ಜಡಿ ಮಳೆ ; ದಕ್ಷಿಣ ಕನ್ನಡ, ಉಡುಪಿಯಲ್ಲಿ ನಾಳೆಯೂ ಶಾಲೆ, ಕಾಲೇಜಿಗೆ ರಜೆ ಘೋಷಣೆ

05-07-22 08:51 pm       Mangalore Correspondent   ಕರಾವಳಿ

ಕರಾವಳಿಯಲ್ಲಿ ಜಡಿ ಮಳೆ ಮುಂದುವರಿದಿರುವುದರಿಂದ ನಾಳೆಯೂ(ಜುಲೈ 6) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಸಾರಲಾಗಿದೆ.

ಮಂಗಳೂರು, ಜುಲೈ 5: ಕರಾವಳಿಯಲ್ಲಿ ಜಡಿ ಮಳೆ ಮುಂದುವರಿದಿರುವುದರಿಂದ ನಾಳೆಯೂ(ಜುಲೈ 6) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಸಾರಲಾಗಿದೆ.

ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಎಲ್ಲ ರೀತಿಯ ಶಾಲೆ, ಕಾಲೇಜು ತರಗತಿಗಳಿಗೆ ರಜೆ ಘೋಷಿಸಿ ಆದೇಶ ಮಾಡಿದ್ದಾರೆ. ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವೆಡೆ ತಗ್ಗು ಪ್ರದೇಶಗಳು ಜಲಾವೃತ ಆಗಿದೆ.

ಉಳ್ಳಾಲ ಭಾಗದ ಆಡಂಕುದ್ರು, ಕಲ್ಲಾಪು ಪ್ರದೇಶದಲ್ಲಿ ಮಳೆ ನೀರು ನುಗ್ಗಿದ್ದು, ಹಲವಾರು ಮನೆಗಳಿಗೆ ನೀರು ನುಗ್ಗಿ ನಷ್ಟ ಸಂಭವಿಸಿದೆ. ನೇತ್ರಾವತಿ, ಫಲ್ಗುಣಿ, ನಂದಿನಿ ನದಿಗಳು ಉಕ್ಕಿ ಹರಿಯುತ್ತಿವೆ. ವಿಟ್ಲ ಸಮೀಪದ ಕುಡ್ತಮುಗೇರು ಎಂಬಲ್ಲಿ ಹೊಳೆಯ ನೀರು ರಸ್ತೆಗೆ ಬಂದಿದ್ದರಿಂದ ರಾಜ್ಯ ಹೆದ್ದಾರಿಯ ವಿಟ್ಲ - ಸಾಲೆತ್ತೂರು ವಾಹನ ಸಂಚಾರಕ್ಕೆ ತೊಡಕಾಗಿತ್ತು. ಉಪ್ಪಿನಂಗಡಿಯಲ್ಲಿ ಕುಮಾರಧಾರಾ ನದಿಯು ಉಕ್ಕಿ ಹರಿಯತೊಡಗಿದೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕುಮಾರಧಾರ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ.

Heavy rains Holiday declared for schools, colleges in Mangalore and udupi on July 6th. As incessant rain is likely to lash the district, Dakshina Kannada deputy commissioner (DC) Dr K V Rajendra and Udupi DC Kurma Rao M declared a holiday on Wednesday July 6 for all the educational institutions. It maybe recalled, a holiday was declared on Tuesday July 5 also as heavy rains lashed the twin districts.