ಬ್ರೇಕಿಂಗ್ ನ್ಯೂಸ್
09-06-22 10:26 pm Mangalore Correspondent ಕರಾವಳಿ
ಮಂಗಳೂರು, ಜೂನ್ 9 : ಮಳಲಿ ಮಸೀದಿ ವಕ್ಫ್ ಕಾಯ್ದೆಯಡಿ ಬರುವುದರಿಂದ ಪ್ರತಿವಾದಿಗಳು ಇಲ್ಲಿ ಅರ್ಜಿ ಸಲ್ಲಿಸುವುದಕ್ಕೇ ಸಾಧ್ಯವಿಲ್ಲ. ಪ್ರಶ್ನೆ ಮಾಡುವುದಕ್ಕೂ ಆಗಲ್ಲ ಎಂಬ ಮಸೀದಿ ಕಮಿಟಿ ಪರ ವಕೀಲರ ವಾದಕ್ಕೆ ವಿಶ್ವ ಹಿಂದು ಪರಿಷತ್ ಪರ ವಕೀಲರು ತೀವ್ರ ತಗಾದೆ ಎತ್ತಿದ್ದು, ಪ್ರತಿವಾದ ಮಂಡಿಸಿದ್ದಾರೆ.
ಏಳೆಂಟು ಅರ್ಜಿಗಳು ಸಲ್ಲಿಕೆ ಆಗಿರುವುದರಿಂದ ಯಾವ ಅರ್ಜಿಯನ್ನು ಮೊದಲು ಪರಿಗಣಿಸಬೇಕು ಅನ್ನುವ ಗೊಂದಲ ಎದ್ದಿರುವುದರಿಂದ ಜೂನ್ 9ರಂದು ನಿರ್ಧಾರ ಹೇಳುವುದಾಗಿ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ತಿಳಿಸಿದ್ದರು. ಹಾಗಾಗಿ ಗುರುವಾರ ಈ ಬಗ್ಗೆ ನಿರ್ಧಾರ ಹೊರಬೀಳುವ ನಿರೀಕ್ಷೆಯನ್ನು ವಕೀಲರು ಹೊಂದಿದ್ದರು. ಆದರೆ, ವಕ್ಫ್ ಕಾಯ್ದೆ ವಿಚಾರದಲ್ಲಿ ಪ್ರಶ್ನಿಸಿ ವಿಎಚ್ ಪಿ ಪರ ವಕೀಲ ಚಿದಾನಂದ ಕೆದಿಲಾಯ ಪ್ರಬಲ ವಾದ ಮಂಡಿಸಿದ್ದಾರೆ.

ನಮ್ಮ ಅರ್ಜಿದಾರರು ಸಲ್ಲಿಸಿರುವ ಅರ್ಜಿಯು ವಕ್ಫ್ ಟ್ರಿಬ್ಯುನಲ್ ಏನಿದೆಯೋ, ಅದರ ವ್ಯಾಪ್ತಿಗೆ ಬರೋದಿಲ್ಲ. ಯಾಕಂದ್ರೆ, ನಾವು ಎಲ್ಲಿಯೂ ಅದು ವಕ್ಫ್ ಆಸ್ತಿಯೋ, ಅಲ್ಲವೋ ಎಂಬ ಬಗ್ಗೆ ಪ್ರಶ್ನೆಯನ್ನೇ ಮಾಡಿಲ್ಲ. ಅಲ್ಲಿನ ಹೊರಗಿನ ಚಿತ್ರಣ ನೋಡಿ, ಅಲ್ಲೊಂದು ಐತಿಹಾಸಿಕ ಸ್ಮಾರಕ ಅಥವಾ ದೇವಸ್ಥಾನ ಇದೆಯೆಂದು ಹೇಳಿದ್ದಾರೆ. ಇತಿಹಾಸದ ನೆಲೆಗಟ್ಟಿನಲ್ಲಿ ಸ್ಮಾರಕದ ರಕ್ಷಣೆ ಆಗಬೇಕೆಂದು ಅರ್ಜಿಯಲ್ಲಿ ಕೇಳಿಕೊಂಡಿದ್ದಾರೆ.

ಆ ಕಟ್ಟಡವು ಸದ್ಯಕ್ಕೆ ಐತಿಹಾಸಿಕ ಸ್ಮಾರಕವೋ, ಕೇವಲ ಮಸೀದಿಯೋ ಅನ್ನುವುದನ್ನ ವಕ್ಫ್ ಟ್ರಿಬ್ಯುನಲ್ ನಿರ್ಧರಿಸುವುದಕ್ಕೂ ಆಗಲ್ಲ. ಅದನ್ನ ಸಿವಿಲ್ ಕೋರ್ಟ್ ನಿರ್ಧರಿಸಬೇಕು. ಅದಕ್ಕಾಗಿ ಆ ಜಾಗದ ಸರ್ವೇ ನಡೆಸುವುದಕ್ಕೆ ಆದೇಶ ಮಾಡಬೇಕು. ಸರ್ವೆ ನಡೆಸಿದರೆ, ಅಲ್ಲಿನ ಸ್ಮಾರಕ ಏನಿರಬಹುದು ಅನ್ನೋದು ತಿಳಿದುಬರುತ್ತದೆ. ಈ ಕಾರಣದಿಂದಾಗಿ ಇಲ್ಲಿ ವಕ್ಫ್ ಟ್ರಿಬ್ಯೂನಲ್ ವಿಚಾರ ಬರೋದಿಲ್ಲ ಎಂದು ಚಿದಾನಂದ ಕೆದಿಲಾಯ ವಾದಿಸಿದರು.
ಅಲ್ಲದೆ, 1991ರ ಆರಾಧನಾ ಸ್ಥಳಗಳ ಕುರಿತ ಕಾಯ್ದೆಯಡಿ ಅರ್ಜಿಯನ್ನೂ ವಜಾ ಮಾಡೋದಕ್ಕೂ ಆಗಲ್ಲ. ಯಾಕಂದ್ರೆ, ಆರಾಧನಾ ಸ್ಥಳಗಳ ಕಾಯಿದೆಯಲ್ಲೂ ಐತಿಹಾಸಿಕ ಸ್ಮಾರಕಗಳ ರಕ್ಷಣೆ ಬಗ್ಗೆ ಸ್ಪಷ್ಟವಾಗಿ ಹೇಳಲಾಗಿದೆ. ಯಾವುದೇ ಐತಿಹಾಸಿಕ ಸ್ಮಾರಕಗಳನ್ನು ರಕ್ಷಣೆ ಮಾಡಬೇಕು ಎಂಬ ಬಗ್ಗೆ ಉಲ್ಲೇಖ ಇದೆ. ಹೀಗಿರುವಾಗ ನಮ್ಮ ಅರ್ಜಿದಾರರ ವಾದದಂತೆ ಅಲ್ಲಿರುವ ಸ್ಮಾರಕ ಏನೆಂದು ಗೊತ್ತಾಗಬೇಕು. ಅಗತ್ಯವಿದ್ದರೆ ಸ್ಮಾರಕ ರೂಪದಲ್ಲಿ ಅದರ ರಕ್ಷಣೆ ಆಗಬೇಕು. ಸರ್ವೇ ಮೂಲಕ ಸ್ಮಾರಕದ ಬಗ್ಗೆ ಗೊತ್ತಾದರೆ ಅದನ್ನ ಸಂರಕ್ಷಣೆ ಮಾಡಲು ಸಾಧ್ಯ. ಈಗ ಇರುವ ತಡೆಯಾಜ್ಞೆಯನ್ನು ತಾವು ತೆರವು ಮಾಡಿದಲ್ಲಿ ಅಲ್ಲಿ ಮಸೀದಿಯೇ ನಿರ್ಮಾಣ ಆಗುತ್ತದೆ. ಇದರಿಂದ ಐತಿಹಾಸಿಕ ಸ್ಮಾರಕವೊಂದನ್ನು ಸಂರಕ್ಷಿಸುವ ಅವಕಾಶವೇ ತಪ್ಪಿ ಹೋಗುತ್ತದೆ ಎಂದು ವಕೀಲ ಕೆದಿಲಾಯ ಸುದೀರ್ಘ ವಾದ ಮಂಡಿಸಿದರು.
ಕೊನೆಗೆ, ಸುದೀರ್ಘ ವಾದ ಕೇಳಿದ ನ್ಯಾಯಾಧೀಶರು ಯಾವ ಅರ್ಜಿ ಮೊದಲು ಪರಿಗಣಿಸಬೇಕೆಂಬ ಬಗ್ಗೆ ನಿರ್ಧಾರ -ಹೇಳಲು ಹಿಂಜರಿಕೆ ತೋರಿದ್ದು, ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದರು. ಕಳೆದ ಒಂದು ವಾರದಿಂದ ಇದೇ ರೀತಿ ವಿಚಾರಣೆ ಮುಂದುವರಿದಿದ್ದು, ಎರಡೂ ಕಡೆಯ ವಕೀಲರ ಜಟಾಪಟಿಯಿಂದಾಗಿ ಕೋರ್ಟ್ ನಿರ್ಧಾರ ಉಳಿಸಿಕೊಂಡು ಮತ್ತಷ್ಟು ಜಟಿಲ ಸನ್ನಿವೇಶಕ್ಕೆ ಸಾಕ್ಷಿಯಾಗುತ್ತಿದೆ.
Malali Mosque temple row VHP lawyer fights for survey, court hearing postponed to 10th June.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 06:27 pm
HK News Staffer
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm