ಬ್ರೇಕಿಂಗ್ ನ್ಯೂಸ್
18-06-22 09:13 pm Mangalore Correspondent ಕರಾವಳಿ
ಪುತ್ತೂರು, ಜೂನ್ 18 : ಕ್ಲಬ್ ಹೌಸ್ ಚರ್ಚೆಯಲ್ಲಿ ಹಿಂದು ದೇವರನ್ನು ಅವಹೇಳನ ಮಾಡಿದ ಆರೋಪಕ್ಕೀಡಾಗಿರುವ ಕಾಂಗ್ರೆಸ್ ನಾಯಕಿ ಶೈಲಜಾ ಅಮರನಾಥ್ ಅವರ ಪುತ್ತೂರಿನ ಮನೆಗೆ ಕಿಡಿಗೇಡಿಗಳು ದಾಳಿ ಮಾಡಿದ್ದಾರೆ.
ಶೈಲಜಾ, ಮಹಿಳಾ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದು ಪುತ್ತೂರಿನ ಬಪ್ಪಳಿಗೆಯಲ್ಲಿರುವ ಮನೆಗೆ ಕಿಡಿಗೇಡಿಗಳು ಕಲ್ಲೆಸೆದು ಕಿಟಕಿಯ ಗಾಜು ಒಡೆದು ಹಾಕಿದ್ದಲ್ಲದೆ ಹಳೆ ಆಯಿಲ್ ಎಣ್ಣೆಯ ಸುರಿದಿದ್ದಾರೆ. ಶೈಲಜಾ ಕಾಂಗ್ರೆಸ್ ರಾಜ್ಯ ಘಟಕದ ಐಟಿ ಸೆಲ್ ಕಾರ್ಯದರ್ಶಿಯೂ ಆಗಿದ್ದು ಇತ್ತೀಚೆಗೆ ಕ್ಲಬ್ ಹೌಸ್ ನಲ್ಲಿ ಮನಬಂದಂತೆ ಮಾತನಾಡಿರುವ ಆಡಿಯೋ ವೈರಲ್ ಆಗಿದೆ. ಶ್ರೀರಾಮ, ಸೀತಾಮಾತೆ, ಹನುಮಂತ ದೇವರ ಬಗ್ಗೆ ಅಶ್ಲೀಲ ರೀತಿಯಲ್ಲಿ ಕ್ಲಬ್ ಹೌಸ್ ಚರ್ಚೆಯಲ್ಲಿ ಮಾತನಾಡಿದ್ದರು.
ಶ್ರೀರಾಮ ಸಲಿಂಗಕಾಮಿ, ರಾಮನಿಗೆ ಹಂದಿ ಮಾಂಸ ಇಷ್ಟ ಎಂದು ಶೈಲಜಾ ಅವಹೇಳನ ಮಾಡಿದ್ದು ಅದರ ಆಡಿಯೋ ವೈರಲ್ ಆಗಿದೆ. ಈ ಬಗ್ಗೆ ಪುತ್ತೂರಿ ಠಾಣೆಯಲ್ಲಿ ಹಿಂದು ಸಂಘಟನೆಗಳ ಕಾರ್ಯಕರ್ತರು ಶೈಲಜಾ ಅಮರನಾಥ್ ಸೇರಿ ನಾಲ್ವರ ವಿರುದ್ದ ಪೊಲೀಸ್ ದೂರು ನೀಡಿದ್ದು ಕ್ರಮಕ್ಕೆ ಆಗ್ರಹಿಸಿದ್ದಾರೆ.
ದೂರು ನೀಡಿದ ಬೆನ್ನಲ್ಲೇ ಶನಿವಾರ ಸಂಜೆ ವೇಳೆಗೆ ಶೈಲಜಾ ಮನೆಗೆ ದಾಳಿ ನಡೆಸಲಾಗಿದ್ದು ಆಯಿಲ್ ಎರಚಿ ಅಲ್ಲಿಂದ ಪರಾರಿಯಾಗಿದ್ದಾರೆ. ಗಾಜು ಒಡೆದು ಮನೆಯ ಹೊರಭಾಗಕ್ಕೆ ಆಯಿಲ್ ಎರಚಿ ಹಾನಿ ಮಾಡಿದ್ದಾರೆ. ಸ್ಥಳಕ್ಕೆ ಪುತ್ತೂರು ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಕ್ಲಬ್ ಹೌಸ್ ಚರ್ಚೆಯಲ್ಲಿ ಶೈಲಜಾ ಜೊತೆ ಪ್ರೀತಿ ಶೆಟ್ಟಿ ಮಹಾಲಕ್ಷ್ಮಿ, ಅನಿಲ್, ಪುನೀತ್ ಮತ್ತಿತರರು ಪಾಲ್ಗೊಂಡಿದ್ದು ಅವರ ವಿರುದ್ಧವೂ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಪ್ರವೀಣ್ ಕುಮಾರ್ ಎಂಬವರು ಪೊಲೀಸ್ ದೂರು ನೀಡಿದ್ದರು. ಹಿಂದುಗಳ ಭಾವನೆಗೆ ಧಕ್ಕೆ ತಂದಿರುವುದಾಗಿ ದೂರಿನಲ್ಲಿ ತಿಳಿಸಿದ್ದು ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಜೂ.15 ರಂದು ರಾತ್ರಿ 9 ಗಂಟೆಗೆ ಸಾಮಾಜಿಕ ಜಾಲತಾಣ ಕ್ಲಬ್ ಹೌಸ್ನಲ್ಲಿ ಏರ್ಪಡಿಸಿದ್ದ `ಸಂಡೇ ಅಂಕಲ್ಸ್ ಆರ್ ಮಂಡೇ ಸನ್ಸ್’ ಎಂಬ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಜ್ಯ ನಾಯಕಿ ಶೈಲಜಾ ಅಮರನಾಥ್, ಪ್ರೀತು ಶೆಟ್ಟಿ ಯಾನೆ ಮಹಾಲಕ್ಷ್ಮೀ, ಕಾಂಗ್ರೆಸ್ ಐಟಿ ಸೆಲ್ಲಿನ ಅನಿಲ್, ಪ್ರವೀಣ್, ಪುನೀತ್ ಮುಂತಾದವರು ಭಾಗವಹಿಸಿದ್ದು ಹಿಂದು ದೇವರ ಅವಹೇಳನಗೈದ ಬಗ್ಗೆ ದೂರು ನೀಡಲಾಗಿತ್ತು.
Puttur Indecent remarks on Hindu gods in Club house by congress members, The house of Shilaja Amarnath was attacked by Hindu Organisations by throwing back ink. It is said that Congress IT Cell members have made indecent comments about Hindu Gods during a conversion that was made on Club House. The video of this was leaked on social media. A complaint has been filed by Hindu outfits at Puttur town police station.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm