ಬ್ರೇಕಿಂಗ್ ನ್ಯೂಸ್
01-10-20 03:20 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 1: ಕರೊನಾ ವೈರಸ್ಗೆ ಇಡೀ ಮಾನವ ಸಂಕುಲವೇ ನಡುಗುತ್ತಿದ್ದರೆ, ಇತ್ತ ಹಳ್ಳಿ ಪ್ರದೇಶಗಳಲ್ಲಿ ನಾಯಿಗಳಿಗೆ ಮಿದುಳು ಜ್ವರ ಕಾಣಿಸಿಕೊಂಡಿದ್ದು ಸಾಮೂಹಿಕವಾಗಿ ಬಲಿಯಾಗುತ್ತಿವೆ.
ಬೀದಿ ನಾಯಿಗಳಲ್ಲಿ ಹೆಚ್ಚಾಗಿ ಈ ವೈರಸ್ ಕಾಣಿಸಿಕೊಂಡು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಈ ರೋಗಕ್ಕೆ ನಾಯಿಗಳು ಬಲಿಯಾಗುತ್ತಿವೆ. ಪರಿಣಾಮ ಸಾಕು ನಾಯಿಗಳಿಗೂ ಈ ರೋಗ ಆವರಿಸುವ ಸಾಧ್ಯತೆ ಕಂಡುಬಂದಿದ್ದು ಜನರಲ್ಲಿ ಭೀತಿ ಕಾಡಲಾರಂಭಿಸಿದೆ. ಇದೊಂದು ವೈರಸ್ ದಾಳಿಯಾಗಿದ್ದು ಮೂರು ತಿಂಗಳ ಮೊದಲೇ ನಾಯಿಗಳು ರೋಗಕ್ಕೆ ತುತ್ತಾದರೂ ಆರಂಭದಲ್ಲಿ ಯಾವುದೇ ಲಕ್ಷಣ ಗೋಚರಿಸುವುದಿಲ್ಲ. ಕೊನೆಯ ಹತ್ತರಿಂದ ಹದಿನೈದು ದಿನಗಳಲ್ಲಿ ರೋಗ ಉಲ್ಭಣಿಸಿ ನಾಯಿಗಳು ಸಾವನ್ನಪ್ಪುತ್ತವೆ.

ವೈರಸ್ಗೆ ತುತ್ತಾದ ನಾಯಿಗಳು ರೇಬಿಸ್ ಪೀಡಿತ ನಾಯಿಯಂತೆ ವರ್ತಿಸುತ್ತಿದ್ದು, ಸಾಕು ನಾಯಿಗಳ ಮೇಲೆ ದಾಳಿ ಮಾಡುತ್ತವೆ. ಆ ಮೂಲಕ ರೋಗ ಒಂದರಿಂದ ಇನ್ನೊಂದಕ್ಕೆ ಹರಡುತ್ತಿದ್ದು, ಸಾಕುನಾಯಿ ಮಾಲೀಕರನ್ನು ಆತಂಕಕ್ಕೀಡು ಮಾಡುತ್ತಿದೆ. ಮೂಗಿನಿಂದ ಕೀವು ಬರಲು ಆರಂಭವಾಗುತ್ತದೆ ಮತ್ತು ಬಾಯಿಯಿಂದಲೂ ಕೀವು ಮಿಶ್ರಿತ ನೀರು ನಾಯಿ ಸಂಚರಿಸಿದ ಉದ್ದಕ್ಕೂ ಬೀಳುವುದರ ಪರಿಣಾಮ ರೋಗ ಹರಡುತ್ತದೆ. ಇಂಥ ಮಿದುಳು ಜ್ವರದ ಹಾವಳಿ ಈಗ ಪುತ್ತೂರು, ಸುಳ್ಯದಲ್ಲಿ ಹೆಚ್ಚಿದ್ದು ಜನರಲ್ಲಿ ಭೀತಿ ಮೂಡಿಸಿದೆ.
ಈ ರೋಗದಿಂದ ಮನುಷ್ಯರಿಗೆ ಅಪಾಯವಿಲ್ಲ. ಬೇಸಿಗೆಯಲ್ಲಿ ರೋಗ ಹೆಚ್ಚಾಗಿ ಉಲ್ಭಣಿಸುತ್ತದೆ. ರೋಗ ಬಾರದಂತೆ ಆರಂಭದಲ್ಲಿ 60 ದಿನಗಳ ಮರಿಗಳಿಗೆ ಡಿಸ್ಟೆಂಪರ್ ವ್ಯಾಕ್ಸೀನ್ ನೀಡಬೇಕಾಗುತ್ತದೆ. ಬಳಿಕ 90 ದಿನ ಹಾಗೂ ನಂತರ ಪ್ರತಿ ವರ್ಷಕ್ಕೊಮ್ಮೆ ರೋಗ ನಿರೋಧಕ ಚುಚ್ಚು ಮದ್ದು ನೀಡುವುದರ ಮೂಲಕ ನಾಯಿಗಳನ್ನು ರೋಗದಿಂದ ರಕ್ಷಿಸಬಹುದು ಪಶು ವೈದ್ಯ ಡಾ.ಧರ್ಮಪಾಲ ಹೇಳುತ್ತಾರೆ.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm