ಬ್ರೇಕಿಂಗ್ ನ್ಯೂಸ್
05-07-22 09:35 pm Mangalore Correspondent ಕರಾವಳಿ
ಉಳ್ಳಾಲ, ಜು.5: ನಿರಂತರ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ತೊಕ್ಕೊಟ್ಟು ಬಳಿಯ ಕಲ್ಲಾಪು ಪ್ರದೇಶ ಜಲಾವೃತವಾಗಿದ್ದು ಸುಮಾರು ಐವತ್ತಕ್ಕೂ ಹೆಚ್ಚು ಮನೆಗಳಿಗೆ ಚರಂಡಿ ನೀರು ನುಗ್ಗಿ ಜನರು ತೊಂದರೆಗೀಡಾಗಿದ್ದಾರೆ.
ಕಲ್ಲಾಪು ಪ್ರದೇಶಕ್ಕೆ ಭೇಟಿ ನೀಡಿದ ಶಾಸಕ ಯು.ಟಿ ಖಾದರ್, ಪ್ರಾಕೃತಿಕ ವಿಕೋಪ ಸಭೆ ನಡೆಸದ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಗರಂ ಆಗಿದ್ದಾರೆ. ಕಲ್ಲಾಪಿನ ಸುಮಾರು ಐವತ್ತಕ್ಕೂ ಹೆಚ್ಚಿನ ಮನೆಗಳು, ಸಭಾಂಗಣ, ವಾಣಿಜ್ಯ ಕಟ್ಟಡಗಳು ಜಲಾವೃತಗೊಂಡಿವೆ. ಪ್ರತೀ ವರ್ಷವೂ ಈ ಪ್ರದೇಶಗಳು ಮಳೆಗಾಲದಲ್ಲಿ ನೆರೆಗೆ ಜಲಾವೃತಗೊಳ್ಳುತ್ತದೆ.





ಸ್ಥಳೀಯರಾದ ಮಹಮ್ಮದ್ ತಯ್ಯುಬ್ ಹೇಳುವ ಪ್ರಕಾರ ಈ ಬಾರಿ ಇನ್ನೂ ನೆರೆ ಬಂದಿಲ್ಲ. ಅಸಮರ್ಪಕ ಚರಂಡಿಗಳಲ್ಲಿ ನೀರು ಹರಿಯದ ಪರಿಣಾಮ ಪ್ರದೇಶ ಜಲಾವೃತಗೊಂಡಿದೆ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣಗೊಂಡ ವೇಳೆ ಕಲ್ಲಾಪುವಿನ ರಸ್ತೆ ಬದಿಯಲ್ಲಿದ್ದ ರಾಜ ಕಾಲುವೆ ಮುಚ್ಚಲ್ಪಟ್ಟಿದ್ದು ಇದರಿಂದ ಕಲ್ಲಾಪು ಪ್ರದೇಶದಲ್ಲಿ ಮಳೆ ನೀರು ಹರಿಯದೆ ಕೃತಕ ನೆರೆ ಉಂಟಾಗುತ್ತಿದೆ. ಇದರಿಂದ ಸ್ಥಳೀಯರು ಬಹಳಷ್ಟು ಸಮಸ್ಯೆ ಎದುರಿಸುವಂತಾಗಿದೆ ಎಂದು ಅವರು ಅಲವತ್ತುಕೊಂಡಿದ್ದಾರೆ.
ಸ್ಥಳಕ್ಕೆ ಶಾಸಕ ಯು.ಟಿ ಖಾದರ್, ಪೆರ್ಮನ್ನೂರು ಗ್ರಾಮಕರಣಿಕೆ ಶ್ವೇತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ತಕ್ಷಣ ಹೆದ್ದಾರಿ ಬದಿಯ ರಾಜಕಾಲುವೆಯನ್ನ ಸರಿಪಡಿಸಲು ಸೂಚಿಸಿದ್ದಾರೆ. ನಿರಂತರ ಮಳೆ ಸುರಿಯುತ್ತಿರುವುದರಿಂದ ಕರಾವಳಿಯಲ್ಲಿ ಬಹಳಷ್ಟು ಸಮಸ್ಯೆಗಳು ಎದುರಾಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು ಪ್ರಾಕೃತಿಕ ವಿಕೋಪ ಸಭೆ ನಡೆಸಿಲ್ಲ. ನೆರೆ ಪೀಡಿತರ ರಕ್ಷಣೆಗೆ ಬೋಟ್ ಕೂಡ ಇಲ್ಲ, ಖಾಸಗಿ ಬೋಟ್ ನವರಿಗೆ ದುಡ್ಡು ಕೊಟ್ಟು ತರಿಸುವಂತಹ ಅನಿವಾರ್ಯತೆ ಇದ್ದು ಸಚಿವರು ಆದಷ್ಟು ಬೇಗನೆ ಸಭೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ. ಸ್ಥಳೀಯ ಕೌನ್ಸಿಲರ್ ರಾಜೇಶ್ ಯು.ಬಿ, ಸ್ಥಳೀಯರಾದ ಪುರುಷೋತ್ತಮ ಕಲ್ಲಾಪು ಇದ್ದರು.
Heavy rains in Mangaluru, Kalapu flooded with water in Ullal, MLA Khader visits spot
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm