ಬ್ರೇಕಿಂಗ್ ನ್ಯೂಸ್
29-06-22 06:18 pm Mangalore Correspondent ಕರಾವಳಿ
ಉಳ್ಳಾಲ, ಜೂ.29 : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಚೆಂಬುಗುಡ್ಡೆ ಅಂಬೇಡ್ಕರ್ ನಗರದ ಭಾಸ್ಕರ್ ಎಂಬವರ ಮನೆಯ ಹಂಚಿನ ಛಾವಣಿ ಕುಸಿದು ಬಿದ್ದ ಘಟನೆ ಬುಧವಾರ ಮುಂಜಾನೆ ನಡೆದಿದ್ದು, ಕೋಣೆಯಲ್ಲಿ ಮಲಗಿದ್ದ ಭಾಸ್ಕರ್ ದಂಪತಿ ಅದೃಷ್ಟದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಛಾವಣಿ ಕುಸಿದು ಬಿದ್ದ ವೇಳೆ ಭಾಸ್ಕರ್ ಮತ್ತು ಅವರ ಪತ್ನಿ ಕೋಣೆಯೊಳಗೆ ಮಲಗಿದ್ದು ಮಂಚದ ಪಕ್ಕಕ್ಕೆ ಹಂಚಿನ ರಾಶಿಯೇ ಬಿದ್ದಿದ್ದು ಭಾಸ್ಕರ್ ಅವರ ಕಾಲಿಗೆ ಗಾಯವಾಗಿದೆ. ದಂಪತಿ ಕೂದಲೆಲೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ಅವರ ಇಬ್ಬರು ಮಕ್ಕಳೂ ಅಪಾಯದಿಂದ ಪಾರಾಗಿದ್ದಾರೆ.
ಭಾಸ್ಕರ್ ಅವರದ್ದು ತೀರಾ ಬಡ ಕುಟುಂಬವಾಗಿದ್ದು ವಾಸವಿರಲು ಮನೆಯೇ ಇಲ್ಲದಂತಾಗಿದೆ. ಘಟನಾ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆ ಕುಸಿದು ಬಿದ್ದರೆ ಮನೆಯ ಅಗತ್ಯ ಸಾಮಗ್ರಿಗಳು ಹಾಳಾಗಿರುತ್ತದೆ. ಈ ಕಾರಣದಿಂದ ತುರ್ತು ಪರಿಹಾರ ಮೊತ್ತವನ್ನು ಸರ್ಕಾರ ನೀಡಬೇಕು. ಬಳಿಕ ಇಂಜಿನಿಯರ್ ಪರಿಶೀಲನೆ ನಡೆಸಿ ಪರಿಹಾರ ಮೊತ್ತ ನಿಗದಿ ಪಡಿಸಿ ಒದಗಿಸಬೇಕು. ಆದಷ್ಟು ಬೇಗ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ವ್ಯವಸ್ಥೆ ಮಾಡುತ್ತಾರೆ ಎಂದು ಹೇಳಿದರು.
ಭಾಸ್ಕರ್ ಕುಟುಂಬಕ್ಕೆ ಐದು ಲಕ್ಷ ಪರಿಹಾರ ಘೋಷಣೆ ಮಾಡಿ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಮನೆ ಒದಗಿಸುವ ಬಗ್ಗೆ ವ್ಯವಸ್ಥೆ ಮಾಡಲಾಗುವುದು ಎಂದು ತಹಶೀಲ್ದಾರ್ ಗುರುಪ್ರಸಾದ್ ಹೇಳಿದ್ದಾರೆ. ಸ್ಥಳಕ್ಕೆ ಉಳ್ಳಾಲ ನಗರ ಪೌರಾಯುಕ್ತೆ ವಿದ್ಯಾ ಕಾಳೆ ಭೇಟಿ ನೀಡಿದ್ದಾರೆ.
Heavy rain in Mangalore, roof collapses in Chembugudde, couple saved from danger.
13-05-24 09:17 pm
Bangalore Correspondent
parishad elections, JDS, BJP: ಪರಿಷತ್ ಚುನಾವಣೆ...
13-05-24 05:57 pm
Prajwal Revanna, Ticket Cancelled: ಪ್ರಜ್ವಲ್ ರ...
13-05-24 04:34 pm
Bangalore accident, Minor, Boy killed: ರಸ್ತೆಯ...
13-05-24 03:02 pm
Shivamogga Accident: ಶಿವಮೊಗ್ಗ ; ಆಟೋಗೆ ಡಿಕ್ಕಿ...
13-05-24 01:04 pm
13-05-24 07:56 pm
HK News Desk
ಬುರ್ಖಾ ಹಾಕೊಂಡು ಬಂದಿದ್ದ ಮುಸ್ಲಿಂ ಮತದಾರರಿಗೆ ನಿಮ...
13-05-24 03:53 pm
ಮದುವೆ ಆದ್ರು ಡಾಕ್ಟರ್ ಲೇಡಿಗೆ ತೀರದ ದಾಹ ; ಇಬ್ಬರು...
11-05-24 09:43 pm
Kareena Kapoor, Bible Book, court: “ಪ್ರೆಗ್ನೆನ...
11-05-24 03:13 pm
Ram Mandir, Nana Patole, Nrendra modi: ಮೋದಿಯಿ...
10-05-24 10:05 pm
13-05-24 10:15 pm
Mangalore Correspondent
Udupi former MLA Raghupati bhat quits BJP: ಬಂ...
13-05-24 07:27 pm
Ashok Rai, Puttur: ಚುನಾವಣೆ ನೀತಿ ಸಂಹಿತೆ ಉಲ್ಲಂಘ...
13-05-24 02:27 pm
Tv Serial Helmet Fine Police: ಟಿವಿ ಸೀರಿಯಲ್ನಲ್...
12-05-24 06:30 pm
ಕುಂದಾಪುರದ ಫೈನಾನ್ಶಿಯರ್ ಹತ್ಯೆ ಆರೋಪಿಗೆ ಹಿರಿಯಡ್ಕ...
12-05-24 05:41 pm
13-05-24 07:15 pm
Giridhar, Mangaluru Correspondent
Part time job, crime, online fraud: ಆನ್ಲೈನ್...
13-05-24 04:10 pm
Fake Currency Notes, Mangalore, Crime: ಕಾಸರಗೋ...
12-05-24 01:53 pm
Mangalore Crime, Sexual Assult: ಅನ್ಯಕೋಮಿನ ಬಾಲ...
11-05-24 10:18 pm
Bangalore Crime, Cyber, Roopa Iyer: ಸೆಲೆಬ್ರಿಟ...
10-05-24 05:04 pm