ಬ್ರೇಕಿಂಗ್ ನ್ಯೂಸ್
07-06-22 12:03 pm Mangalore Correspondent ಕರಾವಳಿ
ಮಂಗಳೂರು, ಜೂನ್ 7: ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಹಿಜಾಬ್ ನಿಷೇಧಿಸಿರುವುದನ್ನು ವಿರೋಧಿಸಿ ಕಾಲೇಜು ಆಡಳಿತದ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಪ್ರಶ್ನೆ ಮಾಡಿದ ಆರು ಮಂದಿ ವಿದ್ಯಾರ್ಥಿನಿಯರಿಗೆ ಕಾಲೇಜಿನ ಪ್ರಾಂಶುಪಾಲೆ ಅನಸೂಯ ರೈ ಶೋಕಾಸ್ ನೋಟೀಸ್ ನೀಡಿದ್ದಾರೆ.
ಜೂನ್ 4ರಂದು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ್ದ ವಿದ್ಯಾರ್ಥಿನಿಯರು ಕಾಲೇಜಿನ ಆಡಳಿತ ಎಬಿವಿಪಿ ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿದು ಹಿಜಾಬ್ ನಿಷೇಧ ನಿರ್ಣಯ ತೆಗೆದುಕೊಂಡಿದೆ ಎಂದು ಆರೋಪಿಸಿದ್ದರು. ಇದೇ ವಿಚಾರದಲ್ಲಿ ನೋಟೀಸ್ ನೀಡಲಾಗಿದ್ದು, ನೀವು ಹೊರಗಿನ ಶಕ್ತಿಗಳ ಬೆಂಬಲದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಿರಿ. ಕಾಲೇಜಿನ ಆಡಳಿತ ಮತ್ತು ಪ್ರಾಂಶುಪಾಲರ ಬಗ್ಗೆ ಪ್ರಶ್ನೆ ಮಾಡಿದ್ದರಿಂದ ಕಾಲೇಜಿನ ಪ್ರತಿಷ್ಠೆಗೆ ಧಕ್ಕೆಯಾಗಿದೆ. ಈ ಬಗ್ಗೆ ನಿಮ್ಮ ವಿರುದ್ಧ ಶಿಸ್ತು ಕ್ರಮ ಯಾಗೆ ತಗೊಳ್ಳಬಾರದು ಎಂದು ಪ್ರಶ್ನೆ ಮಾಡಿದ್ದು, ಈ ಬಗ್ಗೆ ಮೂರು ದಿನದೊಳಗೆ ಉತ್ತರಿಸುವಂತೆ ಶೋಕಾಸ್ ನೋಟೀಸ್ ನಲ್ಲಿ ತಿಳಿಸಲಾಗಿದೆ.

ಸುದ್ದಿಗೋಷ್ಟಿಯಲ್ಲಿ ಕಾಲೇಜು ವಿರುದ್ಧ ಮಾತನಾಡಿದ್ದ ಗೌಸಿಯಾ ಸೇರಿದಂತೆ ಆರು ಮಂದಿ ವಿದ್ಯಾರ್ಥಿನಿಯರಿಗೆ ನೋಟೀಸ್ ನೀಡಲಾಗಿದೆ. ಮುಂದೆಯೂ ಇದೇ ರೀತಿ ವರ್ತಿಸಿದರೆ ಕಾಲೇಜಿನಿಂದ ಅಮಾನತು ಮಾಡುವ ಬಗ್ಗೆ ನೋಟೀಸ್ ನಲ್ಲಿ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಈಗಾಗಲೇ ಉಪ್ಪಿನಂಗಡಿ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ಹಾಕಲು ಪಟ್ಟು ಹಿಡಿದು ರಂಪಾಟ ನಡೆಸಿದ್ದ ಆರು ಮಂದಿ ವಿದ್ಯಾರ್ಥಿನಿಯರನ್ನು ಕಾಲೇಜಿನ ಆಡಳಿತ ಅಮಾನತು ಮಾಡಿತ್ತು. ಮಂಗಳೂರಿನಲ್ಲಿಯೂ ಅದೇ ರೀತಿಯ ಬೆಳವಣಿಗೆ ಆಗಿದ್ದರೂ, ಹಿಜಾಬ್ ನಿಷೇಧದ ಬಳಿಕ ವಿದ್ಯಾರ್ಥಿನಿಯರು ಕಾಲೇಜಿನಿಂದ ದೂರ ಉಳಿದಿದ್ದರು. ಇದರ ನಡುವೆ, ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿನಿಯರು ಮತ್ತು ಅವರ ಹೆತ್ತವರ ಜೊತೆಗೆ ಸಭೆಯನ್ನು ನಡೆಸಿದ್ದರು. ತರಗತಿ ಒಳಗೆ ಹಿಜಾಬ್ ನಿಷೇಧ ಮಾಡಿರುವ ಸಿಂಡಿಕೇಟ್ ನಿರ್ಣಯದ ಬಗ್ಗೆ ಮನವರಿಕೆ ಮಾಡಿದ್ದರು.

ಹಾಗಿದ್ದರೂ, ವಿದ್ಯಾರ್ಥಿನಿಯರು ಸುದ್ದಿಗೋಷ್ಟಿ ನಡೆಸಿ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷ ಮುಗಿಯಲು ಎರಡು ತಿಂಗಳು ಇರುವಾಗ ಹಿಜಾಬ್ ನಿರ್ಣಯ ತೆಗೆದುಕೊಂಡಿರುವುದಕ್ಕೆ ಟೀಕಿಸಿದ್ದರು. ಇದೀಗ ಕಾಲೇಜಿನಿಂದ ನೋಟೀಸ್ ನೀಡಿರುವುದರಿಂದ ವಿದ್ಯಾರ್ಥಿನಿಯರು ಸೂಕ್ತ ಉತ್ತರ ನೀಡದೇ ಇದ್ದರೆ ಅಮಾನತು ಆಗುವ ಸಾಧ್ಯತೆ ಇದೆ.
Mangalore university Hijab row, show cause notice issued to 6 girl students for questioning college by holding a press meet at press club. The notice has been issued by principal Anasuya Rai
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm