ಬ್ರೇಕಿಂಗ್ ನ್ಯೂಸ್
24-06-22 08:33 pm Mangalore Correspondent ಕರಾವಳಿ
ಮಂಗಳೂರು, ಜೂನ್ 24 : ಮಂಗಳೂರು ನಗರದಿಂದ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಎಸ್ಸಾರ್ಟಿಸಿ ಬಸ್ ವ್ಯವಸ್ಥೆ ಮಾಡಬೇಕು ಎನ್ನೋದು ಬಹುದಿನಗಳ ಕನಸು. ಈ ಕನಸು ಕಡೆಗೂ ಈಡೇರುವ ಕಾಲ ಬಂದಿದೆ. ಇಬ್ಬರು ದೆಹಲಿ ಪತ್ರಕರ್ತರ ಕೋರಿಕೆಯ ಮೇರೆಗೆ ಸಾರಿಗೆ ಸಚಿವ ಶ್ರೀರಾಮುಲು ಬಸ್ ವ್ಯವಸ್ಥೆ ಏರ್ಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಪುಷ್ಪಾ ವಿ.ಎಸ್., ಕೆಎಸ್ಸಾರ್ಟಿಸಿ ಸಾರಿಗೆ ನಿಗಮಕ್ಕೆ ಆದೇಶ ಪತ್ರ ನೀಡಿದ್ದು ತುರ್ತಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಹಾನಗರದಿಂದ ದೇವನಹಳ್ಳಿ ಏರ್ಪೋರ್ಟ್ ಗೆ ಬಸ್ ವ್ಯವಸ್ಥೆ ಇರುವಂತೆ ಮಂಗಳೂರಿನಲ್ಲಿಯೂ ಬಸ್ ವ್ಯವಸ್ಥೆ ಮಾಡಬೇಕು ಎಂದು ವಿಜಯವಾಣಿ ಮತ್ತು ಪವರ್ ಟಿವಿ ದೆಹಲಿ ಪ್ರತಿನಿಧಿಗಳು ಕರ್ನಾಟಕದ ಸಾರಿಗೆ ಸಚಿವ ಶ್ರೀರಾಮುಲುಗೆ ಮನವಿ ನೀಡಿದ್ದರು.

ಈ ಬಗ್ಗೆ ನೀಡಿರುವ ಆದೇಶ ಪತ್ರದಲ್ಲಿ ಬಿಎಂಟಿಸಿಯಿಂದ ಹೆಚ್ಚುವರಿ ಇರುವ ಮೂರು ಬಸ್ಸುಗಳನ್ನು ಎರವಲು ಪಡೆದು ಮಂಗಳೂರಿನಲ್ಲಿ ಬಸ್ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಈಗಾಗಲೇ ಬೆಂಗಳೂರಿನ ಬಿಎಂಟಿಸಿಯಲ್ಲಿ ಕೊರೊನಾ ಕಾರಣದಿಂದ ಹಲವು ಬಸ್ ಗಳನ್ನು ಮೊಟಕು ಮಾಡಿದ್ದು ಅವನ್ನು ಬೇರೆ ನಿಗಮಗಳಿಗೆ ಅಗತ್ಯವಿದ್ದರೆ ಬಳಸಿಕೊಳ್ಳಲು ಸೂಚಿಸಲಾಗಿತ್ತು. ಇದಕ್ಕಾಗಿ ಬೇರೆ ನಿಗಮದವರು ಒಂದು ಲಕ್ಷ ರು.ಗೆ ಹಳೆ ಬಸ್ ಗಳನ್ನು ಪಡೆಯಬಹುದು ಎಂದು ಅಲ್ಲಿನ ವ್ಯವಸ್ಥಾಪಕರು ಇತ್ತೀಚೆಗೆ ಮಾಹಿತಿ ನೀಡಿದ್ದು ಸುದ್ದಿಯಾಗಿತ್ತು. ಇದಕ್ಕೆ ಪೂರಕವಾಗಿ ಈಗ ಮಂಗಳೂರಿನಲ್ಲಿ ಬಿಎಂಟಿಸಿ ಬಸ್ ತಂದು ಓಡಿಸುವಂತೆ ಸ್ವತಃ ಸಾರಿಗೆ ಇಲಾಖೆಯ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.
KSRTC to introduce Buses to Mangalore International Airport from the city just as in Bangalore. On the request by two journalists in Delhi this request has been accepted by the transport department and an order has been issued for the same.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm