ಬ್ರೇಕಿಂಗ್ ನ್ಯೂಸ್
30-09-20 03:45 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 30: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅ.1ರಿಂದ ಮಂಗಳೂರು - ಹೈದರಾಬಾದ್ ಮಾರ್ಗದಲ್ಲಿ ಅಂಬಾರಿ ಡ್ರೀಮ್ಕ್ಲಾಸ್ ಮಲ್ಟಿ ಆ್ಯಕ್ಸಿಲ್ ಎಸಿ ಸ್ಲಿಪರ್ ದರ್ಜೆಯ ಬಸ್ ಹಾಗೂ ಉಡುಪಿ - ಹೈದರಾಬಾದ್ ಮಾರ್ಗದಲ್ಲಿ ರಾಜಹಂಸ ಬಸ್ ಸೇವೆ ಪ್ರಾರಂಭಿಸಲಿದೆ. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪ್ರಯಾಣಿಸಲು ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಅಂಬಾರಿ ಡ್ರೀಮ್ ಕ್ಲಾಸ್ ಮಲ್ಟಿ ಆ್ಯಕ್ಸಿಲ್ ಎಸಿ ಸ್ಲಿಪರ್ ಬಸ್ ಮಧ್ಯಾಹ್ನ 3ಕ್ಕೆ ಮಂಗಳೂರಿನಿಂದ ಹೊರಟು ಸುರತ್ಕಲ್, ಮೂಲ್ಕಿ, ಉಡುಪಿ, ಕುಂದಾಪುರ, ಭಟ್ಕಳ, ಹುಬ್ಬಳ್ಳಿ, ಗದಗ, ಕೊಪ್ಪಳ, ರಾಯಚೂರು ಮೂಲಕ ಹೈದರಾಬಾದ್ಗೆ ಮರುದಿನ ಬೆಳಗ್ಗೆ 8.30ಕ್ಕೆ ತಲುಪಲಿದೆ. ಹೈದರಾಬಾದ್ನಿಂದ ಸಂಜೆ 5ಕ್ಕೆ ಹೊರಟು ಅದೇ ಮಾರ್ಗವಾಗಿ ಮಂಗಳೂರಿಗೆ ಮರುದಿನ ಬೆಳಗ್ಗೆ 10 ಗಂಟೆಗೆ ತಲುಪಲಿದೆ. ಪ್ರಯಾಣ ದರ 1,700 ರೂ. ಆಗಿರುತ್ತದೆ.

ರಾಜಹಂಸ ಬಸ್ ಉಡುಪಿಯಿಂದ ಬೆಳಗ್ಗೆ 11.30ಕ್ಕೆ ಹೊರಟು ಮಣಿಪಾಲ, ಕುಂದಾಪುರ, ಸಿದ್ದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಹರಿಹರ, ಹರಪನಹಳ್ಳಿ, ಹೊಸಪೇಟೆ, ಗಂಗಾವತಿ, ಮಾನ್ವಿ, ರಾಯಚೂರು ಮೂಲಕ ಹೈದರಾಬಾದ್ಗೆ ಮರುದಿನ ಬೆಳಗ್ಗೆ 6.30ಕ್ಕೆ ತಲುಪಲಿದೆ. ಹೈದರಾಬಾದ್ನಿಂದ ಸಂಜೆ 5.30ಕ್ಕೆ ಹೊರಟು ಉಡುಪಿಗೆ ಮರುದಿನ ಬೆಳಗ್ಗೆ 11 ಗಂಟೆಗೆ ತಲುಪಲಿದೆ. ಪ್ರಯಾಣ ದರ 970 ರೂ. ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ ಎಂದು ಕೆಎಸ್ಆರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm