ಬ್ರೇಕಿಂಗ್ ನ್ಯೂಸ್
20-06-22 03:40 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ಹಿಜಾಬ್ ವಿವಾದ ಏರ್ಪಟ್ಟು ತರಗತಿಗೆ ಹಾಜರಾಗದೆ ಪಟ್ಟು ಹಿಡಿದಿದ್ದ ಐವರು ವಿದ್ಯಾರ್ಥಿನಿಯರು ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಿಂದ ಬೇರೆ ಕಾಲೇಜಿಗೆ ತೆರಳಲು ವರ್ಗಾವಣೆ ಪ್ರಮಾಣಪತ್ರ ಕೇಳಿದ್ದಾರೆ. ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರಿಗೆ ಐವರು ವಿದ್ಯಾರ್ಥಿನಿಯರು ತಮಗೆ ಟಿಸಿ ಕೊಡುವಂತೆ ಪತ್ರ ಬರೆದಿದ್ದಾರೆ.
ವಿದ್ಯಾರ್ಥಿನಿಯರು ಟಿಸಿ ಕೇಳಿದ್ದನ್ನು ಕಾಲೇಜಿನ ಪ್ರಾಂಶುಪಾಲೆ ಅನಸೂಯ ರೈ ದೃಢಪಡಿಸಿದ್ದಾರೆ. ಅಲ್ಲದೆ, ವರ್ಗಾವಣೆ ಪತ್ರ ಕೇಳಿರುವುದರಲ್ಲಿ ಸ್ವಲ್ಪ ಕರೆಕ್ಷನ್ ಇದೆ, ಅದನ್ನು ಸರಿ ಮಾಡಿಕೊಳ್ಳಲು ಹೇಳಿದ್ದೇನೆ. ಸರಿಪಡಿಸಿ ಬಂದ ಕೂಡಲೇ ವರ್ಗಾವಣೆ ಪತ್ರ ನೀಡುವ ಬಗ್ಗೆ ನಿರ್ಧರಿಸುವುದಾಗಿ ತಿಳಿಸಿದ್ದಾರೆ. ಇತ್ತೀಚೆಗೆ ಕಾಲೇಜಿನ ಆಡಳಿತದ ಹಿಜಾಬ್ ನಿರ್ಧಾರವನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸುದ್ದಿಗೋಷ್ಟಿ ನಡೆಸಿದ್ದರು. ವಿದ್ಯಾರ್ಥಿನಿಯರು ಕಾಲೇಜಿನ ವಿರುದ್ಧ ಮಾತನಾಡಿದ್ದಕ್ಕಾಗಿ ಪ್ರಾಂಶುಪಾಲರು ಕಾರಣ ಕೇಳಿ ಶೋಕಾಸ್ ನೋಟೀಸ್ ನೀಡಿದ್ದರು.
ಪದವಿ ಪರೀಕ್ಷೆಗಳ ಮೌಲ್ಯಮಾಪನ ನಡೆಯುತ್ತಿರುವ ಕಾರಣ ಸದ್ಯಕ್ಕೆ ಕಾಲೇಜಿನಲ್ಲಿ ತರಗತಿಗಳು ನಡೆಯುತ್ತಿಲ್ಲ. ಇದರ ಬದಲಿಗೆ ಕೆಲವು ತರಗತಿಗಳಿಗೆ ಆನ್ಲೈನ್ ಕ್ಲಾಸ್ ನಡೆಸಲಾಗುತ್ತಿದೆ. ಇದೇ ವೇಳೆ, ಪಿಯುಸಿ ಫಲಿತಾಂಶ ಬಂದಿರುವುದರಿಂದ ಪದವಿ ತರಗತಿಗಳಿಗೆ ಪ್ರವೇಶಾತಿಯನ್ನೂ ಮಾಡಲಾಗುತ್ತಿದೆ. ಇತ್ತೀಚೆಗೆ ಮಂಗಳೂರು ವಿವಿ ಕುಲಪತಿ ಪಿ.ಎಸ್.ಯಡಪಡಿತ್ತಾಯ, ಕಾಲೇಜಿನಲ್ಲಿ ಹಿಜಾಬ್ ಬಗ್ಗೆ ಸ್ಪಷ್ಟ ನಿಮಯಗಳಿದ್ದು ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ನಿಯಮ ಪಾಲಿಸಲು ಸಾಧ್ಯವಾಗದವರು ಬೇರೆ ಕಾಲೇಜಿಗೆ ತೆರಳುವುದಿದ್ದಲ್ಲಿ ಟಿಸಿ ಕೊಡಲು ವ್ಯವಸ್ಥೆ ಮಾಡಲಾಗುವುದು ಎಂದಿದ್ದರು.
ಈ ಹಿನ್ನೆಲೆಯಲ್ಲಿ ತರಗತಿಯೊಳಗೆ ಹಿಜಾಬ್ ಧರಿಸಲು ಪಟ್ಟು ಹಿಡಿದು ಹೈಡ್ರಾಮಾ ನಡೆಸಿದ್ದ ಐವರು ವಿದ್ಯಾರ್ಥಿನಿಯರು ಇದೀಗ ಬೇರೆ ಕಾಲೇಜು ತೆರಳಲು ಟಿಸಿ ಕೇಳಿದ್ದಾರೆ ಎನ್ನಲಾಗುತ್ತಿದೆ. ಕಳೆದ ಮೇ 26ರಂದು ದಿಢೀರ್ ಆಗಿ ಕಾಲೇಜಿನ ಕ್ಯಾಂಪಸಿನಲ್ಲಿ ಒಂದಷ್ಟು ವಿದ್ಯಾರ್ಥಿಗಳು ಹಿಜಾಬ್ ವಿಚಾರದಲ್ಲಿ ಪ್ರತಿಭಟನೆ ನಡೆಸಿದ್ದರು. ಆನಂತರ ವಿವಿಯ ಸಿಂಡಿಕೇಟ್ ಸಭೆಯಲ್ಲಿ ಹಿಜಾಬ್ ನಿಯಮ ಕಟ್ಟುನಿಟ್ಟು ಮಾಡಿ ವಿವಿಯಿಂದ ಸುತ್ತೋಲೆ ಕಳುಹಿಸಲಾಗಿತ್ತು.
Five Muslim girl students from the Mangalore University College at Hampanakatta here have asked for transfer certificates from the college administration after being denied permission to attend classes wearing hijab. Principal Anusuya Rai has confirmed that the five students have applied for transfer certificates to join other colleges. However, they are being asked to submit another letter making certain corrections. The college management will take a call on issuing the certificates once the girls submit the letters.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm