ಬ್ರೇಕಿಂಗ್ ನ್ಯೂಸ್
08-06-22 01:13 pm Udupi Correspondent ಕರಾವಳಿ
ಉಡುಪಿ, ಜೂನ್ 8 : ಬಿಜೆಪಿ ರಾಷ್ಟ್ರೀಯ ಹಿಂದುಳಿದ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಹಾಗೂ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಅವರನ್ನು ತಲೆ ಕಡಿದರೆ ಇಪ್ಪತ್ತು ಲಕ್ಷ ಬಹುಮಾನ ನೀಡುವುದಾಗಿ ಪೋಸ್ಟ್ ಹಾಕಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Mari_gudi_6 ಹೆಸರಿನ ಇನ್ಸ್ ಟಾ ಗ್ರಾಮ ಪೇಜ್ ನಲ್ಲಿ ಈ ರೀತಿ ಬೆದರಿಕೆ ಹಾಕಲಾಗಿದೆ. ಬ್ಯಾರಿ ಯುವಕ, ಮಂಗಳೂರು ಮಾರಿಗುಡಿ ಎಂದು ಪೇಜ್ ಮೇಲ್ಬಾಗದಲ್ಲಿ ಬರೆಯಲಾಗಿದ್ದು ಮಂಗಳೂರಿನ ಯುವಕರು ಈ ಪೇಜ್ ಹಿಂದಿರುವ ಶಂಕೆಯಿದೆ.
ಯಶಪಾಲ್ ಸುವರ್ಣ ಮತ್ತು ಪ್ರಮೋದ್ ಮುತಾಲಿಕ್, ಹಿಜಾಬ್ ವಿಚಾರದಲ್ಲಿ ಉಗ್ರ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದರು. ಅಲ್ಲದೆ, ಮುಸ್ಲಿಂ ವಿರೋಧಿ ನಿಲುವುಗಳನ್ನು ವ್ಯಕ್ತಪಡಿಸುತ್ತಿದ್ದರು. ಹಿಂದುತ್ವದ ಪರವಾಗಿ ಖಡಕ್ ನಿಲುವುಗಳನ್ನು ಹೇಳುತ್ತಿದ್ದರು. ಇದೇ ಕಾರಣಕ್ಕೋ ಏನೋ ಕಿಡಿಗೇಡಿ ಯುವಕರು ಈ ರೀತಿ ಪೋಸ್ಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಬಹಿರಂಗ ಬೆದರಿಕೆ ಹಾಕಿರುವ ಬಗ್ಗೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.



ಈ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಯಶಪಾಲ್ ಸುವರ್ಣ, ಇಂಥ ಶಕ್ತಿಗಳನ್ನು ಮಟ್ಟ ಹಾಕಲು ಗೊತ್ತಿದೆ. ಈ ರೀತಿಯ ಬೆದರಿಕೆಗಳಿಗೆ ಬಗ್ಗುವುದಿಲ್ಲ. ಯಾರು ಇದರ ಹಿಂದೆ ಇದ್ದಾರೋ ಅವರನ್ನು ಶಿಕ್ಷಿಸಲು ಪೊಲೀಸ್ ಇಲಾಖೆಗೆ ಒತ್ತಾಯಿಸುತ್ತೇನೆ ಎಂದಿದ್ದಾರೆ.
ಧಾರವಾಡದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಮೋದ ಮುತಾಲಿಕ್, ನನಗೆ ಮತ್ತು ಯಶಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಒಬ್ಬರ ತಲೆಗೆ 10 ಲಕ್ಷ ಬೆಲೆ ಘೋಷಣೆ ಹಾಕಿದ್ದಾರೆ. ಈ ರೀತಿ ಸಾಕಷ್ಟು ಜೀವ ಬೆದರಿಕೆ ಬಂದಿದೆ. ಯಾವ ಬೆದರಿಕೆಗೂ ಹೆದರಲ್ಲ. 2009ರಲ್ಲಿ ರಶೀದ್ ಮಲಬಾರಿ ಎಂಬಾತ ನನ್ನನ್ನ ಕೊಲೆ ಮಾಡಲಿಕ್ಕೆ ಬಂದಿದ್ದ. ಇವತ್ತು ಬೆಳಗ್ಗೆ ಎರಡು ಪೋನ್ ಕರೆ ಬಂದಿವೆ. ಈ ಬಗ್ಗೆ ಪೊಲೀಸ್ ಕಮಿಷನರ್ ಗೆ ದೂರು ಕೊಡುತ್ತೇನೆ ಎಂದು ಹೇಳಿದ್ದಾರೆ.
Hijab row, Udupi Yashpal Suvarna and Pramod Muthalik gets death threats on Instagram. The post by Marigudi 6 offers big money for those who will behead both. Kaup Yuva Morcha lodged a complaint with Kaup police circle inspector Prakash and Kaup police station inspector requesting him to hold investigations and take suitable action in this connection.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm