ಬ್ರೇಕಿಂಗ್ ನ್ಯೂಸ್
30-09-20 11:14 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 30: ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಬಿದ್ದು ಸಿಕ್ಕಿದ ಒಂದು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಗಟ್ಟಿಯನ್ನು ಶಾಸಕರ ಮುತುವರ್ಜಿಯಿಂದ ವಾರೀಸುದಾರರಿಗೆ ಮರಳಿಸಿದ ಘಟನೆ ನಡೆದಿದೆ.
ಮಂಗಳೂರು ಹೊರವಲಯದ ಸಹ್ಯಾದ್ರಿ ಕಾಲೇಜಿನ ಬಳಿ ಪ್ರಭಾಕರ ಪ್ರಭು ಎಂಬವರಿಗೆ ಪರ್ಸ್ ಸಿಕ್ಕಿತ್ತು. ಅದರಲ್ಲಿ ಅಂದಾಜು ಒಂದು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಗಟ್ಟಿ ಇದ್ದುದನ್ನು ಗಮನಿಸಿದ ಪ್ರಭಾಕರ ಪ್ರಭು, ತಮ್ಮ ಸಂಬಂಧಿಯಾಗಿರುವ ಶಾಸಕ ವೇದವ್ಯಾಸ ಕಾಮತ್ ಗಮನಕ್ಕೆ ತಂದಿದ್ದರು. ವೇದವ್ಯಾಸ ಕಾಮತ್ ಅವರು, ಮಹಾಲಕ್ಷ್ಮಿ ಜ್ಯುವೆಲ್ಲರ್ಸ್ ಮಾಲೀಕರಾಗಿರುವ ರವೀಂದ್ರ ನಿಕ್ಕಂ ಬಳಿ ಈ ಬಗ್ಗೆ ಪ್ರಸ್ತಾಪಿಸಿದ್ದರು. ರವೀಂದ್ರ ನಿಕ್ಕಂ ತಮ್ಮ ಆಪ್ತರ ವಲಯದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದಾಗ, ಅದು ಅಡ್ಯಾರ್ ಬಳಿಯ ನಿವಾಸಿ ಕೃಷ್ಣ ಆಚಾರ್ ಅವರಿಗೆ ಸೇರಿದ್ದು ಎಂದು ಗೊತ್ತಾಯಿತು. ಈ ಕುರಿತು ಕೃಷ್ಣ ಆಚಾರ್ ಅವರ ಬಳಿ ವಿಚಾರಿಸಿದಾಗ ಹಿಂದಿನ ದಿನ ಪರ್ಸ್ ಕಳೆದುಹೋಗಿದ್ದನ್ನು ಅವರು ರವೀಂದ್ರ ನಿಕ್ಕಂ ಅವರಿಗೆ ತಿಳಿಸಿದರು.

ಮಂಗಳೂರಿನ ಜೋಡುಮಠ ರಸ್ತೆಯಲ್ಲಿರುವ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಕಚೇರಿಯಲ್ಲಿ ಬುಧವಾರ ಟ್ರಸ್ಟ್ ಪ್ರಮುಖರಾದ ಹನುಮಂತ ಕಾಮತ್ ಅವರು ಪ್ರಭಾಕರ್ ಪ್ರಭು ಹಾಗೂ ರವೀಂದ್ರ ನಿಕ್ಕಂ ಅವರ ಉಪಸ್ಥಿತಿಯಲ್ಲಿ ಕೃಷ್ಣ ಆಚಾರ್ ಅವರಿಗೆ ಬಂಗಾರವನ್ನು ಹಸ್ತಾಂತರಿಸಿದರು. ಕೃಷ್ಣ ಆಚಾರ್ ಸಾಂಪ್ರದಾಯಿಕ ಚಿನ್ನದ ಕೆಲಸಗಾರರಾಗಿದ್ದು, ಬಂಗಾರದ ಆಭರಣ ಮಾಡಲು ಚಿನ್ನದ ಗಟ್ಟಿಯನ್ನು ಖರೀದಿಸಿ ದಾರಿಯಲ್ಲಿ ಬರುತ್ತಿದ್ದಾಗ ಕಳೆದುಕೊಂಡಿದ್ದರು. ಇದೇ ವೇಳೆ, ಪ್ರಾಮಾಣಿಕವಾಗಿ ಬಂಗಾರವನ್ನು ಸಂಬಂಧಪಟ್ಟವರಿಗೆ ಮರಳಿಸಲು ಪ್ರಯತ್ನ ಪಟ್ಟ ಪ್ರಭಾಕರ್ ಪ್ರಭು ಅವರನ್ನು ಹನುಮಂತ ಕಾಮತ್ ಅಭಿನಂದಿಸಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm