ಬ್ರೇಕಿಂಗ್ ನ್ಯೂಸ್
29-09-20 01:10 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 29: ಕೋವಿಡ್ 19 ಲಾಕ್ಡೌನ್ ಮತ್ತು ಅನ್ಲಾಕ್ ನಂತರವೂ ಬಹುತೇಕ ಜನರು ಹೊಸ ಕಾರು ಖರೀದಿಗೆ ಮುಂದಾಗುತ್ತಿಲ್ಲ. ಹೀಗಾಗಿ ಹಳೆ ಕಾರುಗಳಿಗೆ ಒಮ್ಮೆಲೇ ಡಿಮ್ಯಾಂಡ್ ಹೆಚ್ಚಿದೆ.
ಮಾರುಕಟ್ಟೆಯಲ್ಲಿ ಐದು ಲಕ್ಷದೊಳಗಿನ ಹಳೆ ಕಾರುಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಆದರೆ ಮಾರುಕಟ್ಟೆಯಲ್ಲಿ ಹಳೆಯ ಕಾರುಗಳ ಕೊರತೆ ಉಂಟಾಗಿದ್ದು ಅಗತ್ಯಕ್ಕೆ ತಕ್ಕಷ್ಟು ಪೂರೈಕೆ ಆಗುತ್ತಿಲ್ಲ. ಎರಡು ಲಕ್ಷದೊಳಗಿನ ಕಾರುಗಳಿಗಂತೂ ಭಾರೀ ಬೇಡಿಕೆ ಬಂದಿದೆ. 3 ರಿಂದ 5 ಲಕ್ಷದ ವರೆಗಿನ ಕಾರುಗಳಿಗೂ ಬೇಡಿಕೆ ಇದ್ದು ಬಹುತೇಕ ಜನರು ಈ ಬಗ್ಗೆ ವಿಚಾರಿಸುತ್ತಿದ್ದಾರೆ.

ಹಳೆ ಕಾರುಗಳನ್ನು ಸಾಧಾರಣ ಬೆಂಗಳೂರಿನಿಂದಲೇ ಹೆಚ್ಚಾಗಿ ತರಿಸಿಕೊಳ್ಳುತ್ತಿದ್ದೇವೆ. ಆದರೆ ಅಲ್ಲಿಯೂ ಕಾರುಗಳನ್ನು ಮಾರುವುದಕ್ಕೆ ಜನರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಕರಾವಳಿ ಜಿಲ್ಲೆಗಳಿಗೆ ಹಳೆಯ ಕಾರುಗಳ ಪೂರೈಕೆ ನಿಂತು ಹೋಗಿದೆ ಎಂದು ಹಳೆಯ ಕಾರುಗಳ ಏಜೆಂಟ್ ಒಬ್ಬರು ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆಗಳಲ್ಲಿ ಪ್ರಯಾಣಿಸಲು ಪ್ರಯಾಣಿಕರು ಹಿಂಜರಿಯುತ್ತಿದ್ದಾರೆ. ಬದಲಿಗೆ ಸಣ್ಣ ಕಾರು ಇದ್ದರೆ ಆಗಬಹುದು ಎಂದು ಹುಡುಕಾಟದಲ್ಲಿ ತೊಡಗಿದ್ದಾರೆ. ಇದರಿಂದಾಗಿ ಹಳೆ ಕಾರುಗಳಿಗೆ ಬೇಡಿಕೆ ಕಂಡುಬಂದಿದೆ. ಇಎಂಐ ಪಾವತಿಸಲು ಸಾಧ್ಯವಾಗದ ಜನರು ಮಾತ್ರ ಕಾರುಗಳನ್ನು ಮಾರಾಟ ಮಾಡುತ್ತಿದ್ದಾರೆ. ಹೊಸ ಕಾರು ಖರೀದಿಗಾಗಿ ಯಾರು ಮುಂದಾಗುತ್ತಿಲ್ಲ ಎನ್ನುವುದು ಕಾರ್ ಡೀಲರ್ ಒಬ್ಬರ ಮಾತು.
ಕಾರುಗಳ ಜೊತೆಗೆ ಹಳೆಯ ಬೈಕ್ ಗಳಿಗೂ ಬೇಡಿಕೆ ಹೆಚ್ಚಿದೆ. ಕಳೆದ ತಿಂಗಳು ಬೈಕ್ ಡೀಲರ್ ಗಳ ಬಳಿ ನೋಂದಣಿ ಮಾಡುವವರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ. ಇದರಿಂದಾಗಿ ಸ್ಕ್ರಾಪ್ ಹೋಗಿದ್ದ ಬೈಕ್ ಗಳನ್ನೂ ಗ್ಯಾರೇಜ್ ಗಳಲ್ಲಿ ದುರಸ್ತಿ ಮಾಡಿ ಮಾರಾಟಕ್ಕೆ ಸಿದ್ಧಗೊಳಿಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm