ಬ್ರೇಕಿಂಗ್ ನ್ಯೂಸ್
08-06-22 01:13 pm Udupi Correspondent ಕರಾವಳಿ
ಉಡುಪಿ, ಜೂನ್ 8 : ಬಿಜೆಪಿ ರಾಷ್ಟ್ರೀಯ ಹಿಂದುಳಿದ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಹಾಗೂ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಅವರನ್ನು ತಲೆ ಕಡಿದರೆ ಇಪ್ಪತ್ತು ಲಕ್ಷ ಬಹುಮಾನ ನೀಡುವುದಾಗಿ ಪೋಸ್ಟ್ ಹಾಕಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Mari_gudi_6 ಹೆಸರಿನ ಇನ್ಸ್ ಟಾ ಗ್ರಾಮ ಪೇಜ್ ನಲ್ಲಿ ಈ ರೀತಿ ಬೆದರಿಕೆ ಹಾಕಲಾಗಿದೆ. ಬ್ಯಾರಿ ಯುವಕ, ಮಂಗಳೂರು ಮಾರಿಗುಡಿ ಎಂದು ಪೇಜ್ ಮೇಲ್ಬಾಗದಲ್ಲಿ ಬರೆಯಲಾಗಿದ್ದು ಮಂಗಳೂರಿನ ಯುವಕರು ಈ ಪೇಜ್ ಹಿಂದಿರುವ ಶಂಕೆಯಿದೆ.
ಯಶಪಾಲ್ ಸುವರ್ಣ ಮತ್ತು ಪ್ರಮೋದ್ ಮುತಾಲಿಕ್, ಹಿಜಾಬ್ ವಿಚಾರದಲ್ಲಿ ಉಗ್ರ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದರು. ಅಲ್ಲದೆ, ಮುಸ್ಲಿಂ ವಿರೋಧಿ ನಿಲುವುಗಳನ್ನು ವ್ಯಕ್ತಪಡಿಸುತ್ತಿದ್ದರು. ಹಿಂದುತ್ವದ ಪರವಾಗಿ ಖಡಕ್ ನಿಲುವುಗಳನ್ನು ಹೇಳುತ್ತಿದ್ದರು. ಇದೇ ಕಾರಣಕ್ಕೋ ಏನೋ ಕಿಡಿಗೇಡಿ ಯುವಕರು ಈ ರೀತಿ ಪೋಸ್ಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಬಹಿರಂಗ ಬೆದರಿಕೆ ಹಾಕಿರುವ ಬಗ್ಗೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.



ಈ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಯಶಪಾಲ್ ಸುವರ್ಣ, ಇಂಥ ಶಕ್ತಿಗಳನ್ನು ಮಟ್ಟ ಹಾಕಲು ಗೊತ್ತಿದೆ. ಈ ರೀತಿಯ ಬೆದರಿಕೆಗಳಿಗೆ ಬಗ್ಗುವುದಿಲ್ಲ. ಯಾರು ಇದರ ಹಿಂದೆ ಇದ್ದಾರೋ ಅವರನ್ನು ಶಿಕ್ಷಿಸಲು ಪೊಲೀಸ್ ಇಲಾಖೆಗೆ ಒತ್ತಾಯಿಸುತ್ತೇನೆ ಎಂದಿದ್ದಾರೆ.
ಧಾರವಾಡದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಮೋದ ಮುತಾಲಿಕ್, ನನಗೆ ಮತ್ತು ಯಶಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಒಬ್ಬರ ತಲೆಗೆ 10 ಲಕ್ಷ ಬೆಲೆ ಘೋಷಣೆ ಹಾಕಿದ್ದಾರೆ. ಈ ರೀತಿ ಸಾಕಷ್ಟು ಜೀವ ಬೆದರಿಕೆ ಬಂದಿದೆ. ಯಾವ ಬೆದರಿಕೆಗೂ ಹೆದರಲ್ಲ. 2009ರಲ್ಲಿ ರಶೀದ್ ಮಲಬಾರಿ ಎಂಬಾತ ನನ್ನನ್ನ ಕೊಲೆ ಮಾಡಲಿಕ್ಕೆ ಬಂದಿದ್ದ. ಇವತ್ತು ಬೆಳಗ್ಗೆ ಎರಡು ಪೋನ್ ಕರೆ ಬಂದಿವೆ. ಈ ಬಗ್ಗೆ ಪೊಲೀಸ್ ಕಮಿಷನರ್ ಗೆ ದೂರು ಕೊಡುತ್ತೇನೆ ಎಂದು ಹೇಳಿದ್ದಾರೆ.
Hijab row, Udupi Yashpal Suvarna and Pramod Muthalik gets death threats on Instagram. The post by Marigudi 6 offers big money for those who will behead both. Kaup Yuva Morcha lodged a complaint with Kaup police circle inspector Prakash and Kaup police station inspector requesting him to hold investigations and take suitable action in this connection.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm