for questioning college by holding a press meet at press club. The notice has been issued by principal Anasuya Rai
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 08:46 pm
Mangalore Correspondent
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm