ಬ್ರೇಕಿಂಗ್ ನ್ಯೂಸ್
07-07-22 10:34 am Mangalore Correspondent ಕರಾವಳಿ
ಬಂಟ್ವಾಳ, ಜುಲೈ 7: ಮನೆ ಮೇಲೆ ಗುಡ್ಡ ಕುಸಿದ ಪ್ರಕರಣದಲ್ಲಿ ಮತ್ತಿಬ್ಬರು ಸಾವನ್ನಪ್ಪಿದ್ದು ಮೃತರ ಸಂಖ್ಯೆ ಮೂರಕ್ಕೇರಿದೆ. ಬಂಟ್ವಾಳದ ವಗ್ಗ ಬಳಿಯ ಪಂಜಿಕಲ್ಲು ಎಂಬಲ್ಲಿ ಬುಧವಾರ ಸಂಜೆ ಘಟನೆ ನಡೆದಿತ್ತು.
ಹೆನ್ರಿ ಕಾರ್ಲೊ ಎಂಬವರ ರಬ್ಬರ್ ತೋಟಕ್ಕೆ ಟ್ಯಾಪಿಂಗ್ ಕೆಲಸಕ್ಕೆಂದು ಐವರು ಕಾರ್ಮಿಕರು ಬಂದಿದ್ದರು. ತೋಟದ ಪಕ್ಕದಲ್ಲೇ ಶೆಡ್ ರೀತಿ ಮನೆ ಮಾಡಿಕೊಂಡಿದ್ದು ಸಂಜೆ ಸುರಿದ ಮಳೆಗೆ ಇವರಿದ್ದ ಮನೆಯ ಮೇಲೆ ಮಣ್ಣು , ಕಲ್ಲು ಕುಸಿದು ಬಿದ್ದಿದೆ. ಈ ವೇಳೆ, ಅಖಿಲ್ ಎಂಬ ಒಬ್ಬಾತ ಮನೆಯ ಹೊರಗಿದ್ದರಿಂದ ಬಚಾವಾಗಿದ್ದಾನೆ.


ಸಂಜೆ ಏಳು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಈ ವೇಳೆ ಮನೆಯ ಒಳಗಿದ್ದ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಒಬ್ಬ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಕಾರ್ಮಿಕರು ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ. ಮೃತರನ್ನು ಬಿಜು ಪಾಲಕ್ಕಾಡ್(45), ಸಂತೋಷ್ ಆಲಪ್ಪುಳ(46), ಬಾಬು ಕೊಟ್ಟಾಯಂ (46) ಎಂದು ಗುರುತಿಸಲಾಗಿದೆ.

ಬಿಜು ಮೃತದೇಹ ಮೊದಲು ಪತ್ತೆಯಾಗಿತ್ತು. ಆಬಳಿಕ ಬಾಬು ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಸಂತೋಷ್ ಟಾಯ್ಲೆಟ್ ಒಳಗಡೆ ಪತ್ತೆಯಾಗಿದ್ದು ರಾತ್ರಿ 11 ಗಂಟೆ ವೇಳೆಗೆ ಹೊರಗೆಳೆದು ತರಲಾಗಿತ್ತು. ಉಸಿರು ಕಟ್ಟಿದ್ದರಿಂದ ಚಿಂತಾಜನಕ ಸ್ಥಿತಿಯಲ್ಲಿದ್ದರು. ರಾತ್ರಿಯೇ ಮಂಗಳೂರಿನ ಆಸ್ಪತ್ರೆಗೆ ಕರೆತರಲಾಗಿತ್ತು. ತಲೆಯ ಭಾಗಕ್ಕೆ ಪೆಟ್ಟು ಬಿದ್ದಿದ್ದ ಸಂತೋಷ್ ಮತ್ತು ಬಾಬು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಭಾರೀ ಮಳೆಗೆ ವಗ್ಗದಲ್ಲಿ ಗುಡ್ಡ ಕುಸಿತ ; ಶೆಡ್ ನೆಲಸಮ, ಓರ್ವ ಕಾರ್ಮಿಕ ಸಾವು
The rubber tapping labourers of Kerala origin got stuck under a pile of mud as a hill collapsed on the shed where they were residing on the night of Wednesday, July 6. While three died, one person is rescued and undergoing treatment at a hospital.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm