ಬ್ರೇಕಿಂಗ್ ನ್ಯೂಸ್
16-06-22 08:03 pm Mangalore Correspondent ಕರಾವಳಿ
ಉಳ್ಳಾಲ, ಜೂ.16 : ಮುನ್ನೂರು ಗ್ರಾಮದ ಭಂಡಾರಬೈಲು ಎಂಬಲ್ಲಿ ರಸ್ತೆ ಬದಿಯಲ್ಲೇ ತ್ಯಾಜ್ಯದ ರಾಶಿ ಸುರಿಯುತ್ತಿದ್ದು, ತ್ಯಾಜ್ಯ ಸುರಿಯುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗ್ರಾಪಂ ಅಧ್ಯಕ್ಷರನ್ನ ಗ್ರಾಮಸ್ಥರು ತರಾಟೆಗೆ ತೆಗೆದ ಘಟನೆ ನಡೆದಿದೆ.
ಭಂಡಾರ ಬೈಲು ಕಾರಣೀಕದ ಪಂಜಂದಾಯ ದೈವಸ್ಥಾನದ ಬಳಿಯ ರಸ್ತೆ ಅಂಚಲ್ಲೇ ಭಾರೀ ಪ್ರಮಾಣದಲ್ಲಿ ಗಬ್ಬು ತ್ಯಾಜ್ಯವನ್ನ ಸುರಿಯಲಾಗುತ್ತಿದೆ. ಹತ್ತಿರದಲ್ಲೇ ಮುನ್ನೂರು ಗ್ರಾಮ ಪಂಚಾಯತ್ ತ್ಯಾಜ್ಯ ವಿಲೇವಾರಿ ಘಟಕವಿದ್ದರೂ ಅದು ನಾದುರಸ್ತಿಯಲ್ಲಿದ್ದು ನಿಷ್ಕ್ರಿಯವಾಗಿದೆ.


ಗುರುವಾರ ನೆರೆಯ ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ತ್ಯಾಜ್ಯವನ್ನು ಪಿಕ್ ಅಪ್ ವಾಹನದಲ್ಲಿ ತಂದು ಸುರಿದ ವೇಳೆ ಗ್ರಾಮಸ್ಥರು ವಾಹನ ಚಾಲಕನಿಗೆ ಘೆರಾವ್ ಹಾಕಿದ್ದಾರೆ. ಆದರೆ ಚಾಲಕನು ಮುನ್ನೂರು ಪಂಚಾಯತ್ ಅನುಮತಿ ಮೇರೆಗೆ ಕಸ ತಂದು ಸುರಿದಿರುವುದಾಗಿ ಹೇಳಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ.
ಕೆರಳಿದ ಗ್ರಾಮಸ್ಥರು ಗ್ರಾ.ಪಂ ಕಚೇರಿಗೆ ತೆರಳಿ ಪಂಚಾಯತ್ ಅಧ್ಯಕ್ಷ ವಿಲ್ಫ್ರೆಡ್ ಡಿ ಸೋಜ ಅವರನ್ನೇ ತರಾಟೆಗೆ ತೆಗೆದಿದ್ದಾರೆ. ಗ್ರಾಮಸ್ಥರನ್ನ ಉದ್ದೇಶಿಸಿ ಮಾತನಾಡಿದ ವಿಲ್ಫ್ರೆಡ್ ಅವರು ರಸ್ತೆ ಬದಿಯಲ್ಲಿ ತ್ಯಾಜ್ಯ ಸುರಿಯುವ ವಿಚಾರ ತನ್ನ ಗಮನಕ್ಕೆ ಬಂದಿಲ್ಲ. ರಸ್ತೆ ಬದಿ ರಾಶಿ ಬಿದ್ದಿರುವ ತ್ಯಾಜ್ಯವನ್ನ ಶೀಘ್ರ ವಿಲೇವಾರಿ ಮಾಡುತ್ತೇವೆ. ಸಿಸಿಟಿವಿ ದಾಖಲೆ ಪರಿಶೀಲಿಸಿ ಯಾರು ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದಿದ್ದಾರೋ ಅವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಸಮಜಾಯಿಷಿ ನೀಡಿದರು.


ಗ್ರಾಮದಲ್ಲಿ 15,000 ದಷ್ಟು ಜನಸಂಖ್ಯೆ ಇದೆ. ಕೆಲ ಗ್ರಾಮಸ್ಥರು ತಮ್ಮ ಮನೆಯಲ್ಲೇ ತ್ಯಾಜ್ಯ ವಿಲೇವಾರಿ ಮಾಡಲು ವ್ಯವಸ್ಥೆ ಇದ್ದರೂ ಕಸದ ವಾಹನವನ್ನೇ ಅವಲಂಬಿತವಾಗಿದ್ದಾರೆ. ಮಂಗಳೂರಿನ ವಿಲೇವಾರಿ ಘಟಕಕ್ಕೆ ತ್ಯಾಜ್ಯ ರವಾನಿಸಲು ತಾಂತ್ರಿಕವಾಗಿ ಅಡಚಣೆ ಉಂಟಾಗಿದೆ. ಶಾಸಕ ಯು.ಟಿ ಖಾದರ್ ಅವರ ಮಧ್ಯಸ್ಥಿಕೆಯಲ್ಲಿ ಎಲ್ಲವೂ ಸರಿಹೋಗಲಿದ್ದು ಮತ್ತೆ ಸಮರ್ಪಕವಾಗಿ ತ್ಯಾಜ್ಯ ನಿರ್ವಹಣೆ ಮಾಡಲಿದ್ದೇವೆ. ಗ್ರಾಮಕ್ಕೆ ತ್ಯಾಜ್ಯ ವಿಲೇವಾರಿಗೆಂದೇ ಈಗಾಗಲೇ ಭಂಡಾರಬೈಲು ಪರಿಸರದಲ್ಲಿ ಒಂದು ಎಕರೆ ಜಮೀನು ಮಂಜೂರಾಗಿದ್ದು ವಿಲೇವಾರಿ ಘಟಕ ಶೀಘ್ರವೇ ಆರಂಭಗೊಳ್ಳಲಿದ್ದು ನಂತರ ತ್ಯಾಜ್ಯ ನಿರ್ವಹಣೆಯ ಸಮಸ್ಯೆ ಶಾಶ್ವತವಾಗಿ ಬಗೆಹರಿಯಲಿದೆ ಎಂದು ವಿಲ್ಫ್ರೆಡ್ ಡಿಸೋಜ ಹೇಳಿದ್ದಾರೆ.
Mangalore Residents slams Munnuru gram panchayat officials for tons of garbage on main road.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 11:52 am
HK News Desk
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm