ಬ್ರೇಕಿಂಗ್ ನ್ಯೂಸ್
29-06-22 05:26 pm Mangalore Correspondent ಕರಾವಳಿ
ಮಂಗಳೂರು, ಜೂನ್ 29 : ಕೊಲೆಗೆ ಸ್ಕೆಚ್ ಹಾಕಿದ್ದಾರೆಂದು ಸುದ್ದಿಯಾಗಿದ್ದ ಬೆಂಗಳೂರಿನ ಉದ್ಯಮಿ, ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸೋದರ ಗುಣರಂಜನ್ ಶೆಟ್ಟಿ ಅವರನ್ನು ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಕರೆಸಿ ವಿಚಾರಣೆ ನಡೆಸಲಾಗಿದೆ.
ಕೊಲೆಗೆ ಸ್ಕೆಚ್ ವಿಚಾರದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಗೃಹ ಇಲಾಖೆಯಿಂದ ಹೊಣೆ ನೀಡಲಾಗಿದೆ. ಹೀಗಾಗಿ ಮಂಗಳೂರು ಕಮಿಷನರ್ ಕಚೇರಿಗೆ ಗುಣರಂಜನ್ ಶೆಟ್ಟಿ ಅವರನ್ನು ಕರೆಸಿ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮಾಹಿತಿ ಸಂಗ್ರಹಿಸಿದ್ದಾರೆ.
ವಿಚಾರಣೆ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದ ಗುಣರಂಜನ್ ಶೆಟ್ಟಿ, ನನಗೆ ಬಂದಿರುವ ರಿಲೈಬಲ್ ಸೋರ್ಸ್ ಪ್ರಕಾರ ಗೃಹ ಇಲಾಖೆಗೆ ಮನವಿಯನ್ನು ಕೊಟ್ಟಿದ್ದೆ. ಸಾರ್ವಜನಿಕ ಜೀವನದಲ್ಲಿ ಇರೋದ್ರಿಂದ ಹಲವಾರು ಜನರ ಜೊತೆ ವ್ಯವಹಾರ ಇದೆ, ನಿಷ್ಠುರ ಇದ್ದವರು ಕೂಡ ಇದ್ದಾರೆ. ಮಂಗಳೂರು ಪೊಲೀಸರು ಮಾಹಿತಿ ಸಂಗ್ರಹಕ್ಕೆ ಬರಹೇಳಿದ್ದರು. ಪೊಲೀಸರಿಗೆ, ನನಗೇನು ಗೊತ್ತಿದೆ ಆ ಮಾಹಿತಿಗಳನ್ನು ಕೊಟ್ಟಿದ್ದೇನೆ ಎಂದು ಹೇಳಿದರು.

ಇದರ ಹಿಂದೆ ಇಂಥದ್ದೇ ವ್ಯಕ್ತಿ ಇದ್ದಾರೆ ಎಂದು ಖಚಿತವಾಗಿ ಹೇಳಕ್ಕಾಗುವುದಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದು ಕೆಲವರನ್ನು ಖಚಿತವಾಗಿ ವಿಚಾರಣೆ ಮಾಡುತ್ತಾರೆ. ನನಗೆ ಪೊಲೀಸ್ ಭದ್ರತೆ ಬೇಕೆಂದು ಕೇಳಿಕೊಂಡಿಲ್ಲ. ಪೊಲೀಸರ ಭದ್ರತೆ ಬೇಕೆಂದಿದ್ದರೆ ಅವರೇ ತೀರ್ಮಾನ ತೆಗೆದುಕೊಳ್ಳಬೇಕು. ಕರ್ನಾಟಕ ಪೊಲೀಸರ ಬಗ್ಗೆ ನಂಬಿಕೆ ಇದೆ, ಸೀರಿಯಸ್ ಇದ್ದಾರೆ. ವಿಚಾರಣೆ ಮಾಡಲಿದ್ದು ಏನು ಸತ್ಯ ಇದೆಯೋ ಅದನ್ನು ಹೊರ ತರುತ್ತಾರೆ ಎಂದು ಹೇಳಿದರು.

ನಿಮಗೇನಾದರೂ ಬೆದರಿಕೆ ಇತ್ತೇ, ಯಾರು ಇದರ ಹಿಂದಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಗುಣರಂಜನ್ ಶೆಟ್ಟಿ, ರಿಲೈಬಲ್ ಸೋರ್ಸ್ ಎಂದು ಯಾಕೆ ಹೇಳಿದ್ದಂದ್ರೆ ನಿಶ್ಚಿತವಾಗಿ ಹೆಸರನ್ನು ಹೇಳಬಾರದು ಅಂತ. ಯಾರು ಶಾಮೀಲಾತಿ ಇದ್ದಾರೋ ಪೊಲೀಸರು ಅವರನ್ನು ತನಿಖೆ ಮಾಡಬೇಕಾಗುತ್ತದೆ. ಪ್ರಕರಣದ ಬಗ್ಗೆ ಮನ್ವಿತ್ ರೈ ಬಗ್ಗೆ ನಾನು ದೂರು ಹೇಳಿಲ್ಲ. ಯಾಕಾಗಿ ಆತ ಹೊರಗಡೆ ಹೇಳಿದ್ದೋ ಗೊತ್ತಿಲ್ಲ. ಮನ್ವಿತ್ ರೈ ಜೊತೆಗೆ ಯಾವುದೇ ವೈಮನಸ್ಸು ಹೊಂದಿಲ್ಲ. ಎರಡು ವರ್ಷದಿಂದ ಸಂಪರ್ಕ ಇಲ್ಲ ಅಷ್ಟೇ. ಅವರು ಇದನ್ನು ಹೊರಗಡೆ ಯಾಕೆ ಹೇಳಿದ್ದು ಅಂತ ಅವರೇ ಹೇಳಬೇಕು. ಪೊಲೀಸ್ ಸೆಕ್ಯುರಿಟಿ ಬೇಕೆಂದು ನಾನು ಕೇಳೋದಿಲ್ಲ. ಪೊಲೀಸರೇ ಅದರ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಉದ್ಯಮಿ, ನಟಿ ಅನುಷ್ಕಾ ಶೆಟ್ಟಿ ಸೋದರ ಗುಣರಂಜನ್ ಶೆಟ್ಟಿ ಹೇಳಿದ್ದಾರೆ.


ವಿಚಾರಣೆ ಬಗ್ಗೆ ಮಾಹಿತಿ ಹಂಚಿಕೊಂಡ ಪೊಲೀಸ್ ಕಮಿಷನರ್ ಶಶಿಕುಮಾರ್, ನಿಶ್ಚಿತವಾಗಿ ಯಾರು ಬೆದರಿಕೆ ಹಾಕಿದ್ದಾರೆಂದು ಹೇಳಿಲ್ಲ. ಬಲ್ಲ ಮೂಲಗಳ ಪ್ರಕಾರ ಕೊಲೆ ಬೆದರಿಕೆ ಇರುವುದನ್ನು ಹೇಳಿದ್ದಾರೆ. ತನಿಖೆಗೆ ಮಾಹಿತಿ ಸಂಗ್ರಹಿಸುವುದಕ್ಕಾಗಿ ಕರೆಸಿದ್ದೇವೆ. ಕೆಲವರ ಬಗ್ಗೆ ಶಂಕೆ ಇರುವ ಬಗ್ಗೆ ಹೇಳಿದ್ದಾರೆ. ಅವರೊಬ್ಬರು ಸಾರ್ವಜನಿಕ ಜೀವನದಲ್ಲಿ ಇರೋ ವ್ಯಕ್ತಿಯಾಗಿದ್ದು ನಾವು ಎಲ್ಲ ಆಯಾಮದಲ್ಲಿ ತನಿಖೆ ನಡೆಸುತ್ತೇವೆ. ಯಾರೆಲ್ಲರ ಹೆಸರು ಕೇಳಿಬಂದಿತ್ತೋ ಅವರನ್ನು ವಿಚಾರಣೆಗೆ ಕರೆಸುತ್ತೇವೆ ಎಂದು ಹೇಳಿದರು.
Actor Gunaranjan Shetty murder threat, observes enquiry at Mangalore commissioner office. Shashi Kumar has appointed CCB inspector Mahesh prasad to investigate the case. Multilingual actress anushka Shetty's brother Gunaranjan Shetty gets murder threats after which a petition has been filed with the karnataka home minister, requesting security and judicial action. On Sunday, members of Gunaranjan Shetty's Jayakarnataka Janapara Vedike filed a petition with home minister Araga Jnanendra, requesting protection and legal action
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 02:56 pm
HK News Staffer
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm