ಬೆಳ್ಳಂಬೆಳಗ್ಗೆ ಎಸಿಬಿ ರೈಡ್ ; ಉಡುಪಿಯ ಭ್ರಷ್ಟ ಇಂಜಿನಿಯರ್ ಮನೆಯಲ್ಲಿ ಕೇಜಿಗಟ್ಟಲೆ ಚಿನ್ನ ಪತ್ತೆ

17-06-22 11:18 am       Udupi Correspondent   ಕರಾವಳಿ

ರಾಜ್ಯಾದ್ಯಂತ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದು, ಉಡುಪಿಯಲ್ಲಿ ಸಣ್ಣ ನೀರಾವರಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ಎಂಬಾತನ ಮನೆ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಆಸ್ತಿಯನ್ನು ಪತ್ತೆ ಮಾಡಿದ್ದಾರೆ.

ಉಡುಪಿ, ಜೂನ್ 17: ರಾಜ್ಯಾದ್ಯಂತ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದು, ಉಡುಪಿಯಲ್ಲಿ ಸಣ್ಣ ನೀರಾವರಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ಎಂಬಾತನ ಮನೆ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಆಸ್ತಿಯನ್ನು ಪತ್ತೆ ಮಾಡಿದ್ದಾರೆ.

ಉಡುಪಿಯ ಕೊರಂಗ್ರಪಾಡಿಯಲ್ಲಿರುವ ವೈಭವೋಪೇತ ಮನೆಗೆ ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಇಂಜಿನಿಯರ್ ವಿರುದ್ಧ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ, ಮನೆಯಲ್ಲಿ ಅಡಗಿಸಿಟ್ಟಿದ್ದ ಎರಡು ಕೇಜಿಗೂ ಹೆಚ್ಚು ಚಿನ್ನವನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

ಮನೆಯಲ್ಲಿ ಇರಿಸಿಕೊಂಡಿದ್ದ ಸುಮಾರು 5 ಲಕ್ಷ ರೂಪಾಯಿ ನಗದನ್ನು ಪತ್ತೆ ಮಾಡಲಾಗಿದೆ. ಅಲ್ಲದೆ, ಚಿನ್ನದ ತಟ್ಟೆ, ಚಿನ್ನದ ತಗಡು, ಅಪಾರ ಪ್ರಮಾಣದ ಆಭರಣಗಳು ಪತ್ತೆಯಾಗಿವೆ. 15ಕ್ಕೂ ಹೆಚ್ಚು ಚಿನ್ನದ ಬಳೆ, 30ಕ್ಕೂ ಹೆಚ್ಚು ಚಿನ್ನದ ಸರಗಳು, ನೆಕ್ಲೆಸ್, ಬ್ರಾಸ್ಲೇಟ್ ಪತ್ತೆಯಾಗಿವೆ. ಇದಲ್ಲದೆ, ಚಿನ್ನದ ಬೇರೆ ಬೇರೆ ರೀತಿಯ ಒಡವೆಗಳು, ಉಂಗುರ, ದೇವರ ಮೂರ್ತಿಯನ್ನೂ ಪತ್ತೆ ಮಾಡಲಾಗಿದೆ. ಹಲವಾರು ಕಡೆ ಮಾಡಿಟ್ಟಿರುವ ಆಸ್ತಿ, ದಾಖಲೆ ಪತ್ರಗಳನ್ನೂ ವಶಕ್ಕೆ ಪಡೆದಿದ್ದಾರೆ.

ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ಸೇರಿದಂತೆ 15 ಅಧಿಕಾರಿಗಳ ತಂಡ ಈ ದಾಳಿಯನ್ನು ಮಾಡಿದ್ದು, ಬೆಳ್ಳಂಬೆಳಗ್ಗೆ ಭ್ರಷ್ಟ ಇಂಜಿನಿಯರ್ ಗೆ ಶಾಕ್ ಕೊಟ್ಟಿದೆ.

ACB sleuths who raided the house of assistant engineer of irrigation department Harish at Korangrapadi on Friday June 17, have unearthed huge valuables and cash.The ABC officials found more than two kg of gold, Rs five lac cash, high-end watches, three vehicles, golden plate, golden eating utensil, more than 15 golden bangles, more than 30 golden chains, necklace, bracelet, other golden ornaments, finger rings and a gold idol.