ಬ್ರೇಕಿಂಗ್ ನ್ಯೂಸ್
28-09-20 07:51 pm Mangaluru Correspondent ಕರಾವಳಿ
ಸುರತ್ಕಲ್, ಸೆಪ್ಟಂಬರ್ 28: ಮಂಗಳೂರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಜನರನ್ನು ಸತಾಯಿಸುತ್ತಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಆರ್ ಟಿ ಸಿ ಸಹಿತ ದಾಖಲೆಗಳಿಗಾಗಿ ಸತಾಯಿಸುತ್ತಿದ್ದಾರೆ ಎಂಬ ಜನರ ದೂರಿಗೆ ಸ್ಪಂದಿಸಿ ಶಾಸಕರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ್ದಾರೆ. ಸೂಕ್ತ ಸಮಯದಲ್ಲಿ ದಾಖಲೆ ನೀಡದೆ ಜನರಿಗೆ ಸತಾಯಿಸುತ್ತಿದ್ದೀರಾ... ಜನಪ್ರತಿನಿಧಿಯಾಗಿ ನನಗೆ ಜನರ ಕರೆ ಬರುತ್ತಿದೆ. ಏನು ಮಾಡುತ್ತಿದ್ದೀರಿ, ಒಂದೋ ಕೆಲಸ ಮಾಡಿಸಿ, ಇಲ್ಲದಿದ್ದರೆ ಕೆಲಸ ಮಾಡದವರನ್ನು ತೆಗೆದುಹಾಕಿ ಎಂದು ತಹಶೀಲ್ದಾರ್ ಗುರುಪ್ರಸಾದ್ ಅವರನ್ನು ತರಾಟೆಗೆತ್ತಿಕೊಂಡರು. ಕಚೇರಿಯಲ್ಲಿ ಇಷ್ಟು ಜನ ಇದ್ದರೂ ತಿಂಗಳುಗಟ್ಟಲೆ ಏಕೆ ಸತಾಯಿಸುತ್ತಿದ್ದೀರಿ, ಕಡತ ಯಾಕೆ ವಿಲೇವಾರಿ ಆಗುತ್ತಿಲ್ಲ, ಕಾರಣ ಕೊಡಿ ಎಂದು ಪ್ರಶ್ನೆ ಮಾಡಿದರು.

ರೆಕಾರ್ಡ್ ರೂಂನಲ್ಲಿ ನಾಲ್ಕು ಜನ ಕೆಲಸಕ್ಕೆ ಇದ್ದಾರೆ. ಕೆಲಸಕ್ಕೆ ಸಿಬಂದಿ ಇದ್ದರೂ 5-6 ತಿಂಗಳ ಕಾಲ ಕೆಲಸ ಆಗದಿದ್ದರೆ ಹೇಗೆ.. ಹೀಗೆಯೇ ಮುಂದುವರಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗಬಹುದು ಎಂದು ಎಚ್ಚರಿಸಿದರು.
ಇದೇ ಸಂದರ್ಭ ಮಿನಿ ವಿಧಾನ ಸೌಧದಲ್ಲಿರುವ ವಿವಾಹ ನೋಂದಣಿ ಹಾಗೂ ಭೂದಾಖಲೆ ಪತ್ರಗಳ ರೆಕಾರ್ಡ್ ರೂಮಿಗೂ, ಸಬ್ ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Join our WhatsApp group for latest news updates (2)
video
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 06:55 pm
Mangalore Correspondent
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm