ಬ್ರೇಕಿಂಗ್ ನ್ಯೂಸ್
05-07-22 08:54 am Mangaluru Correspondent ಕರಾವಳಿ
ಮಂಗಳೂರು, ಜುಲೈ 5: ಕರಾವಳಿಯಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದ್ದು ನದಿ, ತೊರೆಗಳು ತುಂಬಿ ಹರಿಯತೊಡಗಿದೆ. ನೇತ್ರಾವತಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹ ಸ್ಥಿತಿ ಎದುರಾಗಿದೆ. ಮುಂಜಾಗ್ರತೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆ, ಕಾಲೇಜಿಗೆ ರಜೆ ಸಾರಲಾಗಿದೆ.
ಅಂಗನವಾಡಿಯಿಂದ ತೊಡಗಿ ಪ್ರಾಥಮಿಕ, ಪ್ರೌಢ, ಪಿಯು ಕಾಲೇಜು, ಪದವಿ, ಡಿಪ್ಲೊಮಾ, ಐಟಿಐ ಎಲ್ಲ ಮಾದರಿಯ ಶಿಕ್ಷಣ ಕೇಂದ್ರಗಳಿಗೂ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಮುಂಜಾಗ್ರತಾ ನೆಲೆಯಲ್ಲಿ ರಜೆ ಘೋಷಣೆ ಮಾಡಿದ್ದಾರೆ.
ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ರಾತ್ರಿಯಿಡೀ ಭಾರೀ ಮಳೆಯಾಗಿದೆ. ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದ್ದರಿಂದ ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪ್ರವಾಹ ಸ್ಥಿತಿ ಎದುರಾಗಿದೆ. ಕುಮಾರಧಾರ, ನೇತ್ರಾವತಿ ನದಿಗಳು ತುಂಬಿ ಹರಿಯುತ್ತಿದ್ದು ನದೀ ದಡದ ಪ್ರದೇಶಗಳಿಗೆ ನೆರೆ ನೀರು ನುಗ್ಗಿದೆ. ಸುಬ್ರಹ್ಮಣ್ಯ ದೇವಸ್ಥಾನದ ಬಳಿಯ ಸ್ನಾನಘಟ್ಟ ಮುಳುಗಡೆಯಾಗಿದ್ದು ಅಪಾಯದ ಮಟ್ಟ ತಲುಪಿದೆ. ಭಕ್ತರು ನದಿಯಲ್ಲಿ ಸ್ನಾನ ಮಾಡದಂತೆ ನೋಡಿಕೊಳ್ಳಲು ಸ್ಥಳದಲ್ಲಿ ಕಾವಲು ಸಿಬಂದಿ ನಿಯೋಜಿಸಲಾಗಿದೆ.
ಮಂಗಳೂರು ನಗರದ ಕುಲಶೇಖರದ ಬಜ್ಜೋಡಿಯಲ್ಲಿ ಕ್ಲಾಡಿ ಲೋಬೊ ಎಂಬವರಿಗೆ ಸೇರಿದ ವರ್ಕ್ ಶಾಪ್ ಗೆ ಮಳೆ ನೀರು ನುಗ್ಗಿದ್ದು ಪ್ರವಾಹದ ರೀತಿ ಹರಿಯತೊಡಗಿದೆ. ಬೆಳ್ಳಂಬೆಳಗ್ಗೆ ಚರಂಡಿ ನೀರು ನುಗ್ಗಿದ್ದರಿಂದ ಸಿಬಂದಿ ತಮ್ಮ ವಸ್ತುಗಳನ್ನು ರಕ್ಷಿಸಿಕೊಳ್ಳಲು ಪರದಾಡಿದರು. ಕೊಟ್ಟಾರದಲ್ಲಿಯೂ ಹೆದ್ದಾರಿಗೆ ನೀರು ಬಂದಿದ್ದು ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ.
As incessant rains are likely to lash the district, Dakshina Kannada deputy commissioner (DC) Dr K V Rajendra and Udupi DC Kurma Rao M declared a holiday on Tuesday July 5 for all the educational institutions. As heavy rains are expected to lash the district, the DC declared a holiday for the educational institutions on Tuesday. The holiday was declared keeping in mind the safety of students going to schools and colleges.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm