ಬ್ರೇಕಿಂಗ್ ನ್ಯೂಸ್
16-06-22 08:03 pm Mangalore Correspondent ಕರಾವಳಿ
ಉಳ್ಳಾಲ, ಜೂ.16 : ಮುನ್ನೂರು ಗ್ರಾಮದ ಭಂಡಾರಬೈಲು ಎಂಬಲ್ಲಿ ರಸ್ತೆ ಬದಿಯಲ್ಲೇ ತ್ಯಾಜ್ಯದ ರಾಶಿ ಸುರಿಯುತ್ತಿದ್ದು, ತ್ಯಾಜ್ಯ ಸುರಿಯುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗ್ರಾಪಂ ಅಧ್ಯಕ್ಷರನ್ನ ಗ್ರಾಮಸ್ಥರು ತರಾಟೆಗೆ ತೆಗೆದ ಘಟನೆ ನಡೆದಿದೆ.
ಭಂಡಾರ ಬೈಲು ಕಾರಣೀಕದ ಪಂಜಂದಾಯ ದೈವಸ್ಥಾನದ ಬಳಿಯ ರಸ್ತೆ ಅಂಚಲ್ಲೇ ಭಾರೀ ಪ್ರಮಾಣದಲ್ಲಿ ಗಬ್ಬು ತ್ಯಾಜ್ಯವನ್ನ ಸುರಿಯಲಾಗುತ್ತಿದೆ. ಹತ್ತಿರದಲ್ಲೇ ಮುನ್ನೂರು ಗ್ರಾಮ ಪಂಚಾಯತ್ ತ್ಯಾಜ್ಯ ವಿಲೇವಾರಿ ಘಟಕವಿದ್ದರೂ ಅದು ನಾದುರಸ್ತಿಯಲ್ಲಿದ್ದು ನಿಷ್ಕ್ರಿಯವಾಗಿದೆ.


ಗುರುವಾರ ನೆರೆಯ ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ತ್ಯಾಜ್ಯವನ್ನು ಪಿಕ್ ಅಪ್ ವಾಹನದಲ್ಲಿ ತಂದು ಸುರಿದ ವೇಳೆ ಗ್ರಾಮಸ್ಥರು ವಾಹನ ಚಾಲಕನಿಗೆ ಘೆರಾವ್ ಹಾಕಿದ್ದಾರೆ. ಆದರೆ ಚಾಲಕನು ಮುನ್ನೂರು ಪಂಚಾಯತ್ ಅನುಮತಿ ಮೇರೆಗೆ ಕಸ ತಂದು ಸುರಿದಿರುವುದಾಗಿ ಹೇಳಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ.
ಕೆರಳಿದ ಗ್ರಾಮಸ್ಥರು ಗ್ರಾ.ಪಂ ಕಚೇರಿಗೆ ತೆರಳಿ ಪಂಚಾಯತ್ ಅಧ್ಯಕ್ಷ ವಿಲ್ಫ್ರೆಡ್ ಡಿ ಸೋಜ ಅವರನ್ನೇ ತರಾಟೆಗೆ ತೆಗೆದಿದ್ದಾರೆ. ಗ್ರಾಮಸ್ಥರನ್ನ ಉದ್ದೇಶಿಸಿ ಮಾತನಾಡಿದ ವಿಲ್ಫ್ರೆಡ್ ಅವರು ರಸ್ತೆ ಬದಿಯಲ್ಲಿ ತ್ಯಾಜ್ಯ ಸುರಿಯುವ ವಿಚಾರ ತನ್ನ ಗಮನಕ್ಕೆ ಬಂದಿಲ್ಲ. ರಸ್ತೆ ಬದಿ ರಾಶಿ ಬಿದ್ದಿರುವ ತ್ಯಾಜ್ಯವನ್ನ ಶೀಘ್ರ ವಿಲೇವಾರಿ ಮಾಡುತ್ತೇವೆ. ಸಿಸಿಟಿವಿ ದಾಖಲೆ ಪರಿಶೀಲಿಸಿ ಯಾರು ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದಿದ್ದಾರೋ ಅವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಸಮಜಾಯಿಷಿ ನೀಡಿದರು.


ಗ್ರಾಮದಲ್ಲಿ 15,000 ದಷ್ಟು ಜನಸಂಖ್ಯೆ ಇದೆ. ಕೆಲ ಗ್ರಾಮಸ್ಥರು ತಮ್ಮ ಮನೆಯಲ್ಲೇ ತ್ಯಾಜ್ಯ ವಿಲೇವಾರಿ ಮಾಡಲು ವ್ಯವಸ್ಥೆ ಇದ್ದರೂ ಕಸದ ವಾಹನವನ್ನೇ ಅವಲಂಬಿತವಾಗಿದ್ದಾರೆ. ಮಂಗಳೂರಿನ ವಿಲೇವಾರಿ ಘಟಕಕ್ಕೆ ತ್ಯಾಜ್ಯ ರವಾನಿಸಲು ತಾಂತ್ರಿಕವಾಗಿ ಅಡಚಣೆ ಉಂಟಾಗಿದೆ. ಶಾಸಕ ಯು.ಟಿ ಖಾದರ್ ಅವರ ಮಧ್ಯಸ್ಥಿಕೆಯಲ್ಲಿ ಎಲ್ಲವೂ ಸರಿಹೋಗಲಿದ್ದು ಮತ್ತೆ ಸಮರ್ಪಕವಾಗಿ ತ್ಯಾಜ್ಯ ನಿರ್ವಹಣೆ ಮಾಡಲಿದ್ದೇವೆ. ಗ್ರಾಮಕ್ಕೆ ತ್ಯಾಜ್ಯ ವಿಲೇವಾರಿಗೆಂದೇ ಈಗಾಗಲೇ ಭಂಡಾರಬೈಲು ಪರಿಸರದಲ್ಲಿ ಒಂದು ಎಕರೆ ಜಮೀನು ಮಂಜೂರಾಗಿದ್ದು ವಿಲೇವಾರಿ ಘಟಕ ಶೀಘ್ರವೇ ಆರಂಭಗೊಳ್ಳಲಿದ್ದು ನಂತರ ತ್ಯಾಜ್ಯ ನಿರ್ವಹಣೆಯ ಸಮಸ್ಯೆ ಶಾಶ್ವತವಾಗಿ ಬಗೆಹರಿಯಲಿದೆ ಎಂದು ವಿಲ್ಫ್ರೆಡ್ ಡಿಸೋಜ ಹೇಳಿದ್ದಾರೆ.
Mangalore Residents slams Munnuru gram panchayat officials for tons of garbage on main road.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm