ಬ್ರೇಕಿಂಗ್ ನ್ಯೂಸ್
07-07-22 10:34 am Mangalore Correspondent ಕರಾವಳಿ
ಬಂಟ್ವಾಳ, ಜುಲೈ 7: ಮನೆ ಮೇಲೆ ಗುಡ್ಡ ಕುಸಿದ ಪ್ರಕರಣದಲ್ಲಿ ಮತ್ತಿಬ್ಬರು ಸಾವನ್ನಪ್ಪಿದ್ದು ಮೃತರ ಸಂಖ್ಯೆ ಮೂರಕ್ಕೇರಿದೆ. ಬಂಟ್ವಾಳದ ವಗ್ಗ ಬಳಿಯ ಪಂಜಿಕಲ್ಲು ಎಂಬಲ್ಲಿ ಬುಧವಾರ ಸಂಜೆ ಘಟನೆ ನಡೆದಿತ್ತು.
ಹೆನ್ರಿ ಕಾರ್ಲೊ ಎಂಬವರ ರಬ್ಬರ್ ತೋಟಕ್ಕೆ ಟ್ಯಾಪಿಂಗ್ ಕೆಲಸಕ್ಕೆಂದು ಐವರು ಕಾರ್ಮಿಕರು ಬಂದಿದ್ದರು. ತೋಟದ ಪಕ್ಕದಲ್ಲೇ ಶೆಡ್ ರೀತಿ ಮನೆ ಮಾಡಿಕೊಂಡಿದ್ದು ಸಂಜೆ ಸುರಿದ ಮಳೆಗೆ ಇವರಿದ್ದ ಮನೆಯ ಮೇಲೆ ಮಣ್ಣು , ಕಲ್ಲು ಕುಸಿದು ಬಿದ್ದಿದೆ. ಈ ವೇಳೆ, ಅಖಿಲ್ ಎಂಬ ಒಬ್ಬಾತ ಮನೆಯ ಹೊರಗಿದ್ದರಿಂದ ಬಚಾವಾಗಿದ್ದಾನೆ.


ಸಂಜೆ ಏಳು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಈ ವೇಳೆ ಮನೆಯ ಒಳಗಿದ್ದ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಒಬ್ಬ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಕಾರ್ಮಿಕರು ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ. ಮೃತರನ್ನು ಬಿಜು ಪಾಲಕ್ಕಾಡ್(45), ಸಂತೋಷ್ ಆಲಪ್ಪುಳ(46), ಬಾಬು ಕೊಟ್ಟಾಯಂ (46) ಎಂದು ಗುರುತಿಸಲಾಗಿದೆ.

ಬಿಜು ಮೃತದೇಹ ಮೊದಲು ಪತ್ತೆಯಾಗಿತ್ತು. ಆಬಳಿಕ ಬಾಬು ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಸಂತೋಷ್ ಟಾಯ್ಲೆಟ್ ಒಳಗಡೆ ಪತ್ತೆಯಾಗಿದ್ದು ರಾತ್ರಿ 11 ಗಂಟೆ ವೇಳೆಗೆ ಹೊರಗೆಳೆದು ತರಲಾಗಿತ್ತು. ಉಸಿರು ಕಟ್ಟಿದ್ದರಿಂದ ಚಿಂತಾಜನಕ ಸ್ಥಿತಿಯಲ್ಲಿದ್ದರು. ರಾತ್ರಿಯೇ ಮಂಗಳೂರಿನ ಆಸ್ಪತ್ರೆಗೆ ಕರೆತರಲಾಗಿತ್ತು. ತಲೆಯ ಭಾಗಕ್ಕೆ ಪೆಟ್ಟು ಬಿದ್ದಿದ್ದ ಸಂತೋಷ್ ಮತ್ತು ಬಾಬು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಭಾರೀ ಮಳೆಗೆ ವಗ್ಗದಲ್ಲಿ ಗುಡ್ಡ ಕುಸಿತ ; ಶೆಡ್ ನೆಲಸಮ, ಓರ್ವ ಕಾರ್ಮಿಕ ಸಾವು
The rubber tapping labourers of Kerala origin got stuck under a pile of mud as a hill collapsed on the shed where they were residing on the night of Wednesday, July 6. While three died, one person is rescued and undergoing treatment at a hospital.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm