ಬ್ರೇಕಿಂಗ್ ನ್ಯೂಸ್
17-06-22 02:12 pm Mangalore Correspondent ಕರಾವಳಿ
ಮಂಗಳೂರು, ಜೂನ್ 17: ಬಿಬಿಎ ಪದವಿ ಕಲಿಯುತ್ತಿದ್ದ ಹುಡುಗನೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತೊಕ್ಕೊಟ್ಟು ಸಮೀಪದ ಕುಂಪಲದಲ್ಲಿ ನಡೆದಿದೆ.
ಹರ್ದೀಪ್ (19) ಮೃತ ಯುವಕ. ಮನೆಯಲ್ಲಿ ತಾಯಿ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದುದನ್ನು ನೋಡಲಾಗದೆ ಸಾವಿಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ. ಕುಂಪಲದ ಕರ್ನಾಟಕ ಹೌಸಿಂಗ್ ಬೋರ್ಡ್ ಕಾಲನಿಯಲ್ಲಿ ಅಪಾರ್ಟ್ಮೆಂಟ್ ಒಂದರಲ್ಲಿ ಬಾಡಿಗೆಗಿದ್ದ ಮನೆಯಲ್ಲಿ ಘಟನೆ ನಡೆದಿದೆ.
ಈತನ ತಾಯಿ ರೇಖಾ ಅವರು ಮಸಾಲಾ ಪೌಡರ್ ಮಾರಾಟ ಮಾಡುತ್ತಿದ್ದು, ಅಲ್ಲಿಯೇ ಪಕ್ಕದಲ್ಲಿ ಅಂಗಡಿ ಹೊಂದಿದ್ದರು. ಆದರೆ ವ್ಯವಹಾರದಲ್ಲಿ ನಷ್ಟವಾಗಿದ್ದರಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು. ಎರಡು ವರ್ಷದ ಹಿಂದೆ ಗಂಡ- ಹೆಂಡತಿ ಮಧ್ಯೆ ಜಗಳವಾಗಿದ್ದರಿಂದ ಈಕೆಯ ಗಂಡ ಬೇರೆಯೇ ಉಳಿದುಕೊಂಡಿದ್ದರು. ಇದರಿಂದ ಮನೆಯಲ್ಲಿ ಬಡತನ, ಜಗಳದಿಂದಾಗಿ ಬೇಸತ್ತಿದ್ದ ಯುವಕ ಜಂಜಾಟವೇ ಬೇಡ ಎಂದು ಬದುಕನ್ನೇ ಮುಗಿಸಿದ್ದಾನೆ ಎನ್ನುವ ಮಾಹಿತಿ ಪೊಲೀಸರಿಂದ ಲಭಿಸಿದೆ.
ಮಂಗಳೂರಿನ ಶ್ರೀದೇವಿ ಕಾಲೇಜಿನಲ್ಲಿ ಬಿಬಿಎ ಪದವಿ ಓದುತ್ತಿದ್ದರೂ, ಬುಧವಾರ ಹರ್ದೀಪ್ ಕಾಲೇಜಿಗೆ ಹೋಗಿರಲಿಲ್ಲ. ಇನ್ನೊಬ್ಬ ತಂಗಿ ಕಾಲೇಜಿಗೆ ಹೋಗಿದ್ದರು. ತಾಯಿ ಅಂಗಡಿಗೆ ಸಾಮಾನು ತರಲೆಂದು ಹೋಗಿದ್ದಾಗ ಹುಡುಗ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಮೊದಲೇ ಸಂಕಷ್ಟದಲ್ಲಿದ್ದ ತಾಯಿ ಇದ್ದೊಬ್ಬ ಮಗನನ್ನು ಕಳಕೊಂಡು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾಳೆ. ತಂದೆ-ತಾಯಿ ಜಗಳದಲ್ಲಿ ಕೂಸು ಬಡವಾಯ್ತು ಅನ್ನುವಂತಾಗಿದೆ ಇವರ ಕತೆ. ಇವರು ಪುತ್ತೂರು ಮೂಲದವರಾಗಿದ್ದು ಕುಂಪಲದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು.
Youth died by suicide at his residence at Bagambila on Thursday June 16 evening.Hardeep (19) is the youth who ended his life. He was studying in second year BBA in a private college in the city. Though he was rushed to a private hospital nearby, the doctors declared him brought dead.It is suspected that the deceased was facing financial difficulties which led him to take this extreme step.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm