ಬ್ರೇಕಿಂಗ್ ನ್ಯೂಸ್
07-07-22 01:01 pm Mangalore Correspondent ಕರಾವಳಿ
ಉಳ್ಳಾಲ, ಜು.7: ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಪ್ರದೇಶದಲ್ಲಿ ಕಡಲ್ಕೊರೆತ ಮುಂದುವರೆದಿದ್ದು ಗೆಸ್ಟ್ ಹೌಸ್ ಮಾಲಕರು ಮಾತ್ರ ಸಮದ್ರ ತೀರಕ್ಕೆ ಕಲ್ಲು ಹಾಕಿ ತಮ್ಮ ಕಟ್ಟಡ ರಕ್ಷಿಸಲು ಮುಂದಾಗಿದ್ದು ಸ್ಥಳೀಯರು ಇದನ್ನ ವಿರೋಧಿಸಿ ಕಾಮಗಾರಿ ಸ್ಥಗಿತಗೊಳಿಸಿದ್ದಾರೆ.
ಬಟ್ಟಪ್ಪಾಡಿಯಲ್ಲಿ ಕಡಲ್ಕೊರೆತದ ತೀವ್ರತೆಗೆ ಬೀಚ್ ರಸ್ತೆಯೇ ಕೊಚ್ಚಿ ಹೋಗಿದ್ದು ಸಮಾರು ಐವತ್ತರಷ್ಟು ಮನೆಗಳು ಅಪಾಯದಲ್ಲಿವೆ. ಇದೇ ಜಾಗದ ತೀರದಲ್ಲಿರುವ ವಿಟಮಿನ್ ಸೀ ಹೆಸರಿನ ಗೆಸ್ಟ್ ಹೌಸ್ ಕೂಡ ಈಗ ಸಮುದ್ರಪಾಲಾಗುವ ಭೀತಿಯಲ್ಲಿದ್ದು ಅದರ ಮಾಲಕರು ಕಟ್ಟಡ ಉಳಿಸಲಿಕ್ಕಾಗಿ ಸಮುದ್ರಕ್ಕೆ ಹಿಟಾಚಿ ಯಂತ್ರದ ಮೂಲಕ ಕಲ್ಲು ಹಾಕಲಾರಂಭಿಸಿದ್ದಾರೆ. ಸರಕಾರಿ ಜಾಗದಲ್ಲಿ ಖಾಸಗಿಯವರು ನಿಯಮ ಉಲ್ಲಂಘಿಸಿ ರಕ್ಷಣಾ ಕಾರ್ಯ ನಡೆಸುವುದನ್ನ ವಿರೋಧಿಸಿದ ಸ್ಥಳೀಯರು ಕಾಮಗಾರಿಯನ್ನ ಸ್ಥಗಿತಗೊಳಿಸಿದ್ದು ತಹಶೀಲ್ದಾರ್ ಅವರಿಗೆ ಈ ಬಗ್ಗೆ ದೂರು ನೀಡಿದ್ದಾರೆ.


ಗೆಸ್ಟ್ ಹೌಸ್ ಮಾಲಕರ ವಿರುದ್ದ ಕೇಸು ದಾಖಲಿಸುವುದಾಗಿ ತಹಶೀಲ್ದಾರ್ ಸ್ಥಳೀಯರಲ್ಲಿ ಹೇಳಿದ್ದಾರೆ ಎನ್ನಲಾಗಿದೆ. ಸ್ಥಳೀಯರಾದ ಸುನಿಲ್ ಉಚ್ಚಿಲ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು ಬಡವರ ಮನೆಗಳ ರಕ್ಷಣೆಗಾಗಿ ಇಷ್ಟು ದಿವಸ ಸರಕಾರದಿಂದ ಸಣ್ಣ ರಕ್ಷಣಾ ಕಾರ್ಯವನ್ನು ಕೈಗೊಂಡಿಲ್ಲ. ಸ್ಥಳಕ್ಕೆ ಶಾಸಕ ಖಾದರ್ ನಿನ್ನೆ ಭೇಟಿ ನೀಡಿದ್ದು ರಕ್ಷಣಾ ಕಾರ್ಯದಲ್ಲಿ ತನ್ನ ಅಸಹಾಯಕತೆ ತೋರ್ಪಡಿಸಿದ್ದು ಸರಕಾರ ನಮ್ಮದಲ್ಲ. ನನಗೇನೂ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ. ಬಿಜೆಪಿ ಕಡೆಯವರು ಶಾಸಕರಿಗೆ ಸಂಪೂರ್ಣ ತಾಕತ್ತಿದೆ ಎಂದು ಹೇಳುತ್ತಾರೆ. ಹಾಗಾದರೆ ಕಡಲ್ಕೊರೆತಕ್ಕೆ ಪರಿಹಾರ ಒದಗಿಸುವವರು ಯಾರು?ಖಾಸಗಿಯವರು ಇಲ್ಲಿ ಅಕ್ರಮ ಗೆಸ್ಟ್ ಹೌಸ್ಗಳನ್ನು ನಿರ್ಮಿಸಿ ದರ್ಪ ಮೆರೆಯುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಬಟ್ಟಪ್ಪಾಡಿ ಕಡಲ್ಕೊರೆತ ಪ್ರದೇಶಕ್ಕೆ ಇಂದು ಸಂಜೆ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಮತ್ತು ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಲಿದ್ದು ಸ್ಥಳೀಯರು ಆಕ್ರೋಶ ತೋರಿಸಲು ಸಜ್ಜಾಗಿದ್ದಾರೆ.
Heavy rains in Mangalore causes extreme soil erosion at Batapady Beach in Ullal.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm