ಜುಲೈ 9ರ ವರೆಗೂ ಕರಾವಳಿ ಜಿಲ್ಲೆಗಳಿಗೆ ರೆಡ್ ಎಲರ್ಟ್ ; 48 ಗಂಟೆಗಳಲ್ಲಿ ವಿಪರೀತ ಮಳೆ ಸಾಧ್ಯತೆ, ಕಟ್ಟೆಚ್ಚರಕ್ಕೆ ಸೂಚನೆ  

07-07-22 06:10 pm       udupi Correspondent   ಕರಾವಳಿ

ಕರಾವಳಿಯಲ್ಲಿ ಧಾರಾಕಾರ ಮಳೆಯಾಗುತ್ತಿರುವಾಗಲೇ ರಾಜ್ಯ ಹವಾಮಾನ ಇಲಾಖೆಯಿಂದ ಮತ್ತೆ ರೆಡ್ ಅಲರ್ಟ್ ಘೋಷಣೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಕರಾವಳಿಯ ಮೂರೂ ಜಿಲ್ಲೆಗಳಲ್ಲಿ ಜುಲೈ 9ರ ಬೆಳಗ್ಗೆ 8.30ರ ವರೆಗೆ ರೆಡ್ ಅಲರ್ಟ್ ನೀಡಲಾಗಿದೆ.

ಉಡುಪಿ, ಜುಲೈ 7: ಕರಾವಳಿಯಲ್ಲಿ ಧಾರಾಕಾರ ಮಳೆಯಾಗುತ್ತಿರುವಾಗಲೇ ರಾಜ್ಯ ಹವಾಮಾನ ಇಲಾಖೆಯಿಂದ ಮತ್ತೆ ರೆಡ್ ಅಲರ್ಟ್ ಘೋಷಣೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಕರಾವಳಿಯ ಮೂರೂ ಜಿಲ್ಲೆಗಳಲ್ಲಿ ಜುಲೈ 9ರ ಬೆಳಗ್ಗೆ 8.30ರ ವರೆಗೆ ರೆಡ್ ಅಲರ್ಟ್ ನೀಡಲಾಗಿದೆ.

ಮುಂದಿನ 48 ಗಂಟೆಗಳಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆ ಬೀಳುವ ಸೂಚನೆ ನೀಡಲಾಗಿದೆ. 200 ಮಿಲಿ ಮೀಟರ್ ಗಿಂತಲೂ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಿರುಗಾಳಿಯ ಕಾರಣಕ್ಕೆ ಕಡಲ ತೀರದಲ್ಲಿ ರಕ್ಕಸ ಗಾತ್ರದ ಅಲೆಗಳು ಬರಲಿದ್ದು, ಮೀನುಗಾರರು ಸಮದ್ರ, ನದಿಗಳಿಗೆ ತೆರಳಬಾರದು. ಪ್ರವಾಸಿಗರು ಕೂಡ ಬೀಚ್ ಪ್ರದೇಶಕ್ಕೆ ಹೋಗಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದೇ ವೇಳೆ, ಮೂರೂ ಜಿಲ್ಲೆಗಳಲ್ಲಿ ಎನ್ ಡಿಆರ್ ಎಫ್ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆಯನ್ನೂ ಸನ್ನದ್ಧ ಇರಿಸಲಾಗಿದೆ.

ಈಗಾಗಲೇ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಸೌಪರ್ಣಿಕಾ ನದಿಯಲ್ಲಿ ನೆರೆ ಕಾಣಿಸಿಕೊಂಡಿರುವುದರಿಂದ ಅಲ್ಲಿನ ನಾವುಂದ ಗ್ರಾಮದಲ್ಲಿ ಹಲವಾರು ಮನೆಗಳು ಮುಳುಗಡೆಯಾಗಿವೆ. ಅಲ್ಲಿನ ಜನರನ್ನು ಎನ್ ಡಿಆರ್ ಎಫ್ ಸಿಬಂದಿ ಸುರಕ್ಷಿತವಾಗಿ ತೆರವು ಮಾಡುವ ಕಾರ್ಯ ಮಾಡುತ್ತಿದ್ದಾರೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ನದಿಗಳೂ ತುಂಬಿ ಹರಿಯುತ್ತಿದ್ದು, ತೀರದ ಪ್ರದೇಶಗಳಲ್ಲಿ ನೆರೆ ಕಾಣಿಸಿಕೊಂಡಿದೆ.

Rain fury continued in the coastal part of Karnataka on Thursday July 7. A red alert was declared on July 7. The same is now extended to July 8 and 9. In the next 48 hours, copious amounts of rainfall is going to shower in all coastal districts as per the weather forecast announced by Indian Meteorological Department (IMD). Red alert is declared in three districts of Dakshina Kannada, Udupi and Uttara Kannada. More than 204 mm of rain is expected to fall during this period. Orange alert is declared on July 10 and 11.