ಬ್ರೇಕಿಂಗ್ ನ್ಯೂಸ್
08-06-22 01:13 pm Udupi Correspondent ಕರಾವಳಿ
ಉಡುಪಿ, ಜೂನ್ 8 : ಬಿಜೆಪಿ ರಾಷ್ಟ್ರೀಯ ಹಿಂದುಳಿದ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಹಾಗೂ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಅವರನ್ನು ತಲೆ ಕಡಿದರೆ ಇಪ್ಪತ್ತು ಲಕ್ಷ ಬಹುಮಾನ ನೀಡುವುದಾಗಿ ಪೋಸ್ಟ್ ಹಾಕಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Mari_gudi_6 ಹೆಸರಿನ ಇನ್ಸ್ ಟಾ ಗ್ರಾಮ ಪೇಜ್ ನಲ್ಲಿ ಈ ರೀತಿ ಬೆದರಿಕೆ ಹಾಕಲಾಗಿದೆ. ಬ್ಯಾರಿ ಯುವಕ, ಮಂಗಳೂರು ಮಾರಿಗುಡಿ ಎಂದು ಪೇಜ್ ಮೇಲ್ಬಾಗದಲ್ಲಿ ಬರೆಯಲಾಗಿದ್ದು ಮಂಗಳೂರಿನ ಯುವಕರು ಈ ಪೇಜ್ ಹಿಂದಿರುವ ಶಂಕೆಯಿದೆ.
ಯಶಪಾಲ್ ಸುವರ್ಣ ಮತ್ತು ಪ್ರಮೋದ್ ಮುತಾಲಿಕ್, ಹಿಜಾಬ್ ವಿಚಾರದಲ್ಲಿ ಉಗ್ರ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದರು. ಅಲ್ಲದೆ, ಮುಸ್ಲಿಂ ವಿರೋಧಿ ನಿಲುವುಗಳನ್ನು ವ್ಯಕ್ತಪಡಿಸುತ್ತಿದ್ದರು. ಹಿಂದುತ್ವದ ಪರವಾಗಿ ಖಡಕ್ ನಿಲುವುಗಳನ್ನು ಹೇಳುತ್ತಿದ್ದರು. ಇದೇ ಕಾರಣಕ್ಕೋ ಏನೋ ಕಿಡಿಗೇಡಿ ಯುವಕರು ಈ ರೀತಿ ಪೋಸ್ಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಬಹಿರಂಗ ಬೆದರಿಕೆ ಹಾಕಿರುವ ಬಗ್ಗೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಯಶಪಾಲ್ ಸುವರ್ಣ, ಇಂಥ ಶಕ್ತಿಗಳನ್ನು ಮಟ್ಟ ಹಾಕಲು ಗೊತ್ತಿದೆ. ಈ ರೀತಿಯ ಬೆದರಿಕೆಗಳಿಗೆ ಬಗ್ಗುವುದಿಲ್ಲ. ಯಾರು ಇದರ ಹಿಂದೆ ಇದ್ದಾರೋ ಅವರನ್ನು ಶಿಕ್ಷಿಸಲು ಪೊಲೀಸ್ ಇಲಾಖೆಗೆ ಒತ್ತಾಯಿಸುತ್ತೇನೆ ಎಂದಿದ್ದಾರೆ.
ಧಾರವಾಡದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಮೋದ ಮುತಾಲಿಕ್, ನನಗೆ ಮತ್ತು ಯಶಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಒಬ್ಬರ ತಲೆಗೆ 10 ಲಕ್ಷ ಬೆಲೆ ಘೋಷಣೆ ಹಾಕಿದ್ದಾರೆ. ಈ ರೀತಿ ಸಾಕಷ್ಟು ಜೀವ ಬೆದರಿಕೆ ಬಂದಿದೆ. ಯಾವ ಬೆದರಿಕೆಗೂ ಹೆದರಲ್ಲ. 2009ರಲ್ಲಿ ರಶೀದ್ ಮಲಬಾರಿ ಎಂಬಾತ ನನ್ನನ್ನ ಕೊಲೆ ಮಾಡಲಿಕ್ಕೆ ಬಂದಿದ್ದ. ಇವತ್ತು ಬೆಳಗ್ಗೆ ಎರಡು ಪೋನ್ ಕರೆ ಬಂದಿವೆ. ಈ ಬಗ್ಗೆ ಪೊಲೀಸ್ ಕಮಿಷನರ್ ಗೆ ದೂರು ಕೊಡುತ್ತೇನೆ ಎಂದು ಹೇಳಿದ್ದಾರೆ.
Hijab row, Udupi Yashpal Suvarna and Pramod Muthalik gets death threats on Instagram. The post by Marigudi 6 offers big money for those who will behead both. Kaup Yuva Morcha lodged a complaint with Kaup police circle inspector Prakash and Kaup police station inspector requesting him to hold investigations and take suitable action in this connection.
30-09-25 07:31 pm
Bangalore Correspondent
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
ಹೈದ್ರಾಬಾದ್ ನಲ್ಲಿ ಕಾಂತಾರ ಪ್ರಚಾರ ; ರಿಷಬ್ ಕನ್ನಡದ...
29-09-25 07:59 pm
30-09-25 04:08 pm
HK News Desk
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
ಪರಿಶಿಷ್ಟರ ಮತಾಂತರ ಜಾಲ ; 'ಪವಾಡ ಚಿಕಿತ್ಸೆ' ಆಮಿಷ ಒ...
29-09-25 10:52 pm
ಏಷ್ಯಾ ಕಪ್ ಫೈನಲ್ ಗೆದ್ದರೂ ಕಪ್ ಸ್ವೀಕರಿಸದೆ ಪಾಕಿಗೆ...
29-09-25 03:54 pm
ಕಾಲ್ತುಳಿತ ಘಟನೆ ಆಕಸ್ಮಿಕ ಅಲ್ಲ, ಪಿತೂರಿ ! ಕಲ್ಲು ತ...
28-09-25 10:02 pm
30-09-25 10:57 pm
Mangalore Correspondent
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
ಧರ್ಮಸ್ಥಳ ಪ್ರಕರಣ, ಕೋರ್ಟಿಗೆ ಚಿನ್ನಯ್ಯ ಹೊಸ ಹೇಳಿಕೆ...
29-09-25 11:02 pm
Mithun Rai, Pilinalikes 10th Anniversary, Man...
29-09-25 07:15 pm
ಮಂಗಳೂರು ದಸರಾ-2025 ರಾಜ್ಯ ಮಟ್ಟದ ಮ್ಯಾರಥಾನ್ ; ಪುರ...
28-09-25 08:12 pm
29-09-25 01:24 pm
Mangalore Correspondent
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm
Robbery in Mangalore: ಒಂದೂವರೆ ಕೋಟಿ ಮೌಲ್ಯದ ಚಿನ...
28-09-25 12:25 pm