ಬ್ರೇಕಿಂಗ್ ನ್ಯೂಸ್
24-06-22 08:33 pm Mangalore Correspondent ಕರಾವಳಿ
ಮಂಗಳೂರು, ಜೂನ್ 24 : ಮಂಗಳೂರು ನಗರದಿಂದ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಎಸ್ಸಾರ್ಟಿಸಿ ಬಸ್ ವ್ಯವಸ್ಥೆ ಮಾಡಬೇಕು ಎನ್ನೋದು ಬಹುದಿನಗಳ ಕನಸು. ಈ ಕನಸು ಕಡೆಗೂ ಈಡೇರುವ ಕಾಲ ಬಂದಿದೆ. ಇಬ್ಬರು ದೆಹಲಿ ಪತ್ರಕರ್ತರ ಕೋರಿಕೆಯ ಮೇರೆಗೆ ಸಾರಿಗೆ ಸಚಿವ ಶ್ರೀರಾಮುಲು ಬಸ್ ವ್ಯವಸ್ಥೆ ಏರ್ಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಪುಷ್ಪಾ ವಿ.ಎಸ್., ಕೆಎಸ್ಸಾರ್ಟಿಸಿ ಸಾರಿಗೆ ನಿಗಮಕ್ಕೆ ಆದೇಶ ಪತ್ರ ನೀಡಿದ್ದು ತುರ್ತಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಹಾನಗರದಿಂದ ದೇವನಹಳ್ಳಿ ಏರ್ಪೋರ್ಟ್ ಗೆ ಬಸ್ ವ್ಯವಸ್ಥೆ ಇರುವಂತೆ ಮಂಗಳೂರಿನಲ್ಲಿಯೂ ಬಸ್ ವ್ಯವಸ್ಥೆ ಮಾಡಬೇಕು ಎಂದು ವಿಜಯವಾಣಿ ಮತ್ತು ಪವರ್ ಟಿವಿ ದೆಹಲಿ ಪ್ರತಿನಿಧಿಗಳು ಕರ್ನಾಟಕದ ಸಾರಿಗೆ ಸಚಿವ ಶ್ರೀರಾಮುಲುಗೆ ಮನವಿ ನೀಡಿದ್ದರು.
ಈ ಬಗ್ಗೆ ನೀಡಿರುವ ಆದೇಶ ಪತ್ರದಲ್ಲಿ ಬಿಎಂಟಿಸಿಯಿಂದ ಹೆಚ್ಚುವರಿ ಇರುವ ಮೂರು ಬಸ್ಸುಗಳನ್ನು ಎರವಲು ಪಡೆದು ಮಂಗಳೂರಿನಲ್ಲಿ ಬಸ್ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಈಗಾಗಲೇ ಬೆಂಗಳೂರಿನ ಬಿಎಂಟಿಸಿಯಲ್ಲಿ ಕೊರೊನಾ ಕಾರಣದಿಂದ ಹಲವು ಬಸ್ ಗಳನ್ನು ಮೊಟಕು ಮಾಡಿದ್ದು ಅವನ್ನು ಬೇರೆ ನಿಗಮಗಳಿಗೆ ಅಗತ್ಯವಿದ್ದರೆ ಬಳಸಿಕೊಳ್ಳಲು ಸೂಚಿಸಲಾಗಿತ್ತು. ಇದಕ್ಕಾಗಿ ಬೇರೆ ನಿಗಮದವರು ಒಂದು ಲಕ್ಷ ರು.ಗೆ ಹಳೆ ಬಸ್ ಗಳನ್ನು ಪಡೆಯಬಹುದು ಎಂದು ಅಲ್ಲಿನ ವ್ಯವಸ್ಥಾಪಕರು ಇತ್ತೀಚೆಗೆ ಮಾಹಿತಿ ನೀಡಿದ್ದು ಸುದ್ದಿಯಾಗಿತ್ತು. ಇದಕ್ಕೆ ಪೂರಕವಾಗಿ ಈಗ ಮಂಗಳೂರಿನಲ್ಲಿ ಬಿಎಂಟಿಸಿ ಬಸ್ ತಂದು ಓಡಿಸುವಂತೆ ಸ್ವತಃ ಸಾರಿಗೆ ಇಲಾಖೆಯ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.
KSRTC to introduce Buses to Mangalore International Airport from the city just as in Bangalore. On the request by two journalists in Delhi this request has been accepted by the transport department and an order has been issued for the same.
30-09-25 07:31 pm
Bangalore Correspondent
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
ಹೈದ್ರಾಬಾದ್ ನಲ್ಲಿ ಕಾಂತಾರ ಪ್ರಚಾರ ; ರಿಷಬ್ ಕನ್ನಡದ...
29-09-25 07:59 pm
30-09-25 04:08 pm
HK News Desk
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
ಪರಿಶಿಷ್ಟರ ಮತಾಂತರ ಜಾಲ ; 'ಪವಾಡ ಚಿಕಿತ್ಸೆ' ಆಮಿಷ ಒ...
29-09-25 10:52 pm
ಏಷ್ಯಾ ಕಪ್ ಫೈನಲ್ ಗೆದ್ದರೂ ಕಪ್ ಸ್ವೀಕರಿಸದೆ ಪಾಕಿಗೆ...
29-09-25 03:54 pm
ಕಾಲ್ತುಳಿತ ಘಟನೆ ಆಕಸ್ಮಿಕ ಅಲ್ಲ, ಪಿತೂರಿ ! ಕಲ್ಲು ತ...
28-09-25 10:02 pm
30-09-25 10:57 pm
Mangalore Correspondent
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
ಧರ್ಮಸ್ಥಳ ಪ್ರಕರಣ, ಕೋರ್ಟಿಗೆ ಚಿನ್ನಯ್ಯ ಹೊಸ ಹೇಳಿಕೆ...
29-09-25 11:02 pm
Mithun Rai, Pilinalikes 10th Anniversary, Man...
29-09-25 07:15 pm
ಮಂಗಳೂರು ದಸರಾ-2025 ರಾಜ್ಯ ಮಟ್ಟದ ಮ್ಯಾರಥಾನ್ ; ಪುರ...
28-09-25 08:12 pm
29-09-25 01:24 pm
Mangalore Correspondent
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm
Robbery in Mangalore: ಒಂದೂವರೆ ಕೋಟಿ ಮೌಲ್ಯದ ಚಿನ...
28-09-25 12:25 pm