ಬ್ರೇಕಿಂಗ್ ನ್ಯೂಸ್
08-06-22 01:13 pm Udupi Correspondent ಕರಾವಳಿ
ಉಡುಪಿ, ಜೂನ್ 8 : ಬಿಜೆಪಿ ರಾಷ್ಟ್ರೀಯ ಹಿಂದುಳಿದ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಹಾಗೂ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಅವರನ್ನು ತಲೆ ಕಡಿದರೆ ಇಪ್ಪತ್ತು ಲಕ್ಷ ಬಹುಮಾನ ನೀಡುವುದಾಗಿ ಪೋಸ್ಟ್ ಹಾಕಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Mari_gudi_6 ಹೆಸರಿನ ಇನ್ಸ್ ಟಾ ಗ್ರಾಮ ಪೇಜ್ ನಲ್ಲಿ ಈ ರೀತಿ ಬೆದರಿಕೆ ಹಾಕಲಾಗಿದೆ. ಬ್ಯಾರಿ ಯುವಕ, ಮಂಗಳೂರು ಮಾರಿಗುಡಿ ಎಂದು ಪೇಜ್ ಮೇಲ್ಬಾಗದಲ್ಲಿ ಬರೆಯಲಾಗಿದ್ದು ಮಂಗಳೂರಿನ ಯುವಕರು ಈ ಪೇಜ್ ಹಿಂದಿರುವ ಶಂಕೆಯಿದೆ.
ಯಶಪಾಲ್ ಸುವರ್ಣ ಮತ್ತು ಪ್ರಮೋದ್ ಮುತಾಲಿಕ್, ಹಿಜಾಬ್ ವಿಚಾರದಲ್ಲಿ ಉಗ್ರ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದರು. ಅಲ್ಲದೆ, ಮುಸ್ಲಿಂ ವಿರೋಧಿ ನಿಲುವುಗಳನ್ನು ವ್ಯಕ್ತಪಡಿಸುತ್ತಿದ್ದರು. ಹಿಂದುತ್ವದ ಪರವಾಗಿ ಖಡಕ್ ನಿಲುವುಗಳನ್ನು ಹೇಳುತ್ತಿದ್ದರು. ಇದೇ ಕಾರಣಕ್ಕೋ ಏನೋ ಕಿಡಿಗೇಡಿ ಯುವಕರು ಈ ರೀತಿ ಪೋಸ್ಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಬಹಿರಂಗ ಬೆದರಿಕೆ ಹಾಕಿರುವ ಬಗ್ಗೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.



ಈ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಯಶಪಾಲ್ ಸುವರ್ಣ, ಇಂಥ ಶಕ್ತಿಗಳನ್ನು ಮಟ್ಟ ಹಾಕಲು ಗೊತ್ತಿದೆ. ಈ ರೀತಿಯ ಬೆದರಿಕೆಗಳಿಗೆ ಬಗ್ಗುವುದಿಲ್ಲ. ಯಾರು ಇದರ ಹಿಂದೆ ಇದ್ದಾರೋ ಅವರನ್ನು ಶಿಕ್ಷಿಸಲು ಪೊಲೀಸ್ ಇಲಾಖೆಗೆ ಒತ್ತಾಯಿಸುತ್ತೇನೆ ಎಂದಿದ್ದಾರೆ.
ಧಾರವಾಡದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಮೋದ ಮುತಾಲಿಕ್, ನನಗೆ ಮತ್ತು ಯಶಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಒಬ್ಬರ ತಲೆಗೆ 10 ಲಕ್ಷ ಬೆಲೆ ಘೋಷಣೆ ಹಾಕಿದ್ದಾರೆ. ಈ ರೀತಿ ಸಾಕಷ್ಟು ಜೀವ ಬೆದರಿಕೆ ಬಂದಿದೆ. ಯಾವ ಬೆದರಿಕೆಗೂ ಹೆದರಲ್ಲ. 2009ರಲ್ಲಿ ರಶೀದ್ ಮಲಬಾರಿ ಎಂಬಾತ ನನ್ನನ್ನ ಕೊಲೆ ಮಾಡಲಿಕ್ಕೆ ಬಂದಿದ್ದ. ಇವತ್ತು ಬೆಳಗ್ಗೆ ಎರಡು ಪೋನ್ ಕರೆ ಬಂದಿವೆ. ಈ ಬಗ್ಗೆ ಪೊಲೀಸ್ ಕಮಿಷನರ್ ಗೆ ದೂರು ಕೊಡುತ್ತೇನೆ ಎಂದು ಹೇಳಿದ್ದಾರೆ.
Hijab row, Udupi Yashpal Suvarna and Pramod Muthalik gets death threats on Instagram. The post by Marigudi 6 offers big money for those who will behead both. Kaup Yuva Morcha lodged a complaint with Kaup police circle inspector Prakash and Kaup police station inspector requesting him to hold investigations and take suitable action in this connection.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm