ಬ್ರೇಕಿಂಗ್ ನ್ಯೂಸ್
21-06-22 05:11 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 21: ಮುಸ್ಲಿಂ ಹುಡುಗನೊಬ್ಬ ತನ್ನ ಹೆಸರನ್ನು ವಿಜಯ್ ಎಂದು ಬದಲಿಸಿಕೊಂಡು ಹಿಂದುವೆಂದು ನಂಬಿಸಿ, ಹಿಂದು ಹುಡುಗಿಯೊಬ್ಬಳನ್ನು ಪ್ರೀತಿಸುವ ನೆಪದಲ್ಲಿ ಬಾಡಿಗೆ ಮನೆಯಲ್ಲಿ ಇಟ್ಟುಕೊಂಡಿದ್ದನ್ನು ತಿಳಿದು ಸ್ಥಳೀಯರು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಹುಡುಗ ಮತ್ತು ಹುಡುಗಿಯನ್ನು ಠಾಣೆಗೆ ಕರೆಸಿ ವಿಚಾರಿಸಿದಾಗ, ಅವರಿಬ್ಬರು ಮದುವೆಯಾಗದೆ ಜೊತೆಗಿರುವುದು ತಿಳಿದುಬಂದಿದೆ.
ಹುಡುಗಿ ತೀರ್ಥಹಳ್ಳಿ ಮೂಲದವಳಾಗಿದ್ದು ಈ ಹಿಂದೆ ಉಡುಪಿಯ ಪೆಟ್ರೋಲ್ ಪಂಪ್ ನಲ್ಲಿ ಕೆಲಸಕ್ಕಿದ್ದಳು. ಅದೇ ಪೆಟ್ರೋಲ್ ಪಂಪ್ ನಲ್ಲಿ ಮಂಗಳೂರಿನ ಆಕಾಶಭವನ ನಿವಾಸಿ ಹುಸೇನ್ ಸಾಹೇಬ ಎಂಬಾತನೂ ಕೆಲಸಕ್ಕಿದ್ದು ಅಲ್ಲಿ ಹುಡುಗ ಮತ್ತು ಹುಡುಗಿ ನಡುವೆ ಲವ್ ಆಗಿತ್ತು ಎನ್ನಲಾಗಿದೆ. ತನ್ನ ಹೆಸರನ್ನು ವಿಜಯ್ ಎಂದು ಹೇಳಿಕೊಂಡು ಹಿಂದುವೆಂದು ಬಿಂಬಿಸಿಕೊಂಡಿದ್ದ ಹುಸೇನ್, ವಾರದ ಹಿಂದೆ ಆಕೆಯನ್ನು ಜೊತೆಗೆ ಕರೆತಂದು ವಿಟ್ಲ ಕಸಬಾ ಗ್ರಾಮದ ಪಲಿಕೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಆಬಳಿಕ ಹುಸೇನ್, ವಿಟ್ಲ ಪೆಟ್ರೋಲ್ ಪಂಪ್ ಬಳಿ ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ.
ವಾರ ಕಳೆಯುತ್ತಲೇ ಹುಡುಗ- ಹುಡುಗಿಯ ಬಗ್ಗೆ ಸಂಶಯಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಜೂನ್ 20ರಂದು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ ವೇಳೆ, ಇವರು ವಯಸ್ಕರಾಗಿದ್ದರೂ ಮದುವೆ ಆಗಿರುವುದಕ್ಕೆ ಯಾವುದೇ ದಾಖಲೆ ಇರಲಿಲ್ಲ. ಪೊಲೀಸರು ಹುಡುಗ- ಹುಡುಗಿಗೆ ಬುದ್ಧಿ ಮಾತು ಹೇಳಿ, ಹುಡುಗಿ ಹೆತ್ತವರಿಗೆ ಮಾಹಿತಿ ನೀಡಿ ಆಕೆಯನ್ನು ಮಂಗಳೂರಿನ ಕೌನ್ಸಿಲಿಂಗ್ ಸೆಂಟರಿಗೆ ಹಾಕಿದ್ದಾರೆ. ಹುಡುಗನನ್ನು ಪೊಲೀಸರು ವಿಚಾರಿಸಿ ಬಿಟ್ಟು ಕಳುಹಿಸಿದ್ದಾರೆ.
Mangalore Muslim boy changes name to Vijay to live in a rented house with Hindu girl in Bantwal without marriage. Hussain is said to be working as a cleaner in the truck. A week ago he brought the girl to the house and neighbours who were suspicious about their behavior complained it to Vitla police. Police took them to the couselling center and later they were left to go to their homes. No case has been registered.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm