ಬ್ರೇಕಿಂಗ್ ನ್ಯೂಸ್
09-06-22 06:28 pm Mangalore Correspondent ಕರಾವಳಿ
ಪುತ್ತೂರು, ಜೂನ್ 9 : ಹಿಜಾಬ್ ಹೋರಾಟದಿಂದ ಸುದ್ದಿಯಾಗಿದ್ದ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರಿವರ್ತನೆ ಗೋಚರಿಸಿದ್ದು, ಇತ್ತೀಚೆಗೆ ಅಮಾನತುಗೊಂಡವರು ಸೇರಿದಂತೆ 46 ವಿದ್ಯಾರ್ಥಿನಿಯರು ಹಿಜಾಬ್ ಬೇಡಿಕೆ ಬದಿಗಿಟ್ಟು ತರಗತಿಗೆ ಹಾಜರಾಗಿದ್ದಾರೆ.
ಸೋಮವಾರದಿಂದ 24 ವಿದ್ಯಾರ್ಥಿನಿಯರ ಕಾಲೇಜು ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದರೂ ವಾರದ ಹಿಂದೆ ಅಮಾನತುಗೊಂಡ ವಿದ್ಯಾರ್ಥಿನಿಯರು ಸೇರಿ ಹಲವರು ಕಾಲೇಜಿಗೆ ಬಂದು ತರಗತಿಗೆ ಪ್ರವೇಶಿಸಲು ಯತ್ನಿಸಿದ ಬೆನ್ನಲ್ಲೇ ಎಲ್ಲ ವಿದ್ಯಾರ್ಥಿನಿಯರ ಹೆತ್ತವರಿಗೆ ಕಾಲೇಜಿನಿಂದ ಮಾಹಿತಿ ನೀಡಲಾಯಿತು. ಬಹುತೇಕ ಹೆತ್ತವರು ತಮ್ಮ ಮಕ್ಕಳು ಹಿಜಾಬ್ ಹೋರಾಟದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿಯೇ ಇಲ್ಲವೆಂದು ತಿಳಿಸಿದ್ದು ವಿಶೇಷವಾಗಿತ್ತು.

ಅಮಾನತಾಗಿದ್ದ ಆರು ಮಂದಿ ತರಗತಿಗೆ ಹಾಜರು
ವಾರದ ಮೊದಲು ಅಮಾನತಾಗಿದ್ದ ಆರು ವಿದ್ಯಾರ್ಥಿನಿಯರು ಬುಧವಾರ ಕಾಲೇಜಿಗೆ ಆಗಮಿಸಿ ಸಮವಸ್ತ್ರ ನಿಯಮಾವಳಿಯನ್ನು ಪಾಲಿಸುವುದಾಗಿ ಮುಚ್ಚಳಿಕೆ ಬರೆದು ಕೊಟ್ಟು ತರಗತಿಗೆ ಬಂದಿದ್ದಾರೆ. ಇದೇ ವೇಳೆ, ಪ್ರತಿಭಟನೆಗು ಹಾಜರಾಗದೆ, ಕಾಲೇಜಿಗೂ ಬರದೆ ದೂರ ಉಳಿದಿದ್ದ 11 ಮಂದಿ ವಿದ್ಯಾರ್ಥಿನಿಯರು ಕೂಡ ತರಗತಿಗೆ ಹಾಜರಾಗಿದ್ದಾರೆ. ಇದರಿಂದಾಗಿ ಒಟ್ಟು 101 ಮುಸ್ಲಿಮ್ ವಿದ್ಯಾರ್ಥಿನಿಯರನ್ನು ಹೊಂದಿರುವ ಕಾಲೇಜಿನಲ್ಲಿ ಬುಧವಾರ 46 ಮಂದಿ ಸಮವಸ್ತ್ರ ನಿಯಮ ಪಾಲನೆಯೊಂದಿಗೆ ತರಗತಿ ಪ್ರವೇಶಿಸಿದ್ದಾರೆ.

ಎರಡು ದಿನಗಳ ಹಿಂದೆ ಹಿಜಾಬ್ ಹೋರಾಟ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಶಾಸಕ ಯು.ಟಿ.ಖಾದರ್ ಮಾರ್ಮಿಕ ಮಾತುಗಳನ್ನು ಹೇಳಿದ್ದರು. ಇದರ ಕಾರಣವೋ ಏನೋ ದಿಢೀರ್ ಆಗಿ ಹಿಜಾಬ್ ಹೋರಾಟ ನಡೆಸುತ್ತಿರುವ ಮಂದಿ ಮನಸ್ಸು ಬದಲಾಯಿಸಿದ್ದಾರೆ. ಪ್ರತಿಭಟನೆಯ ಕಾರಣ ತರಗತಿಗೆ ಗೈರು ಹಾಜರಾಗಿದ್ದ ಉಳಿದ ವಿದ್ಯಾರ್ಥಿನಿಯರು ಕೂಡ ಕಾಲೇಜಿಗೆ ಆಗಮಿಸುವ ಭರವಸೆಯನ್ನು ಉಪನ್ಯಾಸಕರು ವ್ಯಕ್ತಪಡಿಸಿದ್ದಾರೆ.
ಉಪ್ಪಿನಂಗಡಿ ; ಹಿಜಾಬ್ ಪಟ್ಟುಹಿಡಿದ ಮತ್ತೆ 24 ವಿದ್ಯಾರ್ಥಿನಿಯರಿಗೆ ಒಂದು ವಾರ ಕಾಲೇಜಿಗೆ ನಿರ್ಬಂಧ
ಹಿಜಾಬ್ ಹೋರಾಟ ಮಾಡೋರು ಸೌದಿ, ಪಾಕಿಸ್ತಾನಕ್ಕೆ ಹೋಗಿ ಬರಬೇಕು, ಅಲ್ಲಿ ಹೇಗಿದೆ ಅಂತ ತಿಳ್ಕೊಂಡು ಬರಲಿ!
Uppinangady Hijab row, Khaders statement goes viral, 46 students attend class without Hijab.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm