ಬ್ರೇಕಿಂಗ್ ನ್ಯೂಸ್
05-07-22 09:35 pm Mangalore Correspondent ಕರಾವಳಿ
ಉಳ್ಳಾಲ, ಜು.5: ನಿರಂತರ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ತೊಕ್ಕೊಟ್ಟು ಬಳಿಯ ಕಲ್ಲಾಪು ಪ್ರದೇಶ ಜಲಾವೃತವಾಗಿದ್ದು ಸುಮಾರು ಐವತ್ತಕ್ಕೂ ಹೆಚ್ಚು ಮನೆಗಳಿಗೆ ಚರಂಡಿ ನೀರು ನುಗ್ಗಿ ಜನರು ತೊಂದರೆಗೀಡಾಗಿದ್ದಾರೆ.
ಕಲ್ಲಾಪು ಪ್ರದೇಶಕ್ಕೆ ಭೇಟಿ ನೀಡಿದ ಶಾಸಕ ಯು.ಟಿ ಖಾದರ್, ಪ್ರಾಕೃತಿಕ ವಿಕೋಪ ಸಭೆ ನಡೆಸದ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಗರಂ ಆಗಿದ್ದಾರೆ. ಕಲ್ಲಾಪಿನ ಸುಮಾರು ಐವತ್ತಕ್ಕೂ ಹೆಚ್ಚಿನ ಮನೆಗಳು, ಸಭಾಂಗಣ, ವಾಣಿಜ್ಯ ಕಟ್ಟಡಗಳು ಜಲಾವೃತಗೊಂಡಿವೆ. ಪ್ರತೀ ವರ್ಷವೂ ಈ ಪ್ರದೇಶಗಳು ಮಳೆಗಾಲದಲ್ಲಿ ನೆರೆಗೆ ಜಲಾವೃತಗೊಳ್ಳುತ್ತದೆ.





ಸ್ಥಳೀಯರಾದ ಮಹಮ್ಮದ್ ತಯ್ಯುಬ್ ಹೇಳುವ ಪ್ರಕಾರ ಈ ಬಾರಿ ಇನ್ನೂ ನೆರೆ ಬಂದಿಲ್ಲ. ಅಸಮರ್ಪಕ ಚರಂಡಿಗಳಲ್ಲಿ ನೀರು ಹರಿಯದ ಪರಿಣಾಮ ಪ್ರದೇಶ ಜಲಾವೃತಗೊಂಡಿದೆ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣಗೊಂಡ ವೇಳೆ ಕಲ್ಲಾಪುವಿನ ರಸ್ತೆ ಬದಿಯಲ್ಲಿದ್ದ ರಾಜ ಕಾಲುವೆ ಮುಚ್ಚಲ್ಪಟ್ಟಿದ್ದು ಇದರಿಂದ ಕಲ್ಲಾಪು ಪ್ರದೇಶದಲ್ಲಿ ಮಳೆ ನೀರು ಹರಿಯದೆ ಕೃತಕ ನೆರೆ ಉಂಟಾಗುತ್ತಿದೆ. ಇದರಿಂದ ಸ್ಥಳೀಯರು ಬಹಳಷ್ಟು ಸಮಸ್ಯೆ ಎದುರಿಸುವಂತಾಗಿದೆ ಎಂದು ಅವರು ಅಲವತ್ತುಕೊಂಡಿದ್ದಾರೆ.
ಸ್ಥಳಕ್ಕೆ ಶಾಸಕ ಯು.ಟಿ ಖಾದರ್, ಪೆರ್ಮನ್ನೂರು ಗ್ರಾಮಕರಣಿಕೆ ಶ್ವೇತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ತಕ್ಷಣ ಹೆದ್ದಾರಿ ಬದಿಯ ರಾಜಕಾಲುವೆಯನ್ನ ಸರಿಪಡಿಸಲು ಸೂಚಿಸಿದ್ದಾರೆ. ನಿರಂತರ ಮಳೆ ಸುರಿಯುತ್ತಿರುವುದರಿಂದ ಕರಾವಳಿಯಲ್ಲಿ ಬಹಳಷ್ಟು ಸಮಸ್ಯೆಗಳು ಎದುರಾಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು ಪ್ರಾಕೃತಿಕ ವಿಕೋಪ ಸಭೆ ನಡೆಸಿಲ್ಲ. ನೆರೆ ಪೀಡಿತರ ರಕ್ಷಣೆಗೆ ಬೋಟ್ ಕೂಡ ಇಲ್ಲ, ಖಾಸಗಿ ಬೋಟ್ ನವರಿಗೆ ದುಡ್ಡು ಕೊಟ್ಟು ತರಿಸುವಂತಹ ಅನಿವಾರ್ಯತೆ ಇದ್ದು ಸಚಿವರು ಆದಷ್ಟು ಬೇಗನೆ ಸಭೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ. ಸ್ಥಳೀಯ ಕೌನ್ಸಿಲರ್ ರಾಜೇಶ್ ಯು.ಬಿ, ಸ್ಥಳೀಯರಾದ ಪುರುಷೋತ್ತಮ ಕಲ್ಲಾಪು ಇದ್ದರು.
Heavy rains in Mangaluru, Kalapu flooded with water in Ullal, MLA Khader visits spot
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm