ಬ್ರೇಕಿಂಗ್ ನ್ಯೂಸ್
07-06-22 06:07 pm Mangalore Correspondent ಕರಾವಳಿ
ಪುತ್ತೂರು, ಜೂನ್ 7: ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿಚಾರ ಅಹಿತಕರ ಘಟನೆಗಳಿಗೆ ಕಾರಣವಾದ ಹಿನ್ನೆಲೆಯಲ್ಲಿ ಹಿಜಾಬ್ ಧರಿಸಲು ಪಟ್ಟು ಹಿಡಿದ 24 ಮಂದಿ ವಿದ್ಯಾರ್ಥಿನಿಯರನ್ನು ಒಂದು ವಾರ ಕಾಲ ಕಾಲೇಜಿಗೆ ಬರದಂತೆ ನಿರ್ಬಂಧ ವಿಧಿಸಲಾಗಿದೆ.
ಕಾಲೇಜಿನಲ್ಲಿ ಕಳೆದ ವಾರ ಎರಡು ಗುಂಪುಗಳ ನಡುವೆ ಘೋಷಣೆ ವಿನಿಮಯ ಆಗಿರುವುದು, ಸುದ್ದಿಗಾಗಿ ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆದಿರುವುದು, ಈ ವಿಚಾರದಲ್ಲಿ ಉಪ್ಪಿನಂಗಡಿ ಠಾಣೆಯಲ್ಲಿ ಪರಸ್ಪರ ಕೇಸು ದಾಖಲಾಗಿರುವುದು ಇತ್ಯಾದಿ ಬೆಳವಣಿಗೆ ಹಿನ್ನೆಲೆಯಲ್ಲಿ ಮಂಗಳೂರು ವಿವಿಯ ಅಧಿಕಾರಿಯೊಬ್ಬರು ಕಾಲೇಜಿಗೆ ಬಂದಿದ್ದರು. ಅಲ್ಲದೆ, ವಿದ್ಯಾರ್ಥಿನಿಯರ ಜೊತೆಗೆ ಮಾತುಕತೆ ನಡೆಸಿ, ಹಿಜಾಬ್ ನಿಷೇಧದ ಬಗ್ಗೆ ಮನವರಿಕೆ ಮಾಡಲು ಯತ್ನಿಸಿದ್ದಾರೆ.
ಆದರೆ ವಿದ್ಯಾರ್ಥಿನಿಯರು ತಮ್ಮ ಪಟ್ಟು ಸಡಿಲಿಸಿಲ್ಲ. ಶೈಕ್ಷಣಿಕ ವರ್ಷದ ನಡುವೆ ಹಿಜಾಬ್ ಹೇರಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ತರಗತಿ ಹೊರಗಿನ ಡ್ರೆಸ್ಸಿಂಗ್ ರೂಮಿನಲ್ಲಿ ಉಳಿಯುವುದಕ್ಕೂ ಕಾಲೇಜಿನ ಆಡಳಿತ ನಿರ್ಬಂಧ ವಿಧಿಸಿತ್ತು. ಸೋಮವಾರ ದಿನವಿಡೀ ಪ್ರಹಸನದ ಬಳಿಕ ಸಂಜೆ ವೇಳೆಗೆ ಕಾಲೇಜಿನ ಉಪನ್ಯಾಸಕರ ಸಭೆ ಕರೆದ ಪ್ರಾಂಶುಪಾಲ ಶೇಖರ್ ಎಂ.ಬಿ., ಸರಕಾರದ ಸುತ್ತೋಲೆ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ನಿರ್ಣಯದ ಆಧಾರದಲ್ಲಿ ಕಾಲೇಜಿನ ಸಮವಸ್ತ್ರ ನಿಯಮವನ್ನು ಉಲ್ಲಂಘಿಸಿದ್ದಲ್ಲದೆ, ಶೈಕ್ಷಣಿಕ ವಾತಾವರಣ ಹಾಳು ಮಾಡುತ್ತಿರುವುದಕ್ಕಾಗಿ 24 ವಿದ್ಯಾರ್ಥಿನಿಯರಿಗೆ ಒಂದು ವಾರ ಕಾಲ ಕಾಲೇಜು ಪ್ರವೇಶ ನಿರ್ಬಂಧಿಸಿ ನಿರ್ಣಯ ಕೈಗೊಂಡಿದ್ದಾರೆ. ಇದೇ ವಿವಾದಕ್ಕೆ ಸಂಬಂಧಿಸಿ ಈ ಹಿಂದೆ ಏಳು ಮಂದಿ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತು ಮಾಡಲಾಗಿತ್ತು. ಇದೀಗ ಒಂದು ವಾರದ ನಿರ್ಬಂಧ ವಿಧಿಸಿ ಚಾಟಿ ಬೀಸಿದ್ದಾರೆ.
Twenty-four students studying in a college in Karnataka's Dakshina Kannada district were on Tuesday banned for a period of seven days from attending classes for wearing Hijab.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm