ಬ್ರೇಕಿಂಗ್ ನ್ಯೂಸ್
09-06-22 06:28 pm Mangalore Correspondent ಕರಾವಳಿ
ಪುತ್ತೂರು, ಜೂನ್ 9 : ಹಿಜಾಬ್ ಹೋರಾಟದಿಂದ ಸುದ್ದಿಯಾಗಿದ್ದ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರಿವರ್ತನೆ ಗೋಚರಿಸಿದ್ದು, ಇತ್ತೀಚೆಗೆ ಅಮಾನತುಗೊಂಡವರು ಸೇರಿದಂತೆ 46 ವಿದ್ಯಾರ್ಥಿನಿಯರು ಹಿಜಾಬ್ ಬೇಡಿಕೆ ಬದಿಗಿಟ್ಟು ತರಗತಿಗೆ ಹಾಜರಾಗಿದ್ದಾರೆ.
ಸೋಮವಾರದಿಂದ 24 ವಿದ್ಯಾರ್ಥಿನಿಯರ ಕಾಲೇಜು ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದರೂ ವಾರದ ಹಿಂದೆ ಅಮಾನತುಗೊಂಡ ವಿದ್ಯಾರ್ಥಿನಿಯರು ಸೇರಿ ಹಲವರು ಕಾಲೇಜಿಗೆ ಬಂದು ತರಗತಿಗೆ ಪ್ರವೇಶಿಸಲು ಯತ್ನಿಸಿದ ಬೆನ್ನಲ್ಲೇ ಎಲ್ಲ ವಿದ್ಯಾರ್ಥಿನಿಯರ ಹೆತ್ತವರಿಗೆ ಕಾಲೇಜಿನಿಂದ ಮಾಹಿತಿ ನೀಡಲಾಯಿತು. ಬಹುತೇಕ ಹೆತ್ತವರು ತಮ್ಮ ಮಕ್ಕಳು ಹಿಜಾಬ್ ಹೋರಾಟದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿಯೇ ಇಲ್ಲವೆಂದು ತಿಳಿಸಿದ್ದು ವಿಶೇಷವಾಗಿತ್ತು.

ಅಮಾನತಾಗಿದ್ದ ಆರು ಮಂದಿ ತರಗತಿಗೆ ಹಾಜರು
ವಾರದ ಮೊದಲು ಅಮಾನತಾಗಿದ್ದ ಆರು ವಿದ್ಯಾರ್ಥಿನಿಯರು ಬುಧವಾರ ಕಾಲೇಜಿಗೆ ಆಗಮಿಸಿ ಸಮವಸ್ತ್ರ ನಿಯಮಾವಳಿಯನ್ನು ಪಾಲಿಸುವುದಾಗಿ ಮುಚ್ಚಳಿಕೆ ಬರೆದು ಕೊಟ್ಟು ತರಗತಿಗೆ ಬಂದಿದ್ದಾರೆ. ಇದೇ ವೇಳೆ, ಪ್ರತಿಭಟನೆಗು ಹಾಜರಾಗದೆ, ಕಾಲೇಜಿಗೂ ಬರದೆ ದೂರ ಉಳಿದಿದ್ದ 11 ಮಂದಿ ವಿದ್ಯಾರ್ಥಿನಿಯರು ಕೂಡ ತರಗತಿಗೆ ಹಾಜರಾಗಿದ್ದಾರೆ. ಇದರಿಂದಾಗಿ ಒಟ್ಟು 101 ಮುಸ್ಲಿಮ್ ವಿದ್ಯಾರ್ಥಿನಿಯರನ್ನು ಹೊಂದಿರುವ ಕಾಲೇಜಿನಲ್ಲಿ ಬುಧವಾರ 46 ಮಂದಿ ಸಮವಸ್ತ್ರ ನಿಯಮ ಪಾಲನೆಯೊಂದಿಗೆ ತರಗತಿ ಪ್ರವೇಶಿಸಿದ್ದಾರೆ.

ಎರಡು ದಿನಗಳ ಹಿಂದೆ ಹಿಜಾಬ್ ಹೋರಾಟ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಶಾಸಕ ಯು.ಟಿ.ಖಾದರ್ ಮಾರ್ಮಿಕ ಮಾತುಗಳನ್ನು ಹೇಳಿದ್ದರು. ಇದರ ಕಾರಣವೋ ಏನೋ ದಿಢೀರ್ ಆಗಿ ಹಿಜಾಬ್ ಹೋರಾಟ ನಡೆಸುತ್ತಿರುವ ಮಂದಿ ಮನಸ್ಸು ಬದಲಾಯಿಸಿದ್ದಾರೆ. ಪ್ರತಿಭಟನೆಯ ಕಾರಣ ತರಗತಿಗೆ ಗೈರು ಹಾಜರಾಗಿದ್ದ ಉಳಿದ ವಿದ್ಯಾರ್ಥಿನಿಯರು ಕೂಡ ಕಾಲೇಜಿಗೆ ಆಗಮಿಸುವ ಭರವಸೆಯನ್ನು ಉಪನ್ಯಾಸಕರು ವ್ಯಕ್ತಪಡಿಸಿದ್ದಾರೆ.
ಉಪ್ಪಿನಂಗಡಿ ; ಹಿಜಾಬ್ ಪಟ್ಟುಹಿಡಿದ ಮತ್ತೆ 24 ವಿದ್ಯಾರ್ಥಿನಿಯರಿಗೆ ಒಂದು ವಾರ ಕಾಲೇಜಿಗೆ ನಿರ್ಬಂಧ
ಹಿಜಾಬ್ ಹೋರಾಟ ಮಾಡೋರು ಸೌದಿ, ಪಾಕಿಸ್ತಾನಕ್ಕೆ ಹೋಗಿ ಬರಬೇಕು, ಅಲ್ಲಿ ಹೇಗಿದೆ ಅಂತ ತಿಳ್ಕೊಂಡು ಬರಲಿ!
Uppinangady Hijab row, Khaders statement goes viral, 46 students attend class without Hijab.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm