ಬ್ರೇಕಿಂಗ್ ನ್ಯೂಸ್
29-09-20 04:27 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 29: ಘನ ತ್ಯಾಜ್ಯಗಳನ್ನು ನಿಗದಿತ ಸಮಯದಲ್ಲಿ ವಿಲೇವಾರಿ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ವಿಫಲವಾದರೆ ಮಂಗಳೂರು ನಗರ ಪಾಲಿಕೆಯ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಗರ ವ್ಯಾಪ್ತಿಯಲ್ಲಿ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಪರವಾನಗಿ ನೀಡುವುದನ್ನು ತಡೆಯಬೇಕಾಗಬಹುದು ಎಂದು ಮಂಗಳೂರು ನಗರ ಪಾಲಿಕೆಗೆ ಹೈಕೋರ್ಟ್ ಎಚ್ಚರಿಕೆ ನೀಡಿದೆ.
ಪಚ್ಚನಾಡಿ ವಿಲೇವಾರಿ ಘಟಕದಲ್ಲಿ ಘನತ್ಯಾಜ್ಯದ ಭೂಕುಸಿತದಿಂದಾಗಿ ಪಚ್ಚನಾಡಿ, ಕುಡುಪು ಮತ್ತು ಮಂದಾರ ಪ್ರದೇಶದಲ್ಲಿ ಉದ್ಭವಿಸಿರುವ ಗಂಭೀರ ಸಮಸ್ಯೆಗಳಿಗೆ ಸಂಬಂಧಿಸಿದ ಪ್ರಕರಣ ಮುಖ್ಯ ನ್ಯಾಯಮೂರ್ತಿ ಅವರನ್ನು ಒಳಗೊಂಡ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿದ್ದು ಈ ಸಂದರ್ಭ ಹೈಕೋರ್ಟ್ ಮಂಗಳೂರು ನಗರ ಪಾಲಿಕೆಗೆ ಎಚ್ಚರಿಕೆ ನೀಡಿದೆ. ಪಚ್ಚನಾಡಿ ಪ್ರಕರಣದ ಹಿನ್ನೆಲೆಯಲ್ಲಿ ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿತ್ತು.

ವಾದ - ಪ್ರತಿವಾದಗಳ ಮಧ್ಯೆ ತ್ಯಾಜ್ಯ ವಿಲೇವಾರಿ ಸಮಸ್ಯೆಯನ್ನು ಪರಿಹರಿಸಲು ನಗರ ಪಾಲಿಕೆ ವಿಫಲವಾದರೆ ಅಥವಾ ಘನತ್ಯಾಜ್ಯ ನಿರ್ವಹಣಾ ನಿಯಮಗಳು - 2016 ರ ಪ್ರಕಾರ ತ್ಯಾಜ್ಯ ವಿಲೇವಾರಿ ಮಾಡಲು ಕ್ರಮಗಳನ್ನು ಜಾರಿಗೆ ತರಲು ವಿಫಲವಾದರೆ, ನಗರ ವ್ಯಾಪ್ತಿಯಲ್ಲಿ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಪರವಾನಗಿ ನೀಡುವುದನ್ನು ತಡೆಯಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದೆ. "ಸರ್ಕಾರ ಒದಗಿಸಿದ ಮಾಹಿತಿಯ ಪ್ರಕಾರ, ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿದಿನ 200 ಮೆಟ್ರಿಕ್ ಟನ್ ಘನತ್ಯಾಜ್ಯವನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುತ್ತಿದೆ. ಹಾಗಾಗಿ 2017 ರಿಂದ ಈವರೆಗೆ ನಗರದಲ್ಲಿ ಪ್ರತಿದಿನ ಉತ್ಪತ್ತಿಯಾಗಿರುವ ಘನತ್ಯಾಜ್ಯದ ಪ್ರಮಾಣವನ್ನು ನಗರ ಪಾಲಿಕೆ ತಿಳಿಸಬೇಕು. ಹಾಗೆಯೇ 2017 ರಿಂದ ಈವರೆಗೆ ಎಷ್ಟು ಹೊಸ ಕಟ್ಟಡಗಳಿಗೆ ಪರವಾನಗಿಗಳನ್ನು ನೀಡಲಾಗಿದೆ ಎಂದು ಕೂಡ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ನ್ಯಾಯಪೀಠ ಆದೇಶಿಸಿದೆ.

ಅಲ್ಲದೆ, ನಗರದ ಘನತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಲಹೆ ಮತ್ತು ಮಾರ್ಗದರ್ಶನ ಪಡೆಯಲು ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆಯನ್ನು ನೇಮಿಸಲು ಪಾಲಿಕೆ ಮುಂದಾಗಿದೆಯೇ ಎಂಬುದನ್ನು ಕೂಡ ನ್ಯಾಯಪೀಠಕ್ಕೆ ತಿಳಿಸುವಂತೆ ಸೂಚಿಸಿದೆ. ಪಚ್ಚನಾಡಿ ದುರಂತದ ವಿಚಾರದಲ್ಲಿ ಅಧಿಕಾರಿಗಳ ವಿರುದ್ಧ ಈವರೆಗೆ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಹೈಕೋರ್ಟ್ ಪ್ರಶ್ನಿಸಿದೆ. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 12 ಕ್ಕೆ ಕೋರ್ಟ್ ಮುಂದೂಡಿದೆ.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm