ಬ್ರೇಕಿಂಗ್ ನ್ಯೂಸ್
09-06-22 06:28 pm Mangalore Correspondent ಕರಾವಳಿ
ಪುತ್ತೂರು, ಜೂನ್ 9 : ಹಿಜಾಬ್ ಹೋರಾಟದಿಂದ ಸುದ್ದಿಯಾಗಿದ್ದ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರಿವರ್ತನೆ ಗೋಚರಿಸಿದ್ದು, ಇತ್ತೀಚೆಗೆ ಅಮಾನತುಗೊಂಡವರು ಸೇರಿದಂತೆ 46 ವಿದ್ಯಾರ್ಥಿನಿಯರು ಹಿಜಾಬ್ ಬೇಡಿಕೆ ಬದಿಗಿಟ್ಟು ತರಗತಿಗೆ ಹಾಜರಾಗಿದ್ದಾರೆ.
ಸೋಮವಾರದಿಂದ 24 ವಿದ್ಯಾರ್ಥಿನಿಯರ ಕಾಲೇಜು ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದರೂ ವಾರದ ಹಿಂದೆ ಅಮಾನತುಗೊಂಡ ವಿದ್ಯಾರ್ಥಿನಿಯರು ಸೇರಿ ಹಲವರು ಕಾಲೇಜಿಗೆ ಬಂದು ತರಗತಿಗೆ ಪ್ರವೇಶಿಸಲು ಯತ್ನಿಸಿದ ಬೆನ್ನಲ್ಲೇ ಎಲ್ಲ ವಿದ್ಯಾರ್ಥಿನಿಯರ ಹೆತ್ತವರಿಗೆ ಕಾಲೇಜಿನಿಂದ ಮಾಹಿತಿ ನೀಡಲಾಯಿತು. ಬಹುತೇಕ ಹೆತ್ತವರು ತಮ್ಮ ಮಕ್ಕಳು ಹಿಜಾಬ್ ಹೋರಾಟದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿಯೇ ಇಲ್ಲವೆಂದು ತಿಳಿಸಿದ್ದು ವಿಶೇಷವಾಗಿತ್ತು.

ಅಮಾನತಾಗಿದ್ದ ಆರು ಮಂದಿ ತರಗತಿಗೆ ಹಾಜರು
ವಾರದ ಮೊದಲು ಅಮಾನತಾಗಿದ್ದ ಆರು ವಿದ್ಯಾರ್ಥಿನಿಯರು ಬುಧವಾರ ಕಾಲೇಜಿಗೆ ಆಗಮಿಸಿ ಸಮವಸ್ತ್ರ ನಿಯಮಾವಳಿಯನ್ನು ಪಾಲಿಸುವುದಾಗಿ ಮುಚ್ಚಳಿಕೆ ಬರೆದು ಕೊಟ್ಟು ತರಗತಿಗೆ ಬಂದಿದ್ದಾರೆ. ಇದೇ ವೇಳೆ, ಪ್ರತಿಭಟನೆಗು ಹಾಜರಾಗದೆ, ಕಾಲೇಜಿಗೂ ಬರದೆ ದೂರ ಉಳಿದಿದ್ದ 11 ಮಂದಿ ವಿದ್ಯಾರ್ಥಿನಿಯರು ಕೂಡ ತರಗತಿಗೆ ಹಾಜರಾಗಿದ್ದಾರೆ. ಇದರಿಂದಾಗಿ ಒಟ್ಟು 101 ಮುಸ್ಲಿಮ್ ವಿದ್ಯಾರ್ಥಿನಿಯರನ್ನು ಹೊಂದಿರುವ ಕಾಲೇಜಿನಲ್ಲಿ ಬುಧವಾರ 46 ಮಂದಿ ಸಮವಸ್ತ್ರ ನಿಯಮ ಪಾಲನೆಯೊಂದಿಗೆ ತರಗತಿ ಪ್ರವೇಶಿಸಿದ್ದಾರೆ.

ಎರಡು ದಿನಗಳ ಹಿಂದೆ ಹಿಜಾಬ್ ಹೋರಾಟ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಶಾಸಕ ಯು.ಟಿ.ಖಾದರ್ ಮಾರ್ಮಿಕ ಮಾತುಗಳನ್ನು ಹೇಳಿದ್ದರು. ಇದರ ಕಾರಣವೋ ಏನೋ ದಿಢೀರ್ ಆಗಿ ಹಿಜಾಬ್ ಹೋರಾಟ ನಡೆಸುತ್ತಿರುವ ಮಂದಿ ಮನಸ್ಸು ಬದಲಾಯಿಸಿದ್ದಾರೆ. ಪ್ರತಿಭಟನೆಯ ಕಾರಣ ತರಗತಿಗೆ ಗೈರು ಹಾಜರಾಗಿದ್ದ ಉಳಿದ ವಿದ್ಯಾರ್ಥಿನಿಯರು ಕೂಡ ಕಾಲೇಜಿಗೆ ಆಗಮಿಸುವ ಭರವಸೆಯನ್ನು ಉಪನ್ಯಾಸಕರು ವ್ಯಕ್ತಪಡಿಸಿದ್ದಾರೆ.
ಉಪ್ಪಿನಂಗಡಿ ; ಹಿಜಾಬ್ ಪಟ್ಟುಹಿಡಿದ ಮತ್ತೆ 24 ವಿದ್ಯಾರ್ಥಿನಿಯರಿಗೆ ಒಂದು ವಾರ ಕಾಲೇಜಿಗೆ ನಿರ್ಬಂಧ
ಹಿಜಾಬ್ ಹೋರಾಟ ಮಾಡೋರು ಸೌದಿ, ಪಾಕಿಸ್ತಾನಕ್ಕೆ ಹೋಗಿ ಬರಬೇಕು, ಅಲ್ಲಿ ಹೇಗಿದೆ ಅಂತ ತಿಳ್ಕೊಂಡು ಬರಲಿ!
Uppinangady Hijab row, Khaders statement goes viral, 46 students attend class without Hijab.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm