ಬ್ರೇಕಿಂಗ್ ನ್ಯೂಸ್
08-06-22 01:13 pm Udupi Correspondent ಕರಾವಳಿ
ಉಡುಪಿ, ಜೂನ್ 8 : ಬಿಜೆಪಿ ರಾಷ್ಟ್ರೀಯ ಹಿಂದುಳಿದ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಹಾಗೂ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಅವರನ್ನು ತಲೆ ಕಡಿದರೆ ಇಪ್ಪತ್ತು ಲಕ್ಷ ಬಹುಮಾನ ನೀಡುವುದಾಗಿ ಪೋಸ್ಟ್ ಹಾಕಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Mari_gudi_6 ಹೆಸರಿನ ಇನ್ಸ್ ಟಾ ಗ್ರಾಮ ಪೇಜ್ ನಲ್ಲಿ ಈ ರೀತಿ ಬೆದರಿಕೆ ಹಾಕಲಾಗಿದೆ. ಬ್ಯಾರಿ ಯುವಕ, ಮಂಗಳೂರು ಮಾರಿಗುಡಿ ಎಂದು ಪೇಜ್ ಮೇಲ್ಬಾಗದಲ್ಲಿ ಬರೆಯಲಾಗಿದ್ದು ಮಂಗಳೂರಿನ ಯುವಕರು ಈ ಪೇಜ್ ಹಿಂದಿರುವ ಶಂಕೆಯಿದೆ.
ಯಶಪಾಲ್ ಸುವರ್ಣ ಮತ್ತು ಪ್ರಮೋದ್ ಮುತಾಲಿಕ್, ಹಿಜಾಬ್ ವಿಚಾರದಲ್ಲಿ ಉಗ್ರ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದರು. ಅಲ್ಲದೆ, ಮುಸ್ಲಿಂ ವಿರೋಧಿ ನಿಲುವುಗಳನ್ನು ವ್ಯಕ್ತಪಡಿಸುತ್ತಿದ್ದರು. ಹಿಂದುತ್ವದ ಪರವಾಗಿ ಖಡಕ್ ನಿಲುವುಗಳನ್ನು ಹೇಳುತ್ತಿದ್ದರು. ಇದೇ ಕಾರಣಕ್ಕೋ ಏನೋ ಕಿಡಿಗೇಡಿ ಯುವಕರು ಈ ರೀತಿ ಪೋಸ್ಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಬಹಿರಂಗ ಬೆದರಿಕೆ ಹಾಕಿರುವ ಬಗ್ಗೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.



ಈ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಯಶಪಾಲ್ ಸುವರ್ಣ, ಇಂಥ ಶಕ್ತಿಗಳನ್ನು ಮಟ್ಟ ಹಾಕಲು ಗೊತ್ತಿದೆ. ಈ ರೀತಿಯ ಬೆದರಿಕೆಗಳಿಗೆ ಬಗ್ಗುವುದಿಲ್ಲ. ಯಾರು ಇದರ ಹಿಂದೆ ಇದ್ದಾರೋ ಅವರನ್ನು ಶಿಕ್ಷಿಸಲು ಪೊಲೀಸ್ ಇಲಾಖೆಗೆ ಒತ್ತಾಯಿಸುತ್ತೇನೆ ಎಂದಿದ್ದಾರೆ.
ಧಾರವಾಡದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಮೋದ ಮುತಾಲಿಕ್, ನನಗೆ ಮತ್ತು ಯಶಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಒಬ್ಬರ ತಲೆಗೆ 10 ಲಕ್ಷ ಬೆಲೆ ಘೋಷಣೆ ಹಾಕಿದ್ದಾರೆ. ಈ ರೀತಿ ಸಾಕಷ್ಟು ಜೀವ ಬೆದರಿಕೆ ಬಂದಿದೆ. ಯಾವ ಬೆದರಿಕೆಗೂ ಹೆದರಲ್ಲ. 2009ರಲ್ಲಿ ರಶೀದ್ ಮಲಬಾರಿ ಎಂಬಾತ ನನ್ನನ್ನ ಕೊಲೆ ಮಾಡಲಿಕ್ಕೆ ಬಂದಿದ್ದ. ಇವತ್ತು ಬೆಳಗ್ಗೆ ಎರಡು ಪೋನ್ ಕರೆ ಬಂದಿವೆ. ಈ ಬಗ್ಗೆ ಪೊಲೀಸ್ ಕಮಿಷನರ್ ಗೆ ದೂರು ಕೊಡುತ್ತೇನೆ ಎಂದು ಹೇಳಿದ್ದಾರೆ.
Hijab row, Udupi Yashpal Suvarna and Pramod Muthalik gets death threats on Instagram. The post by Marigudi 6 offers big money for those who will behead both. Kaup Yuva Morcha lodged a complaint with Kaup police circle inspector Prakash and Kaup police station inspector requesting him to hold investigations and take suitable action in this connection.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm