ಬ್ರೇಕಿಂಗ್ ನ್ಯೂಸ್
24-06-22 08:33 pm Mangalore Correspondent ಕರಾವಳಿ
ಮಂಗಳೂರು, ಜೂನ್ 24 : ಮಂಗಳೂರು ನಗರದಿಂದ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಎಸ್ಸಾರ್ಟಿಸಿ ಬಸ್ ವ್ಯವಸ್ಥೆ ಮಾಡಬೇಕು ಎನ್ನೋದು ಬಹುದಿನಗಳ ಕನಸು. ಈ ಕನಸು ಕಡೆಗೂ ಈಡೇರುವ ಕಾಲ ಬಂದಿದೆ. ಇಬ್ಬರು ದೆಹಲಿ ಪತ್ರಕರ್ತರ ಕೋರಿಕೆಯ ಮೇರೆಗೆ ಸಾರಿಗೆ ಸಚಿವ ಶ್ರೀರಾಮುಲು ಬಸ್ ವ್ಯವಸ್ಥೆ ಏರ್ಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಪುಷ್ಪಾ ವಿ.ಎಸ್., ಕೆಎಸ್ಸಾರ್ಟಿಸಿ ಸಾರಿಗೆ ನಿಗಮಕ್ಕೆ ಆದೇಶ ಪತ್ರ ನೀಡಿದ್ದು ತುರ್ತಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಹಾನಗರದಿಂದ ದೇವನಹಳ್ಳಿ ಏರ್ಪೋರ್ಟ್ ಗೆ ಬಸ್ ವ್ಯವಸ್ಥೆ ಇರುವಂತೆ ಮಂಗಳೂರಿನಲ್ಲಿಯೂ ಬಸ್ ವ್ಯವಸ್ಥೆ ಮಾಡಬೇಕು ಎಂದು ವಿಜಯವಾಣಿ ಮತ್ತು ಪವರ್ ಟಿವಿ ದೆಹಲಿ ಪ್ರತಿನಿಧಿಗಳು ಕರ್ನಾಟಕದ ಸಾರಿಗೆ ಸಚಿವ ಶ್ರೀರಾಮುಲುಗೆ ಮನವಿ ನೀಡಿದ್ದರು.

ಈ ಬಗ್ಗೆ ನೀಡಿರುವ ಆದೇಶ ಪತ್ರದಲ್ಲಿ ಬಿಎಂಟಿಸಿಯಿಂದ ಹೆಚ್ಚುವರಿ ಇರುವ ಮೂರು ಬಸ್ಸುಗಳನ್ನು ಎರವಲು ಪಡೆದು ಮಂಗಳೂರಿನಲ್ಲಿ ಬಸ್ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಈಗಾಗಲೇ ಬೆಂಗಳೂರಿನ ಬಿಎಂಟಿಸಿಯಲ್ಲಿ ಕೊರೊನಾ ಕಾರಣದಿಂದ ಹಲವು ಬಸ್ ಗಳನ್ನು ಮೊಟಕು ಮಾಡಿದ್ದು ಅವನ್ನು ಬೇರೆ ನಿಗಮಗಳಿಗೆ ಅಗತ್ಯವಿದ್ದರೆ ಬಳಸಿಕೊಳ್ಳಲು ಸೂಚಿಸಲಾಗಿತ್ತು. ಇದಕ್ಕಾಗಿ ಬೇರೆ ನಿಗಮದವರು ಒಂದು ಲಕ್ಷ ರು.ಗೆ ಹಳೆ ಬಸ್ ಗಳನ್ನು ಪಡೆಯಬಹುದು ಎಂದು ಅಲ್ಲಿನ ವ್ಯವಸ್ಥಾಪಕರು ಇತ್ತೀಚೆಗೆ ಮಾಹಿತಿ ನೀಡಿದ್ದು ಸುದ್ದಿಯಾಗಿತ್ತು. ಇದಕ್ಕೆ ಪೂರಕವಾಗಿ ಈಗ ಮಂಗಳೂರಿನಲ್ಲಿ ಬಿಎಂಟಿಸಿ ಬಸ್ ತಂದು ಓಡಿಸುವಂತೆ ಸ್ವತಃ ಸಾರಿಗೆ ಇಲಾಖೆಯ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.
KSRTC to introduce Buses to Mangalore International Airport from the city just as in Bangalore. On the request by two journalists in Delhi this request has been accepted by the transport department and an order has been issued for the same.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm