ಬ್ರೇಕಿಂಗ್ ನ್ಯೂಸ್
14-06-22 01:34 pm Mangalore Correspondent ಕರಾವಳಿ
ಮಂಗಳೂರು, ಜೂನ್ 14: ಮಂಗಳೂರು ನಗರದಲ್ಲಿ ಏಂಟಿ ಟೆರರಿಸಂ ಸ್ಕ್ವಾಡ್ ಅನ್ನುವ ಹೊಸ ಘಟಕವನ್ನು ಅಸ್ತಿತ್ವಕ್ಕೆ ತರಲಾಗಿದೆ. ನಗರ ಸಶಸ್ತ್ರ ಮೀಸಲು ಪಡೆಯಿಂದ ಆಯ್ದ 35 ಸಿಬಂದಿಯನ್ನು ಬೆಂಗಳೂರಿನಲ್ಲಿ ವಿಶೇಷ ತರಬೇತುಗೊಳಿಸಿ ಭಯೋತ್ಪಾದಕ ವಿರೋಧಿ ದಳವನ್ನು ಹೊಸತಾಗಿ ರಚಿಸಲಾಗಿದೆ.
ಪ್ರತೀ ಜಿಲ್ಲೆಯಲ್ಲಿ ಕ್ವಿಕ್ ರೆಸ್ಪಾನ್ಸ್ ಟೀಮ್ (ಕ್ಯುಆರ್ ಟಿ) ಅನ್ನುವ ವಿಭಾಗ ಇದೆ. ಸಿಎಆರ್ ಯೂನಿಟ್ ನಲ್ಲಿರುವ ಈ ಸಿಬಂದಿಯನ್ನು ಬೆಂಗಳೂರಿನಲ್ಲಿ ವಿಶೇಷ ತರಬೇತಿಗೆ ಕಳಿಸಲಾಗುತ್ತದೆ. ಕ್ವಿಕ್ ರೆಸ್ಪಾನ್ಸ್ ಟೀಮ್ ಸೇರಬೇಕಿದ್ದಲ್ಲಿ ಬೆಂಗಳೂರಿನ ಕೂಡ್ಲು ಎಂಬಲ್ಲಿ ಸೆಂಟರ್ ಫಾರ್ ಕೌಂಟರ್ ಟೆರರಿಸಂ (ಸಿಸಿಟಿ) ಅನ್ನುವ ಘಟಕದಲ್ಲಿ ತರಬೇತು ಪಡೆಯಬೇಕು. ಪ್ರತಿ ವರ್ಷ ಈ ರೀತಿಯ ತರಬೇತಿಗೆ 30 ಸಿಬಂದಿಯನ್ನು ಕಳಿಸಲಾಗುತ್ತದೆ. ಈ ಬಾರಿ ಮಂಗಳೂರಿನ ಸಿಎಆರ್ ವಿಭಾಗದಿಂದ 35 ಮಂದಿ ತರಬೇತಿ ಪಡೆದು ಬಂದಿದ್ದಾರೆ ಎಂದು ನಗರ ಕಾನೂನು ಸುವ್ಯವಸ್ಥೆ ವಿಭಾಗದ ಉಪಾಯುಕ್ತ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ನಗರ ಭಾಗದಲ್ಲಿ ಭಯೋತ್ಪಾದನಾ ಚಟುವಟಿಕೆಯಾದಲ್ಲಿ ಹೇಗೆ ಎದುರಿಸಬೇಕು, ಜನರ ಮಧ್ಯೆ ಕಾರ್ಯ ನಿರ್ವಹಿಸುವುದು ಹೇಗೆ ಎನ್ನುವ ಬಗ್ಗೆ ತರಬೇತಿ ನೀಡಲಾಗುತ್ತದೆ. ವಿಶೇಷವಾಗಿ ಸಶಸ್ತ್ರ ಬಳಕೆ ಬಗ್ಗೆ ಅವರಿಗೆ ತರಬೇತಿ ನೀಡಲಾಗುವುದು ಎಂದು ಡಿಸಿಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ತರಬೇತಿ ಮುಗಿಸಿ ಬಂದ 35 ಮಂದಿಯಿಂದ ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಗೌರವ ವಂದನೆ ಸ್ವೀಕರಿಸಿದರು. ಡಿಸಿಪಿಗಳಾದ ಹರಿರಾಮ್ ಶಂಕರ್, ದಿನೇಶ್ ಕುಮಾರ್ ಉಪಸ್ಥಿತರಿದ್ದರು.
ಮಾಹಿತಿ ಪ್ರಕಾರ, ಈ ಹಿಂದೆ ಇದ್ದ ಕ್ವಿಕ್ ರೆಸ್ಪಾನ್ಸ್ ತಂಡವನ್ನೇ ಸಿಸಿಟಿ ಎಂದು ಹೆಸರಿಸಲಾಗುತ್ತದೆ. ಹೊಸ ತಂಡಕ್ಕೆ ಸುಬ್ರಹ್ಮಣ್ಯ ಎಂ. ಚೀಫ್ ಆಗಿರುತ್ತಾರೆ. ತಲಾ 15 ಮಂದಿಯ ಎರಡು ತಂಡ ಇರುತ್ತದೆ. ಐದು ಜನ ಹೆಚ್ಚುವರಿ ಸಿಬಂದಿ ಇರುತ್ತಾರೆ. ಸಾಮಾನ್ಯವಾಗಿ ವಿಐಪಿಗಳು, ಮುಖ್ಯಮಂತ್ರಿ ಬರುವ ಸಂದರ್ಭದಲ್ಲಿ ಇವರನ್ನು ಭದ್ರತೆಗೆ ನಿಯೋಜನೆ ಮಾಡಲಾಗುತ್ತದೆ. ಇವರಿಗೆ ಪ್ರತ್ಯೇಕ ಸಮವಸ್ತ್ರವೂ ಇರುತ್ತದೆ.
City anti-terrorism squad under the internal security department is ready to serve the city as well as the limits of commissionerate. The team has 35 police personnel. The team undertook two months of training at Centre for Counter Terrorism (CCT) at Koodlu of Bengaluru.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm