ಬ್ರೇಕಿಂಗ್ ನ್ಯೂಸ್
21-06-22 05:11 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 21: ಮುಸ್ಲಿಂ ಹುಡುಗನೊಬ್ಬ ತನ್ನ ಹೆಸರನ್ನು ವಿಜಯ್ ಎಂದು ಬದಲಿಸಿಕೊಂಡು ಹಿಂದುವೆಂದು ನಂಬಿಸಿ, ಹಿಂದು ಹುಡುಗಿಯೊಬ್ಬಳನ್ನು ಪ್ರೀತಿಸುವ ನೆಪದಲ್ಲಿ ಬಾಡಿಗೆ ಮನೆಯಲ್ಲಿ ಇಟ್ಟುಕೊಂಡಿದ್ದನ್ನು ತಿಳಿದು ಸ್ಥಳೀಯರು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಹುಡುಗ ಮತ್ತು ಹುಡುಗಿಯನ್ನು ಠಾಣೆಗೆ ಕರೆಸಿ ವಿಚಾರಿಸಿದಾಗ, ಅವರಿಬ್ಬರು ಮದುವೆಯಾಗದೆ ಜೊತೆಗಿರುವುದು ತಿಳಿದುಬಂದಿದೆ.
ಹುಡುಗಿ ತೀರ್ಥಹಳ್ಳಿ ಮೂಲದವಳಾಗಿದ್ದು ಈ ಹಿಂದೆ ಉಡುಪಿಯ ಪೆಟ್ರೋಲ್ ಪಂಪ್ ನಲ್ಲಿ ಕೆಲಸಕ್ಕಿದ್ದಳು. ಅದೇ ಪೆಟ್ರೋಲ್ ಪಂಪ್ ನಲ್ಲಿ ಮಂಗಳೂರಿನ ಆಕಾಶಭವನ ನಿವಾಸಿ ಹುಸೇನ್ ಸಾಹೇಬ ಎಂಬಾತನೂ ಕೆಲಸಕ್ಕಿದ್ದು ಅಲ್ಲಿ ಹುಡುಗ ಮತ್ತು ಹುಡುಗಿ ನಡುವೆ ಲವ್ ಆಗಿತ್ತು ಎನ್ನಲಾಗಿದೆ. ತನ್ನ ಹೆಸರನ್ನು ವಿಜಯ್ ಎಂದು ಹೇಳಿಕೊಂಡು ಹಿಂದುವೆಂದು ಬಿಂಬಿಸಿಕೊಂಡಿದ್ದ ಹುಸೇನ್, ವಾರದ ಹಿಂದೆ ಆಕೆಯನ್ನು ಜೊತೆಗೆ ಕರೆತಂದು ವಿಟ್ಲ ಕಸಬಾ ಗ್ರಾಮದ ಪಲಿಕೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಆಬಳಿಕ ಹುಸೇನ್, ವಿಟ್ಲ ಪೆಟ್ರೋಲ್ ಪಂಪ್ ಬಳಿ ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ.
ವಾರ ಕಳೆಯುತ್ತಲೇ ಹುಡುಗ- ಹುಡುಗಿಯ ಬಗ್ಗೆ ಸಂಶಯಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಜೂನ್ 20ರಂದು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ ವೇಳೆ, ಇವರು ವಯಸ್ಕರಾಗಿದ್ದರೂ ಮದುವೆ ಆಗಿರುವುದಕ್ಕೆ ಯಾವುದೇ ದಾಖಲೆ ಇರಲಿಲ್ಲ. ಪೊಲೀಸರು ಹುಡುಗ- ಹುಡುಗಿಗೆ ಬುದ್ಧಿ ಮಾತು ಹೇಳಿ, ಹುಡುಗಿ ಹೆತ್ತವರಿಗೆ ಮಾಹಿತಿ ನೀಡಿ ಆಕೆಯನ್ನು ಮಂಗಳೂರಿನ ಕೌನ್ಸಿಲಿಂಗ್ ಸೆಂಟರಿಗೆ ಹಾಕಿದ್ದಾರೆ. ಹುಡುಗನನ್ನು ಪೊಲೀಸರು ವಿಚಾರಿಸಿ ಬಿಟ್ಟು ಕಳುಹಿಸಿದ್ದಾರೆ.
Mangalore Muslim boy changes name to Vijay to live in a rented house with Hindu girl in Bantwal without marriage. Hussain is said to be working as a cleaner in the truck. A week ago he brought the girl to the house and neighbours who were suspicious about their behavior complained it to Vitla police. Police took them to the couselling center and later they were left to go to their homes. No case has been registered.
30-09-25 07:31 pm
Bangalore Correspondent
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
ಹೈದ್ರಾಬಾದ್ ನಲ್ಲಿ ಕಾಂತಾರ ಪ್ರಚಾರ ; ರಿಷಬ್ ಕನ್ನಡದ...
29-09-25 07:59 pm
30-09-25 04:08 pm
HK News Desk
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
ಪರಿಶಿಷ್ಟರ ಮತಾಂತರ ಜಾಲ ; 'ಪವಾಡ ಚಿಕಿತ್ಸೆ' ಆಮಿಷ ಒ...
29-09-25 10:52 pm
ಏಷ್ಯಾ ಕಪ್ ಫೈನಲ್ ಗೆದ್ದರೂ ಕಪ್ ಸ್ವೀಕರಿಸದೆ ಪಾಕಿಗೆ...
29-09-25 03:54 pm
ಕಾಲ್ತುಳಿತ ಘಟನೆ ಆಕಸ್ಮಿಕ ಅಲ್ಲ, ಪಿತೂರಿ ! ಕಲ್ಲು ತ...
28-09-25 10:02 pm
30-09-25 10:57 pm
Mangalore Correspondent
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
ಧರ್ಮಸ್ಥಳ ಪ್ರಕರಣ, ಕೋರ್ಟಿಗೆ ಚಿನ್ನಯ್ಯ ಹೊಸ ಹೇಳಿಕೆ...
29-09-25 11:02 pm
Mithun Rai, Pilinalikes 10th Anniversary, Man...
29-09-25 07:15 pm
ಮಂಗಳೂರು ದಸರಾ-2025 ರಾಜ್ಯ ಮಟ್ಟದ ಮ್ಯಾರಥಾನ್ ; ಪುರ...
28-09-25 08:12 pm
29-09-25 01:24 pm
Mangalore Correspondent
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm
Robbery in Mangalore: ಒಂದೂವರೆ ಕೋಟಿ ಮೌಲ್ಯದ ಚಿನ...
28-09-25 12:25 pm