ಬ್ರೇಕಿಂಗ್ ನ್ಯೂಸ್
27-06-22 10:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 27: ಕರಾವಳಿಯಲ್ಲಿ ಪದೇ ಪದೇ ಸ್ಯಾಟಲೈಟ್ ಫೋನ್ ಬಳಕೆ ಪತ್ತೆಯಾಗುತ್ತಿರುವ ಬಗ್ಗೆ ಕೇಂದ್ರ ಸರಕಾರ ಗಂಭೀರ ವಹಿಸಿದೆ. ಆದರೆ, ಕೆಲವೊಮ್ಮೆ ಅರಬ್ಬೀ ಸಮುದ್ರದಲ್ಲಿ ತೆರಳುವ ಹಡಗಿನಲ್ಲಿ ಸಿಬಂದಿ ಬಳಸುವ ಸ್ಯಾಟಲೈಟ್ ಫೋನ್ ಸಿಗ್ನಲ್ ಕೂಡ ತಪ್ಪಾಗಿ ತೋರಿಸುವ ಸಾಧ್ಯತೆ ಇರುತ್ತದೆ. ಅಕ್ಷಾಂಶ, ರೇಖಾಂಶದಲ್ಲಿ ಲೆಕ್ಕ ಹಾಕಿದ್ದು ತಪ್ಪಾಗಿ ಬಂದಲ್ಲಿ ಭೂ ಪ್ರದೇಶವನ್ನು ತೋರಿಸುತ್ತದೆ. ಹಾಗಿದ್ದರೂ, ಕರಾವಳಿಯಲ್ಲಿ ಉಗ್ರರ ಚಟುವಟಿಕೆ ಹಿಂದೆ ಇದ್ದುದರಿಂದ ಭದ್ರತಾ ವಿಭಾಗಗಳು ಈ ಬಗ್ಗೆ ಜಾಗ್ರತೆ ವಹಿಸಿ ತನಿಖೆ ನಡೆಸುತ್ತವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವರು ಮಾಧ್ಯಮದ ಪ್ರಶ್ನೆಗಳಿಗೆ ಉತ್ತರಿಸಿದರು. ಮುಸ್ಲಿಮರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಅನ್ವರ್ ಮಾಣಿಪ್ಪಾಡಿ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, ಯಾರನ್ನೂ ಟಾರ್ಗೆಟ್ ಮಾಡುವ ಉದ್ದೇಶ ಸರಕಾರಕ್ಕಿಲ್ಲ. ಸಂವಿಧಾನದ ಪ್ರಕಾರ ಎಲ್ಲರನ್ನೂ ಸಮಾನವಾಗಿ ನಡೆದುಕೊಳ್ಳುತ್ತೇವೆ. ಏನಾದ್ರೂ ಆರೋಪ ಇದ್ದಲ್ಲಿ ಮಾತ್ರ ತನಿಖೆ, ವಿಚಾರಣೆ ನಡೆಸುತ್ತೇವೆ. ಅದು ಬಿಟ್ಟರೆ ಯಾವುದೇ ಟಾರ್ಗೆಟ್ ಮಾಡಿದ ಉದಾಹರಣೆ ಇಲ್ಲ. ಅನ್ವರ್ ಮಾಣಿಪ್ಪಾಡಿಯವರು ನನ್ನ ಸ್ನೇಹಿತರು. ಯಾವ ವಿಚಾರದಲ್ಲಿ ಭಿನ್ನಮತ ಇದೆ ಎನ್ನುವ ಬಗ್ಗೆ ಅವರನ್ನೇ ಕೇಳಿ ಮಾತನಾಡುತ್ತೇನೆ ಎಂದು ಹೇಳಿದರು.
ವಕ್ಫ್ ಆಸ್ತಿ ಕಬಳಿಕೆ ವರದಿ ಬಗ್ಗೆ ಕೇಳಿದ್ದಕ್ಕೆ, ಅದು ನಮ್ಮ ಇಲಾಖೆಯ ವ್ಯಾಪ್ತಿಗೆ ಬರುವುದಿಲ್ಲ. ಸರಕಾರದ ಗಮನಕ್ಕೆ ತರುತ್ತೇನೆ ಎಂದು ಹೇಳಿದರು. ಸೈಬರ್ ಕ್ರೈಮ್ ಅಪರಾಧ ಪತ್ತೆಯಾಗುತ್ತಿಲ್ಲ ಎಂಬ ಪ್ರಶ್ನೆಗೆ, ಸೈಬರ್ ಅಪರಾಧಗಳ ಪತ್ತೆಗಾಗಿ ಮಂಗಳೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಪ್ರತ್ಯೇಕ ತಂಡ ಮಾಡಿದ್ದೇವೆ. ಅವರು ನಿಗಾ ಇಟ್ಟಿದ್ದಾರೆ. ಎಲ್ಲವನ್ನೂ ಪತ್ತೆ ಮಾಡಲಾಗುವುದು, ಸೈಬರ್ ಅಪರಾಧಗಳ ಪತ್ತೆಗೆ ಸಮಯ ಬೇಕಾಗುತ್ತದೆ ಎಂದು ಹೇಳಿದರು.
State home minister Araga Jnanendra has said that he has ordered for a survey of foreign nationals living in Mangaluru and Dakshina Kannada police station limits. Also satellite phone activate in different parts of Mangaluru has been taken seriously by our police officers he added.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm