ಬ್ರೇಕಿಂಗ್ ನ್ಯೂಸ್
28-09-20 08:24 pm Mangaluru Correspondent ಕರಾವಳಿ
ಉಳ್ಳಾಲ, ಸೆಪ್ಟಂಬರ್ 28: ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಅನುದಾನದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿದೆ. ಸ್ಥಳೀಯ ಶಾಸಕ ಖಾದರ್ ಅವರು ಅಸಡ್ಡೆ ವಹಿಸಿರುವ ಎಲ್ಲ ಪ್ರದೇಶಗಳ ಅಭಿವೃದ್ಧಿ ಕಾರ್ಯವನ್ನು ಸರ್ಕಾರವು ಉಸ್ತುವಾರಿ ಸಚಿವರ ಮೂಲಕ ನಡೆಸುತ್ತಿದೆ. ಸದ್ಯದಲ್ಲೇ ಕ್ಷೇತ್ರಕ್ಕೆ ಅತೀ ಅಗತ್ಯವಿರುವ ಅಗ್ನಿಶಾಮಕ ಠಾಣೆ, ಪದವಿ ಕಾಲೇಜು ಹಾಗೂ ಐಟಿಐ ಕಾಲೇಜನ್ನು ಸ್ಥಾಪಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಚಂದ್ರಹಾಸ ಪಂಡಿತ್ಹೌಸ್ ಹೇಳಿದರು.
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಮಳೆಹಾನಿ ಪರಿಹಾರದ ಐದು ಲಕ್ಷ ರೂ. ಅನುದಾನದಲ್ಲಿ ನಡೆಯಲಿರುವ ಕುತ್ತಾರು ಬೇರಿಕೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಕ್ಷೇತ್ರದ ಎಲ್ಲ 27 ಗ್ರಾಮಗಳಿಗೂ ಅತೀ ಹೆಚ್ಚಿನ ಅನುದಾನವನ್ನು ತಂದು ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತೇವೆ. ಆಮೂಲಕ ಮುಂದಿನ ಬಾರಿ ಕ್ಷೇತ್ರದಿಂದ ಬಿಜೆಪಿ ಶಾಸಕರು ಆಯ್ಕೆಯಾಗುವಂತೆ ಮಾಡಲಾಗುವುದು ಎಂದರು.
ಜಿಪಂ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ ಸ್ಥಳೀಯ ಶಾಸಕರು ಅಭಿವೃದ್ಧಿ ವಿಷಯದಲ್ಲೂ ರಾಜಕೀಯ ಮಾಡುತ್ತಿದ್ದಾರೆ. ತಮಗೆ ಮತ ಸಿಗುವ ಕ್ಷೇತ್ರಗಳಿಗೆ ಮಾತ್ರ ಅನುದಾನ ಬರುವಂತೆ ಮಾಡಿ ಬೇರೆ ಪ್ರದೇಶಗಳನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ದ.ಕ. ಜಿಲ್ಲಾ ಸಮಿತಿ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಹಿರಿಯ ಮುಖಂಡ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಹೇಮಂತ್ ಶೆಟ್ಟಿ, ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯದರ್ಶಿ ಭರತ್ರಾಜ್ ಗಟ್ಟಿ, ಕಿಶೋರ್ ಕುಲಾಲ್, ಜಿಲ್ಲಾ ಯುವ ಮೋರ್ಚಾ ಸದಸ್ಯ ಪ್ರದೀಪ್ ಶೆಟ್ಟಿ, ಹಿರಿಯರಾದ ಬಾಬು ಶೆಟ್ಟಿ ದೇಸೋಡಿ, ಕೊಣಾಜೆ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಸದಾಶಿವ ಆಚಾರ್ಯ, ಪ್ರಮುಖ್ ಸುಮಲತ, ರತ್ನಾಕರ ಕಾವ, ಮುನ್ನೂರು ಪಂಚಾಯಿತಿ ನಿಕಟಪೂರ್ವ ಉಪಾಧ್ಯಕ್ಷ ಹರೀಶ್ ಭಂಡಾರಮನೆ ಉಪಸ್ಥಿತರಿದ್ದರು.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 06:55 pm
Mangalore Correspondent
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm