ಬ್ರೇಕಿಂಗ್ ನ್ಯೂಸ್
29-06-22 06:18 pm Mangalore Correspondent ಕರಾವಳಿ
ಉಳ್ಳಾಲ, ಜೂ.29 : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಚೆಂಬುಗುಡ್ಡೆ ಅಂಬೇಡ್ಕರ್ ನಗರದ ಭಾಸ್ಕರ್ ಎಂಬವರ ಮನೆಯ ಹಂಚಿನ ಛಾವಣಿ ಕುಸಿದು ಬಿದ್ದ ಘಟನೆ ಬುಧವಾರ ಮುಂಜಾನೆ ನಡೆದಿದ್ದು, ಕೋಣೆಯಲ್ಲಿ ಮಲಗಿದ್ದ ಭಾಸ್ಕರ್ ದಂಪತಿ ಅದೃಷ್ಟದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಛಾವಣಿ ಕುಸಿದು ಬಿದ್ದ ವೇಳೆ ಭಾಸ್ಕರ್ ಮತ್ತು ಅವರ ಪತ್ನಿ ಕೋಣೆಯೊಳಗೆ ಮಲಗಿದ್ದು ಮಂಚದ ಪಕ್ಕಕ್ಕೆ ಹಂಚಿನ ರಾಶಿಯೇ ಬಿದ್ದಿದ್ದು ಭಾಸ್ಕರ್ ಅವರ ಕಾಲಿಗೆ ಗಾಯವಾಗಿದೆ. ದಂಪತಿ ಕೂದಲೆಲೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ಅವರ ಇಬ್ಬರು ಮಕ್ಕಳೂ ಅಪಾಯದಿಂದ ಪಾರಾಗಿದ್ದಾರೆ.


ಭಾಸ್ಕರ್ ಅವರದ್ದು ತೀರಾ ಬಡ ಕುಟುಂಬವಾಗಿದ್ದು ವಾಸವಿರಲು ಮನೆಯೇ ಇಲ್ಲದಂತಾಗಿದೆ. ಘಟನಾ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆ ಕುಸಿದು ಬಿದ್ದರೆ ಮನೆಯ ಅಗತ್ಯ ಸಾಮಗ್ರಿಗಳು ಹಾಳಾಗಿರುತ್ತದೆ. ಈ ಕಾರಣದಿಂದ ತುರ್ತು ಪರಿಹಾರ ಮೊತ್ತವನ್ನು ಸರ್ಕಾರ ನೀಡಬೇಕು. ಬಳಿಕ ಇಂಜಿನಿಯರ್ ಪರಿಶೀಲನೆ ನಡೆಸಿ ಪರಿಹಾರ ಮೊತ್ತ ನಿಗದಿ ಪಡಿಸಿ ಒದಗಿಸಬೇಕು. ಆದಷ್ಟು ಬೇಗ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ವ್ಯವಸ್ಥೆ ಮಾಡುತ್ತಾರೆ ಎಂದು ಹೇಳಿದರು.


ಭಾಸ್ಕರ್ ಕುಟುಂಬಕ್ಕೆ ಐದು ಲಕ್ಷ ಪರಿಹಾರ ಘೋಷಣೆ ಮಾಡಿ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಮನೆ ಒದಗಿಸುವ ಬಗ್ಗೆ ವ್ಯವಸ್ಥೆ ಮಾಡಲಾಗುವುದು ಎಂದು ತಹಶೀಲ್ದಾರ್ ಗುರುಪ್ರಸಾದ್ ಹೇಳಿದ್ದಾರೆ. ಸ್ಥಳಕ್ಕೆ ಉಳ್ಳಾಲ ನಗರ ಪೌರಾಯುಕ್ತೆ ವಿದ್ಯಾ ಕಾಳೆ ಭೇಟಿ ನೀಡಿದ್ದಾರೆ.
Heavy rain in Mangalore, roof collapses in Chembugudde, couple saved from danger.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 03:01 pm
HK News Staffer
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm