ಬ್ರೇಕಿಂಗ್ ನ್ಯೂಸ್
29-06-22 04:08 pm Mangalore Correspondent ಕರಾವಳಿ
ಮಂಗಳೂರು, ಜೂನ್ 29: ಪಠ್ಯ ಪುಸ್ತಕ ಪರಿಷ್ಕರಣೆ ನೆಪದಲ್ಲಿ ರಾಜ್ಯ ಸರಕಾರ ಸ್ವಾತಂತ್ರ್ಯ ಹೋರಾಟಗಾರ ಕಯ್ಯಾರ ಕಿಂಞಣ್ಣ ರೈ ಅವರ ಹೆಸರನ್ನೇ ಪಠ್ಯ ಪುಸ್ತಕದಿಂದ ತೆಗೆದು ಹಾಕಿದ್ದು, ಇಡೀ ಬಂಟ ಸಮಾಜಕ್ಕೆ ಅವಮಾನ ಮಾಡಿದೆ. ಕಯ್ಯಾರ ಅವರು ಕಾಸರಗೋಡು ಜಿಲ್ಲೆ ಕರ್ನಾಟಕ ಸೇರಬೇಕೆಂದು ತಮ್ಮ ಜೀವಿತದ ಕಡೆ ವರೆಗೂ ಧ್ವನಿ ಎತ್ತಿದವರು. ನಾಡು, ನುಡಿಗಾಗಿ ಶ್ರಮಿಸಿದ ಕಯ್ಯಾರ ಅವರನ್ನು ಪಠ್ಯದಿಂದ ತೆಗೆದು ಹಾಕಿ, ಬಂಟ ಸಮಾಜಕ್ಕೆ ನೋವುಂಟು ಮಾಡಿದೆ. ಇದನ್ನು ಸರಿಪಡಿಸದಿದ್ದರೆ ಅದರ ಬೆಲೆ ತೆರಬೇಕಾಗಬಹುದು ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಎಚ್ಚರಿಸಿದ್ದಾರೆ.
ನಗರದ ಬಂಟ್ಸ್ ಹಾಸ್ಟೆಲಿನ ಸಂಘದ ಅಮೃತೋತ್ಸವ ಕಟ್ಟಡದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕಯ್ಯಾರ ಅವರು ಈ ನಾಡಿಗೆ ನೀಡಿರುವ ಕೊಡುಗೆಯನ್ನು ನಾವು ಮರೆಯಬಾರದು. 7ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿದ್ದ ಕರ್ನಾಟಕ ಏಕೀಕರಣ ಹಾಗೂ ಗಡಿ ವಿವಾದಗಳು ಎನ್ನುವ ಪಠ್ಯದಲ್ಲಿ ಕಯ್ಯಾರ ಕಿಂಞಣ್ಣ ರೈ ಹೆಸರನ್ನೇ ತೆಗೆದು ಬಿಟ್ಟಿದ್ದಾರೆ. ಕರ್ನಾಟಕ ಏಕೀಕರಣ ಪ್ರಶಸ್ತಿ, ಶ್ರೇಷ್ಠ ಅಧ್ಯಾಪಕ ಪ್ರಶಸ್ತಿ, ಮಂಗಳೂರು ವಿವಿಯ ಗೌರವ ಡಾಕ್ಟರೇಟ್, ಹಂಪಿ ವಿವಿಯ ನಾಡೋಜ ಪ್ರಶಸ್ತಿ ಪಡೆದಿದ್ದವರು. ವೇದವನ್ನೇ ಕನ್ನಡಕ್ಕೆ ಭಾಷಾಂತರ ಮಾಡಿದ ವ್ಯಕ್ತಿ ಕಯ್ಯಾರ ಅವರು.

ತಮ್ಮ 101ನೇ ವಯಸ್ಸಿನಲ್ಲೂ ಕಾಸರಗೋಡು ಕರ್ನಾಟಕ ಸೇರಬೇಕೆಂದು ಹಕ್ಕೊತ್ತಾಯ ಮಂಡಿಸಿದ ಕಯ್ಯಾರ ಕಿಂಞಣ್ಣ ರೈ ಅವರ ಹೆಸರನ್ನು ಪಠ್ಯದಿಂದ ತೆಗೆದು ಹಾಕಿದ್ದು ಯಾಕೆ.. ಆಮೂಲಕ ಯಾವ ರೀತಿಯ ಸಂದೇಶವನ್ನು ಪಠ್ಯ ಪುಸ್ತಕ ಸಮಿತಿ ಕೊಟ್ಟಿದ್ದಾರೆ. ಈ ಬಗ್ಗೆ ರಾಜ್ಯ ಸರಕಾರ ಕೂಡಲೇ ಸರಿಪಡಿಸುವ ಕೆಲಸ ಮಾಡಬೇಕು. ಇಲ್ಲದೇ ಇದ್ದರೆ, ದೇಶ- ವಿದೇಶದಲ್ಲಿ ಬಂಟ ಸಮುದಾಯ ಧ್ವನಿ ಎತ್ತಲಿದೆ. ಇಡೀ ಜಗತ್ತಿನಲ್ಲಿ ಬಂಟರು ಇದ್ದಾರೆ. ಬಂಟ ಸಮಾಜಕ್ಕೆ ನೋವಾಗಿದೆ. ಅದನ್ನು ಸಮುದಾಯದ ಜನರು ತೋರಿಸಲಿದ್ದಾರೆ ಎಂದು ಅಜಿತ್ ಕುಮಾರ್ ರೈ ಹೇಳಿದ್ದಾರೆ.

ಕಯ್ಯಾರ ಕಿಂಞಣ್ಣ ರೈ ಕುಟುಂಬ ಸದಸ್ಯರು, ಕಾವು ಹೇಮನಾಥ ಶೆಟ್ಟಿ, ಬಾಲಕೃಷ್ಣ ರೈ ಸೇರಿದಂತೆ ಪ್ರಮುಖರು ಇದ್ದರು.
Freedom fighter Kayyar Kinhanna Rais name taken out from text book is a shame for Bunt Community slams Ajith Kumar Rai during a press meet held by Bunts Sangh in Mangaluru.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm